Homeಮುಖಪುಟಬಿಜೆಪಿಯಿಂದ ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯುವ ಪ್ರಯತ್ನ: ಮಮತಾ ಬ್ಯಾನರ್ಜಿ

ಬಿಜೆಪಿಯಿಂದ ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯುವ ಪ್ರಯತ್ನ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಭಾರತೀಯ ಕ್ರಿಕೆಟ್ ತಂಡ ಸೇರಿದಂತೆ ದೇಶಾದ್ಯಂತ ವಿವಿಧ ಸಂಸ್ಥೆಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಅಭ್ಯಾಸದ ವೇಳೆ ತೊಡುವ ಜೆರ್ಸಿಗಳು ಈಗ ಕೇಸರಿ ಬಣ್ಣದ್ದಾಗಿವೆ.

ಸೆಂಟ್ರಲ್ ಕೋಲ್ಕತ್ತಾದ ಪೊಸ್ತಾ ಬಝಾರ್‌ನಲ್ಲಿ ನಡೆದ ಜಗಧಾತ್ರಿ ಪೂಜೆಯನ್ನು ಉದ್ಘಾಟಿಸಿ ಮಾತನಾಡಿದ ಬ್ಯಾನರ್ಜಿ, ಟೀಂ ಇಂಡಿಯಾದ ಅಭ್ಯಾಸ ಜೆರ್ಸಿಗಳಲ್ಲಿ ಮಾತ್ರವಲ್ಲದೆ, ಮೆಟ್ರೋ ಸ್ಟೇಷನ್‌ಗಳಿಗೂ ಕೇಂದ್ರ ಸರ್ಕಾರ ಕೇಸರಿ ಬಣ್ಣ ಹೊಡೆಸುತ್ತಿದೆ ಎಂದು ಆರೋಪಿಸಿದರು.

ಅವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಾವು ಅಭಿಮಾನ ಹೊಂದಿದ್ದೇವೆ, ಅವರು ವಿಶ್ವಕಪ್ ಗೆಲ್ಲುತ್ತಾರೆಂದು ನಂಬುತ್ತೇನೆ, ಆದರೆ, ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ, ಮೆಟ್ರೋ ಸ್ಟೇಷನ್‌ಗಳಿಗೂ ಕೇಸರಿ ಬಳಿಯಲಾಗಿದೆ, ಇದನ್ನು ಒಪ್ಪಲಾಗದು ಎಂದು ಬ್ಯಾನರ್ಜಿ ಹೇಳಿದ್ದಾರೆ.

“ಅವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವರು ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ ಅವರು (ಬಿಜೆಪಿ) ಅಲ್ಲಿಯೂ ಕೇಸರಿ ಬಣ್ಣಗಳನ್ನು ತಂದರು. ನಮ್ಮ ಹುಡುಗರು ಈಗ ಕೇಸರಿ ಬಣ್ಣದ ಜರ್ಸಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ. ಇದು ಸ್ವೀಕಾರಾರ್ಹವಲ್ಲ” ಎಂದು ಕಿಡಿಕಾರಿದರು.

ದೇಶವು ಇಲ್ಲಿನ ಜನರಿಗೆ ಸೇರಿದ್ದೇ ವಿನಃ, ಬಿಜೆಪಿಯ ಜನರಿಗೆ ಸೇರಿದ್ದಲ್ಲ. ಅಧಿಕಾರ ಬರುತ್ತದೆ ಹೋಗುತ್ತದೆ, ಆದರೆ, ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದಿದ್ದಾರೆ.

”ಬಿಜೆಪಿಯವರು ಪ್ರತಿಮೆಗಳನ್ನು ಸ್ಥಾಪಿಸುವುದರಲ್ಲಿ ನನಗೆ ಯಾವುದೇ ಸಮಸ್ಯೆಗಳಿಲ್ಲ, ಆದರೆ ಅವರು ಎಲ್ಲವನ್ನೂ ಕೇಸರಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾಯಾವತಿ ಅವರ ಪ್ರತಿಮೆಯನ್ನು ನಾನು ಒಮ್ಮೆ ನೋಡಿದ್ದೇನೆ, ಅದರ ನಂತರ, ನಾನು ಏನನ್ನೂ ಕೇಳಲಿಲ್ಲ. ಈ ನಾಟಕಗಳು ಯಾವುದಕ್ಕೂ ಪ್ರಯೋಜಕ್ಕೆ ಬರುವುದಿಲ್ಲ” ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮೊದಲ ಪುಟದ ಜಾಹೀರಾತುಗಳಿಗೆ ಕೋಟಿಗಟ್ಟಲೆ ಖರ್ಚು ಮಾಡುತ್ತಿದೆ ಆದರೆ “ರಾಜ್ಯಕ್ಕೆ ಬರಬೇಕಿದ್ದ ಬಾಕಿ ಹಣವನ್ನು ನಿಲ್ಲಿಸಿದೆ, ಹೀಗಾಗಿ ರಾಜ್ಯದಲ್ಲಿ ಸಾವಿರಾರು (MGNREGA) ಕಾರ್ಮಿಕರು ಉದ್ಯೋಗದಿಂದ ವಂಚಿತರಾಗಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಇದನ್ನೂ ಓದಿ: ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದಲೇ ಸರ್ಕಾರ ನಡೆಸಬೇಕೇ?: ಜನರು ತೀರ್ಮಾನಿಸಲಿ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...