Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...