Homeಮುಖಪುಟಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ಕೇರಳ ಬಿಜೆಪಿಯಲ್ಲಿ ಭಿನ್ನಮತ: ರಾಜ್ಯಾಧ್ಯಕ್ಷರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದ ನಾಯಕರು!

ಕೇಂದ್ರ ಬಿಜೆಪಿಯು ಸುರೇಂದ್ರನ್ ಅವರನ್ನು ಕರೆಸಿಕೊಂಡು, ರಾಜ್ಯದಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿ ನೊಡಿಕೊಂಡು, ಎಲ್ಲಾ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿತ್ತು

- Advertisement -
- Advertisement -

ಕೇರಳ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಭಿನ್ನಮತಕ್ಕೆ ಸಂಬಂಧಿಸಿದಂತೆ ರಾಜ್ಯ ಘಟಕದ ಅಧ್ಯಕ್ಷರಾದ ಕೆ.ಸುರೇಂದ್ರನ್ ಅವರನ್ನು ಬಿಜೆಪಿ ಹೈಕಮಾಂಡ್ ಕರೆಸಿಕೊಂಡು ಎಚ್ಚರಿಕೆ ನೀಡಿದ್ದರಿಂದ, ಶೋಭಾ ಸೇರಿದಂತೆ ಇನ್ನಿತರ ಭಿನ್ನಮತೀಯ ನಾಯಕರನ್ನು ಸುರೇಂದ್ರನ್ ಸಂಪರ್ಕಿಸಿ ಸಮಾಧಾನಪಡಿಸಿದ್ದಾರೆ.

ಶೋಭಾ ಅವರು ಪಕ್ಷದ ಹಿರಿಯ ನಾಯಕಿಯಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾತ್ರವಲ್ಲದೆ ವಿಧಾನಸಭಾ ಚುನಾವಣೆಯಲ್ಲೂ ಎನ್‌ಡಿಎಯನ್ನು ಮುನ್ನಡೆಸಲು ಅವರು ಮುಂಚೂಣಿಯಲ್ಲಿದ್ದರು ಎಂದು ಸುರೇಂದ್ರನ್ ಸ್ಥಳೀಯ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದರು.

ಬಿಜೆಪಿ ರಾಜ್ಯ ಅಧ್ಯಕ್ಷರು ಭಿನ್ನಾಭಿಪ್ರಾಯದ ಬಗ್ಗೆ ವರದಿಗಳಿಗೆ ಮಾಧ್ಯಮಗಳೇ ಕಾರಣ ಎಂದು ದೂಷಿಸಿದ ಸುರೇಂದ್ರನ್, ಶೋಭಾ ಅವರನ್ನು ಕೇಸರಿ ಪಕ್ಷದ ಪ್ರಬಲ ಮಹಿಳಾ ನಾಯಕರಲ್ಲಿ ಒಬ್ಬರು ಎಂದು ಉಲ್ಲೇಖಿಸಿದ್ದಾರೆ. “ನಾವು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಪರಸ್ಪರ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳುವುದು ಸಹಜ. ಆದರೆ ಪಕ್ಷದ ಹುದ್ದೆಗಳಿಗೆ ಭಿನ್ನಾಭಿಪ್ರಾಯವಿದೆ ಎಂಬುದು ನಿಜವಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ದೇವಾಲಯ ತೆರೆಯುತ್ತಿದ್ದಂತೆ ರಾಜಕೀಯ ಲಾಭಕ್ಕೆ ಮುಂದಾದ ಕೇರಳ ಬಿಜೆಪಿಯ ದ್ವಂದ್ವ

ಈ ಕುರಿತು ಬಿಜೆಪಿ ಹೈಕಮಾಂಡ್ ಸುರೇಂದ್ರನ್ ಅವರನ್ನು ಕರೆಸಿಕೊಂಡು, ರಾಜ್ಯದಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿ ನೊಡಿಕೊಂಡು, ಎಲ್ಲಾ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿತ್ತು.

ವಿ ಮುರಾಳೀಧರನ್ ಬಣದೊಂದಿಗೆ ಗುರುತಿಸಲಾಗದ ಕೆಲವು ನಾಯಕರನ್ನು ಸುರೇಂದ್ರನ್ ನಿರ್ಲಕ್ಷಿಸುತ್ತಿದ್ದಾರೆ ಎಂದು ಶೋಭಾ ನೇತೃತ್ವದ ಹಲವಾರು ಭಿನ್ನಮತೀಯ ನಾಯಕರು ಕೇಂದ್ರ ನಾಯಕತ್ವಕ್ಕೆ ಮನವಿ ಕಳುಹಿಸಿದ್ದರು.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಶೋಭಾ ಅವರಲ್ಲದೆ, ಹಿರಿಯ ನಾಯಕರಾದ ಪಿ.ಎಂ.ವೇಲಾಯುಧನ್ ಮತ್ತು ಕೆ.ಪಿ.ಶ್ರೀಶನ್ ಅವರು ಸುರೇಂದ್ರನ್ ಅವರ ಕಾರ್ಯವೈಖರಿಯ ವಿರುದ್ಧ ಸಾರ್ವಜನಿಕವಾಗಿ ಪ್ರಚಾರ ಮಾಡಿದ್ದರು. ಬುಧವಾರ ಭಿನ್ನಮತೀಯ ನಾಯಕರು ಎರಡು ಬಾರಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರನ್ನು ಭೇಟಿ ಮಾಡಿ ತಮ್ಮ ಕುಂದು ಕೊರತೆಗಳನ್ನು ಹೇಳಿಕೊಂಡಿದ್ದರು.

ಬಿಜೆಪಿ ಕೇಂದ್ರ ನಾಯಕತ್ವದ ದೃಢವಾದ ನಿಲುವು ಮತ್ತು ನಂತರದ ನಾಗರಿಕ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ದೊಡ್ಡ ಹಾನಿಯನ್ನು ಅನುಭವಿಸುವ ಸಾಧ್ಯತೆಯಿದ್ದುದರಿಂದ ಸುರೇಂದ್ರನ್ ಭಿನ್ನಮತೀಯರನ್ನು ತಲುಪಲು ಪ್ರೇರೇಪಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿ: ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...