Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...