Homeಮುಖಪುಟಬಿಜೆಪಿಯಿಂದ ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯುವ ಪ್ರಯತ್ನ: ಮಮತಾ ಬ್ಯಾನರ್ಜಿ

ಬಿಜೆಪಿಯಿಂದ ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯುವ ಪ್ರಯತ್ನ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಭಾರತೀಯ ಕ್ರಿಕೆಟ್ ತಂಡ ಸೇರಿದಂತೆ ದೇಶಾದ್ಯಂತ ವಿವಿಧ ಸಂಸ್ಥೆಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಅಭ್ಯಾಸದ ವೇಳೆ ತೊಡುವ ಜೆರ್ಸಿಗಳು ಈಗ ಕೇಸರಿ ಬಣ್ಣದ್ದಾಗಿವೆ.

ಸೆಂಟ್ರಲ್ ಕೋಲ್ಕತ್ತಾದ ಪೊಸ್ತಾ ಬಝಾರ್‌ನಲ್ಲಿ ನಡೆದ ಜಗಧಾತ್ರಿ ಪೂಜೆಯನ್ನು ಉದ್ಘಾಟಿಸಿ ಮಾತನಾಡಿದ ಬ್ಯಾನರ್ಜಿ, ಟೀಂ ಇಂಡಿಯಾದ ಅಭ್ಯಾಸ ಜೆರ್ಸಿಗಳಲ್ಲಿ ಮಾತ್ರವಲ್ಲದೆ, ಮೆಟ್ರೋ ಸ್ಟೇಷನ್‌ಗಳಿಗೂ ಕೇಂದ್ರ ಸರ್ಕಾರ ಕೇಸರಿ ಬಣ್ಣ ಹೊಡೆಸುತ್ತಿದೆ ಎಂದು ಆರೋಪಿಸಿದರು.

ಅವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಾವು ಅಭಿಮಾನ ಹೊಂದಿದ್ದೇವೆ, ಅವರು ವಿಶ್ವಕಪ್ ಗೆಲ್ಲುತ್ತಾರೆಂದು ನಂಬುತ್ತೇನೆ, ಆದರೆ, ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ, ಮೆಟ್ರೋ ಸ್ಟೇಷನ್‌ಗಳಿಗೂ ಕೇಸರಿ ಬಳಿಯಲಾಗಿದೆ, ಇದನ್ನು ಒಪ್ಪಲಾಗದು ಎಂದು ಬ್ಯಾನರ್ಜಿ ಹೇಳಿದ್ದಾರೆ.

“ಅವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವರು ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ ಅವರು (ಬಿಜೆಪಿ) ಅಲ್ಲಿಯೂ ಕೇಸರಿ ಬಣ್ಣಗಳನ್ನು ತಂದರು. ನಮ್ಮ ಹುಡುಗರು ಈಗ ಕೇಸರಿ ಬಣ್ಣದ ಜರ್ಸಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ. ಇದು ಸ್ವೀಕಾರಾರ್ಹವಲ್ಲ” ಎಂದು ಕಿಡಿಕಾರಿದರು.

ದೇಶವು ಇಲ್ಲಿನ ಜನರಿಗೆ ಸೇರಿದ್ದೇ ವಿನಃ, ಬಿಜೆಪಿಯ ಜನರಿಗೆ ಸೇರಿದ್ದಲ್ಲ. ಅಧಿಕಾರ ಬರುತ್ತದೆ ಹೋಗುತ್ತದೆ, ಆದರೆ, ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದಿದ್ದಾರೆ.

”ಬಿಜೆಪಿಯವರು ಪ್ರತಿಮೆಗಳನ್ನು ಸ್ಥಾಪಿಸುವುದರಲ್ಲಿ ನನಗೆ ಯಾವುದೇ ಸಮಸ್ಯೆಗಳಿಲ್ಲ, ಆದರೆ ಅವರು ಎಲ್ಲವನ್ನೂ ಕೇಸರಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾಯಾವತಿ ಅವರ ಪ್ರತಿಮೆಯನ್ನು ನಾನು ಒಮ್ಮೆ ನೋಡಿದ್ದೇನೆ, ಅದರ ನಂತರ, ನಾನು ಏನನ್ನೂ ಕೇಳಲಿಲ್ಲ. ಈ ನಾಟಕಗಳು ಯಾವುದಕ್ಕೂ ಪ್ರಯೋಜಕ್ಕೆ ಬರುವುದಿಲ್ಲ” ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮೊದಲ ಪುಟದ ಜಾಹೀರಾತುಗಳಿಗೆ ಕೋಟಿಗಟ್ಟಲೆ ಖರ್ಚು ಮಾಡುತ್ತಿದೆ ಆದರೆ “ರಾಜ್ಯಕ್ಕೆ ಬರಬೇಕಿದ್ದ ಬಾಕಿ ಹಣವನ್ನು ನಿಲ್ಲಿಸಿದೆ, ಹೀಗಾಗಿ ರಾಜ್ಯದಲ್ಲಿ ಸಾವಿರಾರು (MGNREGA) ಕಾರ್ಮಿಕರು ಉದ್ಯೋಗದಿಂದ ವಂಚಿತರಾಗಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಇದನ್ನೂ ಓದಿ: ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದಲೇ ಸರ್ಕಾರ ನಡೆಸಬೇಕೇ?: ಜನರು ತೀರ್ಮಾನಿಸಲಿ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...