Homeಮುಖಪುಟಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

ಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರನ್ನು ಬೆಂಗಳೂರಿನ ವಿಮಾನ ನಿಲ್ಧಾಣದಿಂದ ವಾಪಾಸ್ಸು ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಬಿಜೆಪಿಯು ತನ್ನ ಟೀಕಾಕಾರರಿಗೆ ‘ಕಿರುಕುಳ ನೀಡಲು ಮತ್ತು ದಂಡನೆಗೆ ಒಳಪಡಿಸಲು’ ಪಾಸ್‌ಪೋರ್ಟ್‌ಗಳನ್ನು ‘ಅಸ್ತ್ರಗಳಾಗಿ’ ಬಳಸುತ್ತಿದ್ದು, ಪ್ರಯಾಣದ ಮೇಲೆ ‘ಅಕ್ರಮವಾಗಿ’ ನಿಷೇಧ ಹೇರುತ್ತಿದೆ ಎಂದು ವಾಗ್ದಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೆಹಬೂಬಾ ಮುಫ್ತಿ, ಬಿಜೆಪಿ ತನ್ನ ಟೀಕಾಕಾರರಿಗೆ ಕಿರುಕುಳ ನೀಡಲು ಮತ್ತು ಶಿಕ್ಷಿಸಲು ಪಾಸ್‌ಪೋರ್ಟ್‌ಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು, ಪ್ರಯಾಣದ ಮೇಲೆ ಅಕ್ರಮವಾಗಿ ನಿಷೇಧ ಹೇರುತ್ತಿದೆ. ಆತಿಶ್ ತಸೀರ್, ಅಶೋಕ್ ಸ್ವೈನ್ ಮತ್ತು ಈಗ ನಿತಾಶಾ ಕೌಲ್ ಅವರಿಗೆ ನಿಷೇಧವನ್ನು ವಿಧಿಸಲಾಗಿದೆ. ನಿತಾಶಾ ಅವರು ದ್ವೇಷಪೂರಿತ ವಿಭಜಕ ಸಿದ್ಧಾಂತವನ್ನು ಒಪ್ಪದ ಕಾರಣದಿಂದಲೇ ಆಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ, ನಾವು ಅವರ ಜೊತೆ ನಿಲ್ಲಬೇಕಿದೆ ಎಂದು ಮುಫ್ತಿ ಎಕ್ಸ್‌ನಲ್ಲಿ ಹೇಳಿದ್ದಾರೆ.

ಲಂಡನ್ ಮೂಲದ ಕಾಶ್ಮೀರಿ ಪಂಡಿತ್ ಶಿಕ್ಷಣ ತಜ್ಞೆ ನಿತಾಶಾ ಕೌಲ್ ತನ್ನ ಎಕ್ಸ್‌ನಲ್ಲಿನ ಪೋಸ್ಟ್‌ಗಳ ಸರಣಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತನಗೆ ಯಾವುದೇ ಕಾರಣವನ್ನು ನೀಡದೆ ನನಗೆ ಭಾರತಕ್ಕೆ ಪ್ರವೇಶವನ್ನು ನಿರಕರಿಸಿದ್ದಾರೆ. ಭಾರತ ಸರ್ಕಾರದಿಂದ ನಿರ್ಬಂಧದ ಬಗ್ಗೆ ಈ ಮೊದಲು ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ನೀಡಲಾಗಿಲ್ಲ. 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಕಳೆದ ವರ್ಷ ಸ್ವೀಡನ್ ಮೂಲದ ಪ್ರೊಫೆಸರ್ ಅಶೋಕ್ ಸ್ವೈನ್ ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಸ್ತುತ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸ್ವೈನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದರು.

ಪತ್ರಕರ್ತ ತವ್ಲೀನ್ ಸಿಂಗ್ ಮತ್ತು ದಿವಂಗತ ಪಾಕಿಸ್ತಾನಿ ರಾಜಕಾರಣಿ ಮತ್ತು ಉದ್ಯಮಿ ಸಲ್ಮಾನ್ ತಸೀರ್ ಅವರ ಪುತ್ರ ಮತ್ತು ಬರಹಗಾರ ಆತಿಶ್ ತಸೀರ್ ಯುಕೆ ಪ್ರಜೆ. ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಟೈಮ್ ಮ್ಯಾಗಜೀನ್ ಕವರ್ ಸ್ಟೋರಿಯಲ್ಲಿ ತಸೀರ್, ಪ್ರಧಾನಿ ಮೋದಿಯನ್ನು ‘ಭಾರತದ ಡಿವೈಡರ್‌ ಇನ್ ಚೀಫ್” ಎಂದು ಕರೆದಿದ್ದರು ಮತ್ತು ಭಾರತವು ಅವರ ಸರ್ಕಾರವನ್ನು ಇನ್ನೂ ಐದು ವರ್ಷಗಳನ್ನು ಸಹಿಸಬಹುದೇ? ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...