Homeಮುಖಪುಟಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

ಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರನ್ನು ಬೆಂಗಳೂರಿನ ವಿಮಾನ ನಿಲ್ಧಾಣದಿಂದ ವಾಪಾಸ್ಸು ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಬಿಜೆಪಿಯು ತನ್ನ ಟೀಕಾಕಾರರಿಗೆ ‘ಕಿರುಕುಳ ನೀಡಲು ಮತ್ತು ದಂಡನೆಗೆ ಒಳಪಡಿಸಲು’ ಪಾಸ್‌ಪೋರ್ಟ್‌ಗಳನ್ನು ‘ಅಸ್ತ್ರಗಳಾಗಿ’ ಬಳಸುತ್ತಿದ್ದು, ಪ್ರಯಾಣದ ಮೇಲೆ ‘ಅಕ್ರಮವಾಗಿ’ ನಿಷೇಧ ಹೇರುತ್ತಿದೆ ಎಂದು ವಾಗ್ದಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೆಹಬೂಬಾ ಮುಫ್ತಿ, ಬಿಜೆಪಿ ತನ್ನ ಟೀಕಾಕಾರರಿಗೆ ಕಿರುಕುಳ ನೀಡಲು ಮತ್ತು ಶಿಕ್ಷಿಸಲು ಪಾಸ್‌ಪೋರ್ಟ್‌ಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು, ಪ್ರಯಾಣದ ಮೇಲೆ ಅಕ್ರಮವಾಗಿ ನಿಷೇಧ ಹೇರುತ್ತಿದೆ. ಆತಿಶ್ ತಸೀರ್, ಅಶೋಕ್ ಸ್ವೈನ್ ಮತ್ತು ಈಗ ನಿತಾಶಾ ಕೌಲ್ ಅವರಿಗೆ ನಿಷೇಧವನ್ನು ವಿಧಿಸಲಾಗಿದೆ. ನಿತಾಶಾ ಅವರು ದ್ವೇಷಪೂರಿತ ವಿಭಜಕ ಸಿದ್ಧಾಂತವನ್ನು ಒಪ್ಪದ ಕಾರಣದಿಂದಲೇ ಆಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ, ನಾವು ಅವರ ಜೊತೆ ನಿಲ್ಲಬೇಕಿದೆ ಎಂದು ಮುಫ್ತಿ ಎಕ್ಸ್‌ನಲ್ಲಿ ಹೇಳಿದ್ದಾರೆ.

ಲಂಡನ್ ಮೂಲದ ಕಾಶ್ಮೀರಿ ಪಂಡಿತ್ ಶಿಕ್ಷಣ ತಜ್ಞೆ ನಿತಾಶಾ ಕೌಲ್ ತನ್ನ ಎಕ್ಸ್‌ನಲ್ಲಿನ ಪೋಸ್ಟ್‌ಗಳ ಸರಣಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತನಗೆ ಯಾವುದೇ ಕಾರಣವನ್ನು ನೀಡದೆ ನನಗೆ ಭಾರತಕ್ಕೆ ಪ್ರವೇಶವನ್ನು ನಿರಕರಿಸಿದ್ದಾರೆ. ಭಾರತ ಸರ್ಕಾರದಿಂದ ನಿರ್ಬಂಧದ ಬಗ್ಗೆ ಈ ಮೊದಲು ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ನೀಡಲಾಗಿಲ್ಲ. 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಕಳೆದ ವರ್ಷ ಸ್ವೀಡನ್ ಮೂಲದ ಪ್ರೊಫೆಸರ್ ಅಶೋಕ್ ಸ್ವೈನ್ ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಸ್ತುತ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸ್ವೈನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದರು.

ಪತ್ರಕರ್ತ ತವ್ಲೀನ್ ಸಿಂಗ್ ಮತ್ತು ದಿವಂಗತ ಪಾಕಿಸ್ತಾನಿ ರಾಜಕಾರಣಿ ಮತ್ತು ಉದ್ಯಮಿ ಸಲ್ಮಾನ್ ತಸೀರ್ ಅವರ ಪುತ್ರ ಮತ್ತು ಬರಹಗಾರ ಆತಿಶ್ ತಸೀರ್ ಯುಕೆ ಪ್ರಜೆ. ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಟೈಮ್ ಮ್ಯಾಗಜೀನ್ ಕವರ್ ಸ್ಟೋರಿಯಲ್ಲಿ ತಸೀರ್, ಪ್ರಧಾನಿ ಮೋದಿಯನ್ನು ‘ಭಾರತದ ಡಿವೈಡರ್‌ ಇನ್ ಚೀಫ್” ಎಂದು ಕರೆದಿದ್ದರು ಮತ್ತು ಭಾರತವು ಅವರ ಸರ್ಕಾರವನ್ನು ಇನ್ನೂ ಐದು ವರ್ಷಗಳನ್ನು ಸಹಿಸಬಹುದೇ? ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...