Homeಕರ್ನಾಟಕಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

‘ಈದಿನ.ಕಾಂ’ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು” ಎಂದಿದ್ದಾರೆ.

- Advertisement -
- Advertisement -

“ಬಿಜೆಪಿಯ ಐಟಿ ಸೆಲ್‌ ಮುಖ್ಯಸ್ಥರಾದ ಅಮಿತ್ ಮಾಳವೀಯ ಅವರ ಕೆಲಸವನ್ನು ಸುದ್ದಿವಾಹಿನಿಗಳೇ ಮಾಡುತ್ತಿವೆ” ಎಂದು ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ತಿಳಿಸಿದ್ದಾರೆ.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಪಡೆದು ಹೊರಗೆ ಬಂದಿರುವ ಅವರು, ಕನ್ನಡದ ಸುದ್ದಿ ಜಾಲತಾಣ ‘ಈ ದಿನ’ಕ್ಕೆ ವಿಶೇಷ ಸಂದರ್ಶನ ನೀಡಿದ್ದು, ಮುಖ್ಯವಾಹಿನಿ ಮಾಧ್ಯಮಗಳ ವರ್ತನೆಗಳನ್ನು ವಿಶ್ಲೇಷಿಸಿದ್ದಾರೆ.

ಪತ್ರಕರ್ತ ಎಸ್.ಕುಮಾರ್‌ ಅವರು ನಡೆಸಿರುವ ಸಂದರ್ಶನದಲ್ಲಿ, “ದ್ವೇಷವನ್ನು ಬಯಲು ಮಾಡುವವರನ್ನು ಬೇಟೆಯಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ, ಬಾಬಿ ಘೋಷ್‌ ಹೇಟ್‌ ಟ್ರ್ಯಾಕ್‌ ಮಾಡಿದ್ದಕ್ಕೆ ಕೆಲಸ ಕಳೆದುಕೊಂಡರು, ಹಿಂದುಸ್ತಾನ್ ಟೈಮ್ಸ್ ಅವರನ್ನು ಕೆಲಸದಿಂದ ತೆಗೆದು ಹಾಕಿತು. ನಿಮ್ಮಂತಹ ಫ್ಯಾಕ್ಟ್‌ಚೆಕರ್‌‌ಗಳು ಕೂಡ ವಿನಾ ಕಾರಣ ವಿವಿಧ ರೀತಿಯ ಒತ್ತಡಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಹೊತ್ತಲ್ಲಿ ಮಾಧ್ಯಮಗಳು ಹೇಗಿರಬೇಕು? ಈ ವಿದ್ಯಮಾನವನ್ನು ಹೇಗೆ ನೋಡ್ತೀರಿ?” ಎಂದು ಕೇಳಿರುವ ಪ್ರಶ್ನೆಗೆ ಜುಬೇರ್‌ ಪ್ರತಿಕ್ರಿಯೆ ನೀಡಿ ಮಾಧ್ಯಮಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಇಂದು ನೋಡುತ್ತಿರುವ ದ್ವೇಷದ ವಾತಾವರಣಕ್ಕೆ ಟಿವಿ ಚಾನೆಲ್‌ಗಳೇ ಕಾರಣ. 2014ರ ನಂತರವೂ ಎರಡು ಮೂರು ವರ್ಷ ಕಾಲ ಬಿಜೆಪಿ ಐಟಿ ಸೆಲ್ ಕ್ಯಾಂಪೇನ್‌ಗಳನ್ನು ಮಾಡುತ್ತಿತ್ತು. ಆಗ ಮಾಧ್ಯಮ ವಿರೋಧಿಸದೇ, ಸುಮ್ಮನಿದ್ದು ಬಿಡುತ್ತಿತ್ತು. ಯಾವುದೇ ಪ್ರೊಪಗಾಂಡ ಪ್ರಚಾರಕ್ಕೆ ಅಮಿತ್ ಮಾಳವೀಯಾ ಮತ್ತವರ ತಂಡ ಕೆಲಸ ಮಾಡುತ್ತಿತ್ತು. ಹ್ಯಾ‌ಷ್‌ಟ್ಯಾಗ್‌, ಮೋದಿ ಹೊಗಳಿಕೆ ಇತ್ಯಾದಿ ನಡೆಸುತ್ತಿದ್ದರು. ಗಮನಿಸಬೇಕಾದ ಸಂಗತಿಯೆಂದರೆ, ಕಳೆದ ಎರಡು ವರ್ಷಗಳಿಂದ ಅವರು ಈ ರೀತಿಯ ಕ್ಯಾಂಪೇನ್ ನಡೆಸುತ್ತಿಲ್ಲ. ಈಗ ಈ ಕೆಲಸವನ್ನು ಸುದ್ದಿವಾಹಿನಿಗಳಿಗೆ ಮತ್ತು ಅದರ ಆಂಕರ್‌ಗಳಿಗೆ ನೀಡಲಾಗಿದೆ” ಎಂದಿದ್ದಾರೆ.

“ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಸ್ವತಃ ತಾವೇ ಟ್ವಿಟ್ ಮಾಡುವುದಿಲ್ಲ ಬದಲಿಗೆ ಸುದ್ದಿವಾಹಿನಿಯೊಂದರ ಅಂಕರ್‌ಗಳು ಮಾಡಿದ ಟ್ವೀಟನ್ನು ರೀಟ್ವೀಟ್‌ ಮಾಡುತ್ತಾರೆ. ಸುಧೀಶ್‌ ಚೌಧರಿ, ಚಿತ್ರಾ ಹೀಗೆ ಹಲವರಿದ್ದಾರೆ, ಮೊದಲು ಸುದ್ದಿಯಾಗುತ್ತದೆ. ಆಮೇಲೆ ಬಿಜೆಪಿ ಐಟಿ ಸೆಲ್‌ ನಿಂದ ವೈರಲ್ ಆಗುತ್ತದೆ. ಬಿಜೆಪಿ ಐಟಿ ಸೆಲ್ ಮಾಡುತ್ತಿದ್ದ ಕೆಲಸವನ್ನು ಈಗ ಮುಖ್ಯವಾಹಿನಿ ಸುದ್ದಿ ವಾಹಿನಿಗಳು ಮಾಡಲಾರಂಭಿಸಿವೆ. ಹಾಗಾಗಿ ಜನ ನಂಬುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಮ್ಮ ಕೆಲಸ ಸತ್ಯವನ್ನು ಹೇಳುವುದು. 90% ಸರಿ ಇದ್ದರೂ, ಶೇ. 10 ತಪ್ಪು ಏನು ಎಂಬುದನ್ನು ಬಯಲು ಮಾಡುವುದು. ಆದರೆ ಪ್ರಸ್ತುತ ಪ್ರತಿಯೊಂದನ್ನು ಸಂಪೂರ್ಣವಾಗಿ ಮರೆಮಾಚಲಾಗುತ್ತಿದೆ. ಸುದ್ದಿ ವಾಹಿನಿಗಳು ರಾಜಿಯಾಗಿವೆ. ಬಹುಶಃ, ಇಡಿ, ಐಟಿಗೆ ಹೆದರಿರಬಹುದು. ಕೆಲವರು ಸೈದ್ಧಾಂತಿಕವಾಗಿ ಅವರ ಜೊತೆಗೆ ಇರುವ ಕಾರಣಕ್ಕೂ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“2 ಕೋಟಿ ರೂ.ಗೆ ಟ್ವೀಟ್‌ ಮಾಡಿ ದೇಣಿಗೆಯನ್ನು ಸ್ವಂತ ಖಾತೆಗೆ ಪಡೆದುಕೊಂಡಿದ್ದಾರೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ನನಗೆ 2 ರೂ. ಕೋಟಿ ವಿಚಾರ ಗೊತ್ತೇ ಇರಲಿಲ್ಲ. ಬಿಡುಗಡೆಯಾಗಿ ಹೊರಬರುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ತಮಾಷೆ ಮಾಡುತ್ತಾ, ‘ಇನ್ನು ಮೇಲೆ 2 ಕೋಟಿ ರೂ. ಸಂಪಾದಿಸುತ್ತೀರಿ’ ಎಂದರು. ಆಗಲೂ ಅರ್ಥವಾಗಲಿಲ್ಲ. ಉತ್ತರ ಪ್ರದೇಶ ಗರಿಮಾ ಪ್ರಸಾದ್ ಈ ಆರೋಪ ಮಾಡಿದ್ದರು. ಟ್ವೀಟ್‌ ಮಾಡುವುದಕ್ಕೆ ಯಾರು 2 ರೂ. ಕೋಟಿ ಕೊಡುತ್ತಾರೆ? ಅಂತಾರಾಷ್ಟ್ರೀಯ ಖ್ಯಾತಿಯ ಸೆಲೆಬ್ರಿಟಿಯೊಬ್ಬರು ಯಾವುದಾದರೂ ಕಮರ್ಷಿಯಲ್ ವಸ್ತುವಿನ ಪ್ರಚಾರಕ್ಕೆ ಅಷ್ಟು ಪಡೆಯಬಹುದೇನೊ! ಅದಲ್ಲದೆ, ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ ಪಡೆದಿದ್ದೇನೆ ಎಂಬ ಆರೋಪವೂ ಬಂತು” ಎಂದಿದ್ದಾರೆ.

ಇದನ್ನೂ ಓದಿರಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಪೊಲೀಸ್ ವಿಚಾರಣೆಯ ಕುರಿತು ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು! ಹತ್ತು ಪರ್ಸೆಂಟ್‌ನಷ್ಟು ನನ್ನ ಟ್ವೀಟ್‌ಗಳ ಬಗ್ಗೆ ಕೇಳಲಿಲ್ಲ. ಹೆಚ್ಚು ಆಸಕ್ತಿ ಇದ್ದಿದ್ದು ಅಲ್ಟ್‌ ನ್ಯೂಸ್, ಅದಕ್ಕಿರುವ ಆರ್ಥಿಕ ಬೆಂಬಲ, ಹೇಗೆ ಶುರುವಾಯಿತು, ಪ್ರತೀಕ್ ಹೇಗೆ ಪರಿಚಯವಾದರು, ಪ್ರತೀಕ್‌ ತಂದೆಯ ಬಗ್ಗೆ ಮೊದಲಾಗಿ ಹೆಚ್ಚು ಪ್ರಶ್ನೆಗಳನ್ನು ಕೇಳಿದರು. ಮಾಧ್ಯಮಗಳಲ್ಲಿ ಟ್ವೀಟ್‌ ಕಾರಣಕ್ಕೆ ಎಂದು ಸುದ್ದಿಯಾಗುತ್ತಿದ್ದರೆ, ವಿಚಾರಣೆಯಲ್ಲಿ ಬೇರೆಯದೇ ಪ್ರಶ್ನೆಗಳು ನನ್ನ ಮುಂದೆ ಬರುತ್ತಿದ್ದವು. ವಿಚಾರಣೆ ಮಾಡುತ್ತಿದ್ದ ಅಧಿಕಾರಿಗಳಿಗೆ ವಾಟ್ಸ್‌ ಆಪ್ ಮೂಲಕ ಪ್ರಶ್ನೆಗಳು ಬರುತ್ತಿದ್ದವು. ನಾನು ಗಮನಿಸಿದ್ದೇನೆ. ಲಿಂಕ್‌ಗಳು ಬರುತ್ತಿದ್ದವು. ಒಪಿಇಂಡಿಯಾ ರೀತಿಯ ಲಿಂಕ್‌ಗಳು. ಅವುಗಳನ್ನು ಓಪನ್ ಮಾಡಿ, ನನ್ನನ್ನು ಪ್ರಶ್ನಿಸುತ್ತಿದ್ದರು” ಎಂದಿದ್ದಾರೆ.

ತಮ್ಮ ಜೀವನದ ಕುರಿತು ವಿಸ್ತೃತವಾಗಿ ‘ಈ ದಿನ.ಕಾಂ’ ಜೊತೆ ಜುಬೇ‌ರ್‌ ಮಾತನಾಡಿದ್ದಾರೆ. ತಮ್ಮ ಪತ್ರಿಕೋದ್ಯಮದ ಜೀವನದ ಸ್ವಾರಸ್ಯಕರ ಸಂಗತಿಗಳನ್ನು ಅವರು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಕನ್ನಡ ಮಾಧ್ಯಮವೊಂದಕ್ಕೆ ನೀಡಿದ ಮೊದಲ ಸಂದರ್ಶನವೂ ಇದಾಗಿದೆ. (ಸಂದರ್ಶನದ ಪೂರ್ಣ ಪಠ್ಯ ‘ಇಲ್ಲಿ’ ನೋಡಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿನ್ನಂಥ ದೇಶ ದ್ರೋಹಿಯ ಮರಣ ಶಾಸನ ಬರೆಯುವ ಕೆಲಸವನ್ನು ಅವರೇ ಮಾಡಬಹುದೇ !

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...