Homeಕರ್ನಾಟಕಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದೆ: ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮಂಡ್ಯ ಭಾಗದಲ್ಲಿ ಗಲಾಟೆಯ ಮೂಲಕವೇ ಬಿಜೆಪಿ ಅಸ್ತಿತ್ವಕ್ಕೆ ಬರಲು ಯತ್ನಿಸುತ್ತಿದ್ದು, ತನ್ನ ಮೈತ್ರಿಕೂಟದ ಜೆಡಿಎಸ್ ಪಕ್ಷಕ್ಕೆ ನೆಪ ಮಾತ್ರಕ್ಕೆ ಇರುವ ಜಾತ್ಯಾತೀತ ಎಂಬ ರೆಕ್ಕೆಗಳನ್ನೂ ಸಹ ಒಂದೊಂದಾಗಿ ಕಿತ್ತು ಹಾಕುವ ಕೆಲಸ ಮಾಡುತ್ತಿದೆ. ಬಹುಶಃ ಮುಂದೆ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾದಂತೆ ಇರುವ ಜೆಡಿಎಸ್ ನವರಿಗೂ ಅದೇ ಬೇಕಾದಂತೆ ಕಾಣುತ್ತಿದ್ದು, ಇವರ ಬಗ್ಗೆ ಜನ ಸಾಮಾನ್ಯರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಸಮಾಜದಲ್ಲಿ ಇರಲೇಬೇಕಾದ ಸಂವಿಧಾನಿಕ ಐಕ್ಯತೆಯ ಮಹತ್ವವನ್ನು ಅರಿಯಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಮದ್ದೂರಿನ ಉದ್ವಿಗ್ನತೆಯ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, “2016ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹೂಡಿದ ತಂತ್ರ ಮತ್ತು ಕುತಂತ್ರದ ಹೆಸರೇ ಇದು ‘ಹಿಂದೂ ವಿರೋಧಿ ಸರ್ಕಾರ ಎಂಬುದು”.

“ಈ ಕುತಂತ್ರ ಆರಂಭಗೊಂಡ ದಿನದಿಂದ ಹಲವು ಅಮಾಯಕರ ಸಾವುಗಳು ಸಂಭವಿಸಿದವು. ಶಿರಸಿಯ ಪರೇಶ್ ಮೇಸ್ತಾ ಎಂಬ ಯುವಕನಿಂದ ಆರಂಭಗೊಂಡು ಶರತ್ ಮಡಿವಾಳ ಎಂಬ ಯುವಕನವರೆಗೆ ಜರುಗಿದ ಸಾವುಗಳು ಮತ್ತು ಅವುಗಳ ವಿಷಯದಲ್ಲಿ ಬಿಜೆಪಿಯು ಮಾಡಿದ ಶವ ರಾಜಕೀಯವು ಇಂದಿಗೂ ನಮ್ಮ ಕಣ್ಣ ಮುಂದಿದೆ” ಎಂದಿದ್ದಾರೆ.

“ಪರೇಶ್ ಮೇಸ್ತಾ ವಿಷಯದಲ್ಲಿ ಸಿಬಿಐ ತನಿಖೆಯು ಜರುಗಿ ಕಡೆಗೆ ಅದು ಕೊಲೆಯಲ್ಲ, ಸಹಜ ಸಾವು ಎಂದು ವರದಿ ಬಂದಿತು. ಇನ್ನು ಚುನಾವಣೆ ಸಂದರ್ಭದಲ್ಲಿ ಸತ್ತವರ ಮನೆಯನ್ನು ಬಳಸಿ ರಾಜಕೀಯ ಮಾಡಿದ ಬಿಜೆಪಿಗರು ನಂತರ ಅತ್ತ ಸುಳಿಯಲೂ ಇಲ್ಲ. ಇದನ್ನು ನಾನಲ್ಲ ಬದಲಿಗೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೇ ಹಿಂದೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಇದೀಗ ನಾಡಿನ ಐಕ್ಯತೆಗಾಗಿ ಮಾಡಬೇಕಿದ್ದ ದಸರಾ ಮತ್ತು ಗಣೇಶ ಹಬ್ಬವನ್ನೂ ಕೂಡಾ ಧರ್ಮದ ಕಲಹಕ್ಕೆ ಬಳಸಿಕೊಳ್ಳುವ ಕೆಲಸವನ್ನು ಮಾಡಲು ಆರಂಭಿಸಿರುವ ಬಿಜೆಪಿಗರು, ಚುನಾವಣಾ ಅಧಿಕಾರವನ್ನು ಪಡೆಯಲು ಜನಪರ ಪ್ರಣಾಳಿಕೆಗಳನ್ನು ಮುಂದೆ ತಾರದೇ ಕೇವಲ ಹಿಂದೂ – ಮುಸ್ಲಿಂ ಜಗಳವನ್ನು ಮುನ್ನಲೆಗೆ ತರುತ್ತಿರುವುದನ್ನು ನೋಡಿದರೆ ಇವರಿಗೆ ಯಾವುದೇ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿ ಇಲ್ಲ ಎಂಬ ಸಂಗತಿಯು ಸ್ಪಷ್ಟವಾಗಿ ಅರಿವಾಗುತ್ತಿದೆ” ಎಂದು ಟೀಕಿಸಿದ್ದಾರೆ.

“ಕೊರೋನಾ ಸಂದರ್ಭದಲ್ಲಿ ಸಾಮಾನ್ಯ ಜನರು ಅನುಭವಿಸಿದ ಬವಣೆಯ ಬಗ್ಗೆ ಎಲ್ಲರಿಗೂ ಗೊತ್ತು.‌ ಕನಿಷ್ಠ ಪಕ್ಷ ಮನೆಯಿಂದ ಹೊರಗೆ ಬಾರದ ಸ್ಥಿತಿ, ದುಡಿಯಲು ಆಗದ ಸ್ಥಿತಿ ಮತ್ತು ಮನುಷ್ಯರನ್ನು ಪರಸ್ಪರ ಮುಟ್ಟಿಸಿಕೊಳ್ಳಲೂ ಆತಂಕದ ಸ್ಥಿತಿಯ ನಡುವೆ ಬಿಜೆಪಿಗರ ಕೊರೋನಾ ಭ್ರಷ್ಟಾಚಾರಕ್ಕೆ ಸಿಲುಕಿ ಜನ ತತ್ತರಿಸಿದ್ದರು. ದುಡಿಯುವ ಜನರ ಪ್ರಾಥಮಿಕ ಬದುಕು ಇಷ್ಟೊಂದು ತೊಂದರೆಗೆ ಒಳಗಾಗಿದ್ದರಿಂದಲೇ ನಮ್ಮ ಸರ್ಕಾರವು ಅವರಿಗೆ ಗ್ಯಾರಂಟಿ ರೂಪದಲ್ಲಿ ಅವರ ಬದುಕಿಗೆ ಕನಿಷ್ಠ ಆದಾಯವನ್ನು ನಿಗದಿ ಪಡಿಸಿತು. ಈ ಸಮಸ್ಯೆಯು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಎಲ್ಲ ಪಕ್ಷದ ಜನರಿಗೂ ಸಮಾನವಾಗಿತ್ತು. ಆದರೆ, ಈಗ ನೋಡಿದರೆ ಇದ್ಯಾವುದರ ಪರಿವೆಯೇ ಇಲ್ಲದೇ ಇವರು ಈ ರೀತಿ ಕಲಹ ಎಬ್ಬಿಸುವುದನ್ನು ನೋಡಿದರೆ ಇವರು ಕಾಲ ಕಲಿಸುವ ಪಾಠದಿಂದ ಏನು ಕಲಿತರೆಂದು ಗೊಂದಲವಾಗುತ್ತದೆ” ಎಂದಿದ್ದಾರೆ.

“ಇನ್ನು ಸಾಮಾಜಿಕವಾಗಿ ನೋಡುವಾಗಲೂ ಹಿಂದುಳಿದ ವರ್ಗಗಳ ಕೈಲಿ ಇರುವ ಅಧಿಕಾರಕ್ಕೆ ಪಡುವ ಅಸೂಯೆಯೂ ಕೂಡಾ ಇಂತಹ ಗಲಭೆಗಳಿಗೆ ಮುಖ್ಯ ಕಾರಣ ಎಂದು ನನಗೆ ಅನಿಸುತ್ತದೆ. ಅದಕ್ಕಾಗಿಯೇ ಇವರು ಮುಸ್ಲಿಂ ಮತ್ತು ಕ್ರೈಸ್ತರ ಯಾವ ವಿಷಯವನ್ನೂ ಕೂಡಾ ರಾಜಕೀಯ ಮಾಡದೇ ಬಿಡಲು ಸಿದ್ಧರಿಲ್ಲ. ದೇಶಕ್ಕೆ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ವ್ಯಕ್ತಿಯ ವಿಷಯದಲ್ಲೂ ಕನಿಷ್ಠ ಪ್ರೀತಿ ಗೌರವ ಇಟ್ಟುಕೊಳ್ಳದ ಕನ್ನಡದ ಲೇಖಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರಿಗೆ ಇನ್ನೇನು ಹೇಳಬೇಕೆಂದು ತಿಳಿಯದಾಗಿದೆ”ಎಂದು ಹೇಳಿದ್ದಾರೆ.

“ಅತ್ತ ಸರ್ಕಾರ ಬಂದಾಗಿನಿಂದಲೂ ‘ಭಾರತೀಯ ಜನಗಳಾದ ನಾವು’ ಎಂಬ ಭಾವನೆಯನ್ನು ಮೂಡಿಸಲು, ಸಂವಿಧಾನದ ಪೀಠಿಕೆಯನ್ನು ಓದಿಸುವುದು, ಎಲ್ಲರನ್ನೂ ಒಳಗೊಂಡ ಹಾಗೆ ಮಾನವ ಸರಪಳಿಯನ್ನು ರಚಿಸುವ ಕೆಲಸದ ಜೊತೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವ ಪ್ರಯತ್ನವನ್ನು ಮಾಡಲಾಗಿದೆ.ಹೀಗಿದ್ದರೂ, ಕೂಡಾ ಇವರು ಭಾವೈಕ್ಯತೆಯನ್ನು ಮೂಲೆಗೆ ಎಸೆದು ಮತ್ತೆ ಮತ್ತೆ ಐಕ್ಯತೆಗಾಗಿಯೇ ಆಚರಿಸಲ್ಪಡುವ ಗಣೇಶ ಹಬ್ಬವನ್ನೂ ಕೂಡಾ ಜನಾಂಗೀಯ ಮತ್ತು ಧಾರ್ಮಿಕ ದ್ವೇಷಕ್ಕಾಗಿ ಬಳಸುವುದು ಬಹು ಅಪಾಯಕಾರಿ ಸಂಗತಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಚುನಾವಣೆಗಾಗಿಯೇ ನಡೆಸಲಾಗುವ ಗಲಭೆಗಳಲ್ಲಿ ಎಲ್ಲಿಯೂ ಸಹ ದುಡಿದು ತಿನ್ನುವ ಜನರು ಇಲ್ಲ. ಅವರಿಗೆ ಈ ಸಂಗತಿಯಲ್ಲಿ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲ ಜನರ ಬದುಕು ನಮಗೆ ಅನವಶ್ಯಕ, ಗಲಭೆ ಎಬ್ಬಿಸುವುದೇ ನಮ್ಮ ಜೀವನದ ಏಕೈಕ ಗುರಿ ಎಂದು ಬಿಜೆಪಿಗರು ಭಾವಿಸಿದರೆ ಅದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವೇನಲ್ಲ ಎಂಬುದು ಎಲ್ಲರಿಗೂ ಗೊತ್ತು” ಎಂದು ಹೆಚ್‌.ಸಿ ಮಹದೇವಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...