Homeಮುಖಪುಟಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

ಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರನ್ನು ಬೆಂಗಳೂರಿನ ವಿಮಾನ ನಿಲ್ಧಾಣದಿಂದ ವಾಪಾಸ್ಸು ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಬಿಜೆಪಿಯು ತನ್ನ ಟೀಕಾಕಾರರಿಗೆ ‘ಕಿರುಕುಳ ನೀಡಲು ಮತ್ತು ದಂಡನೆಗೆ ಒಳಪಡಿಸಲು’ ಪಾಸ್‌ಪೋರ್ಟ್‌ಗಳನ್ನು ‘ಅಸ್ತ್ರಗಳಾಗಿ’ ಬಳಸುತ್ತಿದ್ದು, ಪ್ರಯಾಣದ ಮೇಲೆ ‘ಅಕ್ರಮವಾಗಿ’ ನಿಷೇಧ ಹೇರುತ್ತಿದೆ ಎಂದು ವಾಗ್ದಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೆಹಬೂಬಾ ಮುಫ್ತಿ, ಬಿಜೆಪಿ ತನ್ನ ಟೀಕಾಕಾರರಿಗೆ ಕಿರುಕುಳ ನೀಡಲು ಮತ್ತು ಶಿಕ್ಷಿಸಲು ಪಾಸ್‌ಪೋರ್ಟ್‌ಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು, ಪ್ರಯಾಣದ ಮೇಲೆ ಅಕ್ರಮವಾಗಿ ನಿಷೇಧ ಹೇರುತ್ತಿದೆ. ಆತಿಶ್ ತಸೀರ್, ಅಶೋಕ್ ಸ್ವೈನ್ ಮತ್ತು ಈಗ ನಿತಾಶಾ ಕೌಲ್ ಅವರಿಗೆ ನಿಷೇಧವನ್ನು ವಿಧಿಸಲಾಗಿದೆ. ನಿತಾಶಾ ಅವರು ದ್ವೇಷಪೂರಿತ ವಿಭಜಕ ಸಿದ್ಧಾಂತವನ್ನು ಒಪ್ಪದ ಕಾರಣದಿಂದಲೇ ಆಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ, ನಾವು ಅವರ ಜೊತೆ ನಿಲ್ಲಬೇಕಿದೆ ಎಂದು ಮುಫ್ತಿ ಎಕ್ಸ್‌ನಲ್ಲಿ ಹೇಳಿದ್ದಾರೆ.

ಲಂಡನ್ ಮೂಲದ ಕಾಶ್ಮೀರಿ ಪಂಡಿತ್ ಶಿಕ್ಷಣ ತಜ್ಞೆ ನಿತಾಶಾ ಕೌಲ್ ತನ್ನ ಎಕ್ಸ್‌ನಲ್ಲಿನ ಪೋಸ್ಟ್‌ಗಳ ಸರಣಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತನಗೆ ಯಾವುದೇ ಕಾರಣವನ್ನು ನೀಡದೆ ನನಗೆ ಭಾರತಕ್ಕೆ ಪ್ರವೇಶವನ್ನು ನಿರಕರಿಸಿದ್ದಾರೆ. ಭಾರತ ಸರ್ಕಾರದಿಂದ ನಿರ್ಬಂಧದ ಬಗ್ಗೆ ಈ ಮೊದಲು ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ನೀಡಲಾಗಿಲ್ಲ. 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಕಳೆದ ವರ್ಷ ಸ್ವೀಡನ್ ಮೂಲದ ಪ್ರೊಫೆಸರ್ ಅಶೋಕ್ ಸ್ವೈನ್ ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಸ್ತುತ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸ್ವೈನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದರು.

ಪತ್ರಕರ್ತ ತವ್ಲೀನ್ ಸಿಂಗ್ ಮತ್ತು ದಿವಂಗತ ಪಾಕಿಸ್ತಾನಿ ರಾಜಕಾರಣಿ ಮತ್ತು ಉದ್ಯಮಿ ಸಲ್ಮಾನ್ ತಸೀರ್ ಅವರ ಪುತ್ರ ಮತ್ತು ಬರಹಗಾರ ಆತಿಶ್ ತಸೀರ್ ಯುಕೆ ಪ್ರಜೆ. ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಟೈಮ್ ಮ್ಯಾಗಜೀನ್ ಕವರ್ ಸ್ಟೋರಿಯಲ್ಲಿ ತಸೀರ್, ಪ್ರಧಾನಿ ಮೋದಿಯನ್ನು ‘ಭಾರತದ ಡಿವೈಡರ್‌ ಇನ್ ಚೀಫ್” ಎಂದು ಕರೆದಿದ್ದರು ಮತ್ತು ಭಾರತವು ಅವರ ಸರ್ಕಾರವನ್ನು ಇನ್ನೂ ಐದು ವರ್ಷಗಳನ್ನು ಸಹಿಸಬಹುದೇ? ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...