Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...