Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....