Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...