Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...