Homeಮುಖಪುಟಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

ಟೀಕಾಕಾರರಿಗೆ ಕಿರುಕುಳ ನೀಡಲು ಬಿಜೆಪಿ ಪಾಸ್‌ಪೋರ್ಟ್‌ನ್ನು ಆಯುಧಗೊಳಿಸುತ್ತಿದೆ: ಮೆಹಬೂಬಾ ಮುಫ್ತಿ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಭಾಗವಹಿಸಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರನ್ನು ಬೆಂಗಳೂರಿನ ವಿಮಾನ ನಿಲ್ಧಾಣದಿಂದ ವಾಪಾಸ್ಸು ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಬಿಜೆಪಿಯು ತನ್ನ ಟೀಕಾಕಾರರಿಗೆ ‘ಕಿರುಕುಳ ನೀಡಲು ಮತ್ತು ದಂಡನೆಗೆ ಒಳಪಡಿಸಲು’ ಪಾಸ್‌ಪೋರ್ಟ್‌ಗಳನ್ನು ‘ಅಸ್ತ್ರಗಳಾಗಿ’ ಬಳಸುತ್ತಿದ್ದು, ಪ್ರಯಾಣದ ಮೇಲೆ ‘ಅಕ್ರಮವಾಗಿ’ ನಿಷೇಧ ಹೇರುತ್ತಿದೆ ಎಂದು ವಾಗ್ದಾಳಿಯನ್ನು ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೆಹಬೂಬಾ ಮುಫ್ತಿ, ಬಿಜೆಪಿ ತನ್ನ ಟೀಕಾಕಾರರಿಗೆ ಕಿರುಕುಳ ನೀಡಲು ಮತ್ತು ಶಿಕ್ಷಿಸಲು ಪಾಸ್‌ಪೋರ್ಟ್‌ಗಳನ್ನು ಅಸ್ತ್ರಗಳಾಗಿ ಬಳಸುತ್ತಿದ್ದು, ಪ್ರಯಾಣದ ಮೇಲೆ ಅಕ್ರಮವಾಗಿ ನಿಷೇಧ ಹೇರುತ್ತಿದೆ. ಆತಿಶ್ ತಸೀರ್, ಅಶೋಕ್ ಸ್ವೈನ್ ಮತ್ತು ಈಗ ನಿತಾಶಾ ಕೌಲ್ ಅವರಿಗೆ ನಿಷೇಧವನ್ನು ವಿಧಿಸಲಾಗಿದೆ. ನಿತಾಶಾ ಅವರು ದ್ವೇಷಪೂರಿತ ವಿಭಜಕ ಸಿದ್ಧಾಂತವನ್ನು ಒಪ್ಪದ ಕಾರಣದಿಂದಲೇ ಆಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ, ನಾವು ಅವರ ಜೊತೆ ನಿಲ್ಲಬೇಕಿದೆ ಎಂದು ಮುಫ್ತಿ ಎಕ್ಸ್‌ನಲ್ಲಿ ಹೇಳಿದ್ದಾರೆ.

ಲಂಡನ್ ಮೂಲದ ಕಾಶ್ಮೀರಿ ಪಂಡಿತ್ ಶಿಕ್ಷಣ ತಜ್ಞೆ ನಿತಾಶಾ ಕೌಲ್ ತನ್ನ ಎಕ್ಸ್‌ನಲ್ಲಿನ ಪೋಸ್ಟ್‌ಗಳ ಸರಣಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತನಗೆ ಯಾವುದೇ ಕಾರಣವನ್ನು ನೀಡದೆ ನನಗೆ ಭಾರತಕ್ಕೆ ಪ್ರವೇಶವನ್ನು ನಿರಕರಿಸಿದ್ದಾರೆ. ಭಾರತ ಸರ್ಕಾರದಿಂದ ನಿರ್ಬಂಧದ ಬಗ್ಗೆ ಈ ಮೊದಲು ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ನೀಡಲಾಗಿಲ್ಲ. 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಕಳೆದ ವರ್ಷ ಸ್ವೀಡನ್ ಮೂಲದ ಪ್ರೊಫೆಸರ್ ಅಶೋಕ್ ಸ್ವೈನ್ ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಸ್ತುತ ಪ್ರಾಧ್ಯಾಪಕರಾಗಿ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸ್ವೈನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿದ್ದರು.

ಪತ್ರಕರ್ತ ತವ್ಲೀನ್ ಸಿಂಗ್ ಮತ್ತು ದಿವಂಗತ ಪಾಕಿಸ್ತಾನಿ ರಾಜಕಾರಣಿ ಮತ್ತು ಉದ್ಯಮಿ ಸಲ್ಮಾನ್ ತಸೀರ್ ಅವರ ಪುತ್ರ ಮತ್ತು ಬರಹಗಾರ ಆತಿಶ್ ತಸೀರ್ ಯುಕೆ ಪ್ರಜೆ. ಅವರ ಸಾಗರೋತ್ತರ ಭಾರತೀಯ (ಒಸಿಐ) ಕಾರ್ಡ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಟೈಮ್ ಮ್ಯಾಗಜೀನ್ ಕವರ್ ಸ್ಟೋರಿಯಲ್ಲಿ ತಸೀರ್, ಪ್ರಧಾನಿ ಮೋದಿಯನ್ನು ‘ಭಾರತದ ಡಿವೈಡರ್‌ ಇನ್ ಚೀಫ್” ಎಂದು ಕರೆದಿದ್ದರು ಮತ್ತು ಭಾರತವು ಅವರ ಸರ್ಕಾರವನ್ನು ಇನ್ನೂ ಐದು ವರ್ಷಗಳನ್ನು ಸಹಿಸಬಹುದೇ? ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...