Homeಮುಖಪುಟಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

ಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರನ್ನು ಬೆಂಗಳೂರಿನ ವಿಮಾನ ನಿಲ್ಧಾಣದಿಂದ ವಾಪಾಸ್ಸು ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಬಿಜೆಪಿಯು ತನ್ನ ಟೀಕಾಕಾರರಿಗೆ ‘ಕಿರುಕುಳ ನೀಡಲು ಮತ್ತು ದಂಡನೆಗೆ ಒಳಪಡಿಸಲು’ ಪಾಸ್‌ಪೋರ್ಟ್‌ಗಳನ್ನು ‘ಅಸ್ತ್ರಗಳಾಗಿ’ ಬಳಸುತ್ತಿದ್ದು, ಪ್ರಯಾಣದ ಮೇಲೆ ‘ಅಕ್ರಮವಾಗಿ’ ನಿಷೇಧ ಹೇರುತ್ತಿದೆ ಎಂದು ವಾಗ್ದಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೆಹಬೂಬಾ ಮುಫ್ತಿ, ಬಿಜೆಪಿ ತನ್ನ ಟೀಕಾಕಾರರಿಗೆ ಕಿರುಕುಳ ನೀಡಲು ಮತ್ತು ಶಿಕ್ಷಿಸಲು ಪಾಸ್‌ಪೋರ್ಟ್‌ಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು, ಪ್ರಯಾಣದ ಮೇಲೆ ಅಕ್ರಮವಾಗಿ ನಿಷೇಧ ಹೇರುತ್ತಿದೆ. ಆತಿಶ್ ತಸೀರ್, ಅಶೋಕ್ ಸ್ವೈನ್ ಮತ್ತು ಈಗ ನಿತಾಶಾ ಕೌಲ್ ಅವರಿಗೆ ನಿಷೇಧವನ್ನು ವಿಧಿಸಲಾಗಿದೆ. ನಿತಾಶಾ ಅವರು ದ್ವೇಷಪೂರಿತ ವಿಭಜಕ ಸಿದ್ಧಾಂತವನ್ನು ಒಪ್ಪದ ಕಾರಣದಿಂದಲೇ ಆಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ, ನಾವು ಅವರ ಜೊತೆ ನಿಲ್ಲಬೇಕಿದೆ ಎಂದು ಮುಫ್ತಿ ಎಕ್ಸ್‌ನಲ್ಲಿ ಹೇಳಿದ್ದಾರೆ.

ಲಂಡನ್ ಮೂಲದ ಕಾಶ್ಮೀರಿ ಪಂಡಿತ್ ಶಿಕ್ಷಣ ತಜ್ಞೆ ನಿತಾಶಾ ಕೌಲ್ ತನ್ನ ಎಕ್ಸ್‌ನಲ್ಲಿನ ಪೋಸ್ಟ್‌ಗಳ ಸರಣಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತನಗೆ ಯಾವುದೇ ಕಾರಣವನ್ನು ನೀಡದೆ ನನಗೆ ಭಾರತಕ್ಕೆ ಪ್ರವೇಶವನ್ನು ನಿರಕರಿಸಿದ್ದಾರೆ. ಭಾರತ ಸರ್ಕಾರದಿಂದ ನಿರ್ಬಂಧದ ಬಗ್ಗೆ ಈ ಮೊದಲು ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ನೀಡಲಾಗಿಲ್ಲ. 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಕಳೆದ ವರ್ಷ ಸ್ವೀಡನ್ ಮೂಲದ ಪ್ರೊಫೆಸರ್ ಅಶೋಕ್ ಸ್ವೈನ್ ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಸ್ತುತ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸ್ವೈನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದರು.

ಪತ್ರಕರ್ತ ತವ್ಲೀನ್ ಸಿಂಗ್ ಮತ್ತು ದಿವಂಗತ ಪಾಕಿಸ್ತಾನಿ ರಾಜಕಾರಣಿ ಮತ್ತು ಉದ್ಯಮಿ ಸಲ್ಮಾನ್ ತಸೀರ್ ಅವರ ಪುತ್ರ ಮತ್ತು ಬರಹಗಾರ ಆತಿಶ್ ತಸೀರ್ ಯುಕೆ ಪ್ರಜೆ. ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಟೈಮ್ ಮ್ಯಾಗಜೀನ್ ಕವರ್ ಸ್ಟೋರಿಯಲ್ಲಿ ತಸೀರ್, ಪ್ರಧಾನಿ ಮೋದಿಯನ್ನು ‘ಭಾರತದ ಡಿವೈಡರ್‌ ಇನ್ ಚೀಫ್” ಎಂದು ಕರೆದಿದ್ದರು ಮತ್ತು ಭಾರತವು ಅವರ ಸರ್ಕಾರವನ್ನು ಇನ್ನೂ ಐದು ವರ್ಷಗಳನ್ನು ಸಹಿಸಬಹುದೇ? ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...