Homeಮುಖಪುಟ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ...’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತರಾಟೆಗೆ ತೆಗೆದುಕೊಂಡಿದ್ದಾರೆ.
‘ಬಿಜೆಪಿಯು ಹತಾಶೆಯ ಕಾರ್ಯದಲ್ಲಿ ಜೆಎಂಎಂ ಮುಖ್ಯಸ್ಥರನ್ನು ಬೆದರಿಸಲು ಪ್ರಯತ್ನಿಸುತ್ತಿದೆ’ ಎಂದು ಸ್ಟಾಲಿನ್ ಹೇಳಿದರೆ, ‘ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಎಲ್ಲರನ್ನು ಜೈಲಿಗೆ ತಳ್ಳುತ್ತಿದೆ’ ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, ‘ಹೇಮಂತ್ ಸೊರೇನ್ ಅವರ ಬಂಧನವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರತೀಕಾರದ ಸ್ಪಷ್ಟ ಪ್ರದರ್ಶನವಾಗಿದೆ’ ಎಂದು ಹೇಳಿದ್ದಾರೆ.

‘ಗೌರವಾನ್ವಿತ ಜಾರ್ಖಂಡ್ ಮುಖ್ಯಮಂತ್ರಿ ತಿರು ಹೇಮಂತ್ ಸೊರೇನ್ ಅವರ ಬಂಧನವು ಕೇಂದ್ರ ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಅಬ್ಬರದ ಪ್ರದರ್ಶನವಾಗಿದೆ. ಬುಡಕಟ್ಟು ನಾಯಕನಿಗೆ ಕಿರುಕುಳ ನೀಡಲು ತನಿಖಾ ಸಂಸ್ಥೆಗಳನ್ನು ಬಳಸಲಾಗುತ್ತಿದೆ. ಈ ಕೃತ್ಯವು ಹತಾಶೆ ಮತ್ತು ಅಧಿಕಾರದ ದುರುಪಯೋಗವನ್ನು ಹೊಂದಿದೆ. ಬಿಜೆಪಿಯ ಕೊಳಕು ತಂತ್ರಗಳು ವಿರೋಧದ ಧ್ವನಿಗಳನ್ನು ಮೌನಗೊಳಿಸುವುದಿಲ್ಲ’ ಎಂದು ಅವರು ಬರೆದುಕೊಂಡಿದ್ದಾರೆ.

‘ಬಿಜೆಪಿಯ ಸೇಡಿನ ರಾಜಕಾರಣದ ಹೊರತಾಗಿಯೂ, ತಿರು ಹೇಮಂತ್ ಸೋರೆನ್ ಅವರು ದೃಢವಾಗಿ ನಿಂತಿದ್ದು, ತಲೆಬಾಗಲು ನಿರಾಕರಿಸುತ್ತಾರೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಅವರ ಸ್ಥೈರ್ಯವು ಶ್ಲಾಘನೀಯವಾಗಿದೆ. ಬಿಜೆಪಿಯ ಗೂಂಡಾಗಿರಿ ತಂತ್ರಗಳ ವಿರುದ್ಧ ಹೋರಾಡುವ ಅವರ ಸಂಕಲ್ಪವು ಸ್ಫೂರ್ತಿಯಾಗಿದೆ’ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ:

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುತ್ತಿದೆ ಎಂದು ಬ್ಯಾನರ್ಜಿ ಗುರುವಾರ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಹೊತ್ತಿನಲ್ಲಿ ಹೇಮಂತ್ ಸೊರೇನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧಿಸಿತ್ತು. ಅವರ ಸರ್ಕಾರದಲ್ಲಿ ಸಚಿವರಾಗಿರುವ ಚಂಪೈ ಸೊರೇನ್ ಅವರು ಜೆಎಂಎಂ-ಕಾಂಗ್ರೆಸ್ ಸರ್ಕಾರದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ.

ಇಡಿ ಕ್ರಮಕ್ಕೆ ಹಲವು ವಿರೋಧ ಪಕ್ಷದ ನಾಯಕರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೆಎಂಎಂ ನಾಯಕನ ಬಂಧನದ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್, ‘ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳ ಭಾಗವಾಗಿದೆ. ಇಡಿ ಮತ್ತು ಸಿಬಿಐ (ಕೇಂದ್ರ ತನಿಖಾ ಸಂಸ್ಥೆ) ಸರ್ಕಾರದ ಪ್ರಮುಖ ಅಸ್ತ್ರಗಳಾಗಿವೆ..’ ಎಂದು ಹೇಳಿದ್ದಾರೆ.

‘ಈ ಬಂಧನವು ಬಿಜೆಪಿಯ ಬುಡಕಟ್ಟು ವಿರೋಧಿ ಮನಸ್ಥಿತಿಗೆ ಬಗೆದ ದ್ರೋಹ’ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

‘ಹೇಮಂತ್ ಸೊರೇನ್ ಅವರ ಬಂಧನವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವ ಪ್ರಯತ್ನವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಇನ್ನೂ ಅನೇಕ ವಿರೋಧ ಪಕ್ಷದ ನಾಯಕರನ್ನು ಬಂಧಿಸುವುದು ನನಗೆ ಖಚಿತವಾಗಿದೆ…’ ಎಂದು ದೆಹಲಿ ಸಚಿವೆ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ‘ಎಕ್ಸ್’ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಜಾರ್ಖಂಡ್: ನ್ಯಾಯಾಂಗ ಬಂಧನಕ್ಕೆ ಹೇಮಂತ್, ಸರ್ಕಾರ ರಚಿಸುವಂತೆ ಚಂಪೈಗೆ ರಾಜ್ಯಪಾಲರಿಂದ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...