Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...