Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...