Homeಮುಖಪುಟ’ಆಡಳಿತ ಪಕ್ಷದ ಹೆಸರಲ್ಲಿ ಕರೆ ಮಾಡಿ ತಪ್ಪು ಮಾಹಿತಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್’

’ಆಡಳಿತ ಪಕ್ಷದ ಹೆಸರಲ್ಲಿ ಕರೆ ಮಾಡಿ ತಪ್ಪು ಮಾಹಿತಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್’

ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ಇಂತಹ ಕರೆ ಬಂದಿದ್ದು, ಕರೆ ಮಾಡಿರುವವರು ತಮ್ಮನ್ನು ತಾವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರೆಂದು ಹೇಳಿಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ

- Advertisement -
- Advertisement -

ಬಿಜೆಪಿಯ ಐಟಿ ಸೆಲ್‌‌ ತಾವು ಆಡಳಿತ ಪಕ್ಷದ ಕಾರ್ಯಕರ್ತರು ಎಂದು ಹೇಳಿಕೊಂಡು ಜನರಿಗೆ ಕರೆ ಮಾಡಿ, ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.

“ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ಇಂತಹ ಕರೆ ಬಂದಿದ್ದು, ಕರೆ ಮಾಡಿರುವವರು ತಮ್ಮನ್ನು ತಾವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರೆಂದು ಹೇಳಿಕೊಂಡಿದ್ದಾರೆ. ಕರೆ ಮಾಡಿ, ಮುಂಬರುವ ಚುನಾವಣೆಯಲ್ಲಿ ಈ ಪ್ರಾಧ್ಯಾಪಕರು ಯಾರಿಗೆ ಮತ ಹಾಕುತ್ತಾರೆಂದು ತಿಳಿಯಲು ಬಯಸಿದ್ದರು. ಅಲ್ಲದೆ ಅವರು ಸಾಕಷ್ಟು ತಪ್ಪು ಮಾಹಿತಿ ಸೇರಿದಂತೆ ಅವಮಾನಕರವಾಗಿ ಮಾತನಾಡಿದ್ದರು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

“ಆದರೆ ಪ್ರಾಧ್ಯಾಪಕರು ಈ ಸಂಖ್ಯೆಗಳನ್ನು ಪರಿಶೀಲಿಸಿದಾಗ ಅವರು ಟಿಎಂಸಿಗೆ ಕಾರ್ಯಕರ್ತರಲ್ಲ ಎಂದು ತಿಳಿದುಬಂದಿದೆ. ಇದು ಬಿಜೆಪಿ ಐಟಿ ಸೆಲ್‌ನ ಕೆಟ್ಟ ಕೆಲಸ. ಕೂಡಲೇ ತನಿಖೆ ಆರಂಭಿಸುವಂತೆ ಪೊಲೀಸರನ್ನು ಕೇಳುತ್ತಿದ್ದೇನೆ. ಜನರು ಅನುಮಾನಾಸ್ಪದ ಸಂಖ್ಯೆಗಳಿಂದ ಕರೆಗಳನ್ನು ಸ್ವೀಕರಿಸಬಾರದು ಮತ್ತು ಒಂದು ವೇಳೆ ಇಂತಹ ಕರೆಗಳು ಬಂದರೆ ಪೊಲೀಸರಿಗೆ ದೂರು ಸಲ್ಲಿಸಿ ಎಂದು ಮನವಿ ಮಾಡುತ್ತೇನೆ. ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಕಲಿ ಸುದ್ದಿಗಳನ್ನು ಹರಡುವಲ್ಲಿ ಬಿಜೆಪಿಯ ಐಟಿ ಸೆಲ್ ಪ್ರಾವಿಣ್ಯತೆ ಹೊಂದಿದೆ. ಯಾವುದೆ ವಿಷಯವನ್ನು ಸಾವಿರಾರು ವಾಟ್ಸಪ್ ಗುಂಪುಗಳ ಮೂಲಕ ವೈರಲ್ ಮಾಡಬಹುದು ಎಂದು ಅಮಿತ್ ಶಾ ಅವರೇ ಒಮ್ಮ ಹೇಳಿಕೊಂಡಿದ್ದರು” ಎಂದು ಮಮತಾ ಹೇಳಿದ್ದಾರೆ.

ಆದರೆ ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷ ರಿತೇಶ್ ತಿವಾರಿ ಮಮತಾ ಅವರ ಆರೋಪವನ್ನು ಅಲ್ಲಗೆಳೆದಿದ್ದು, ಅವರು ರೂಡಿಗತ ಸುಳ್ಳುಗಾರ್ತಿ ಎಂದು ಹೇಳಿದ್ದಾರೆ.

“ಮಮತಾ ಅವರು ರೂಡಿಗತ ಸುಳ್ಳುಗಾರ್ತಿ ಎಂದು ಬಂಗಾಳದ ಜನರಿಗೆ ತಿಳಿದಿದೆ. ಶಿಕ್ಷಕ ಸಮುದಾಯದ ಸಹಾನುಭೂತಿ ಪಡೆಯಲು ಅವರು ಈ ಕಥೆಗಳನ್ನು ಹಣೆಯುತ್ತಿದ್ದಾರೆ. ಅವರು ಆರೋಪಿಸಿದಂತೆ ನಡೆದಿದ್ದರೆ ಕರೆಗಳ ದಾಖಲೆಗಳು ಮತ್ತು ಸಂಭಾಷಣೆಗಳ ಆಡಿಯೊ ರೆಕಾರ್ಡಿಂಗ್‌ಗಳನ್ನು ಯಾಕೆ ಬಹಿರಂಗಪಡಿಸಿಲ್ಲ. ನಾನು ಅವರಿಗೆ ಸವಾಲು ಹಾಕುತ್ತಿದ್ದೇನೆ, ಅವರಿಗೆ ಸಾಧ್ಯವಾದರೆ ಪ್ರಕರಣದಲ್ಲಿ ಬಿಜೆಪಿ ಐಟಿ ಸೆಲ್‌‌ನ ಒಳಗೊಳ್ಳುವಿಕೆಯನ್ನು ಸಾಬೀತುಪಡಿಸಲಿ” ಎಂದು ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...