Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...