Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...