Homeಕರ್ನಾಟಕಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

‘ಈದಿನ.ಕಾಂ’ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು” ಎಂದಿದ್ದಾರೆ.

- Advertisement -
- Advertisement -

“ಬಿಜೆಪಿಯ ಐಟಿ ಸೆಲ್‌ ಮುಖ್ಯಸ್ಥರಾದ ಅಮಿತ್ ಮಾಳವೀಯ ಅವರ ಕೆಲಸವನ್ನು ಸುದ್ದಿವಾಹಿನಿಗಳೇ ಮಾಡುತ್ತಿವೆ” ಎಂದು ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ತಿಳಿಸಿದ್ದಾರೆ.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಪಡೆದು ಹೊರಗೆ ಬಂದಿರುವ ಅವರು, ಕನ್ನಡದ ಸುದ್ದಿ ಜಾಲತಾಣ ‘ಈ ದಿನ’ಕ್ಕೆ ವಿಶೇಷ ಸಂದರ್ಶನ ನೀಡಿದ್ದು, ಮುಖ್ಯವಾಹಿನಿ ಮಾಧ್ಯಮಗಳ ವರ್ತನೆಗಳನ್ನು ವಿಶ್ಲೇಷಿಸಿದ್ದಾರೆ.

ಪತ್ರಕರ್ತ ಎಸ್.ಕುಮಾರ್‌ ಅವರು ನಡೆಸಿರುವ ಸಂದರ್ಶನದಲ್ಲಿ, “ದ್ವೇಷವನ್ನು ಬಯಲು ಮಾಡುವವರನ್ನು ಬೇಟೆಯಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ, ಬಾಬಿ ಘೋಷ್‌ ಹೇಟ್‌ ಟ್ರ್ಯಾಕ್‌ ಮಾಡಿದ್ದಕ್ಕೆ ಕೆಲಸ ಕಳೆದುಕೊಂಡರು, ಹಿಂದುಸ್ತಾನ್ ಟೈಮ್ಸ್ ಅವರನ್ನು ಕೆಲಸದಿಂದ ತೆಗೆದು ಹಾಕಿತು. ನಿಮ್ಮಂತಹ ಫ್ಯಾಕ್ಟ್‌ಚೆಕರ್‌‌ಗಳು ಕೂಡ ವಿನಾ ಕಾರಣ ವಿವಿಧ ರೀತಿಯ ಒತ್ತಡಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಹೊತ್ತಲ್ಲಿ ಮಾಧ್ಯಮಗಳು ಹೇಗಿರಬೇಕು? ಈ ವಿದ್ಯಮಾನವನ್ನು ಹೇಗೆ ನೋಡ್ತೀರಿ?” ಎಂದು ಕೇಳಿರುವ ಪ್ರಶ್ನೆಗೆ ಜುಬೇರ್‌ ಪ್ರತಿಕ್ರಿಯೆ ನೀಡಿ ಮಾಧ್ಯಮಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಇಂದು ನೋಡುತ್ತಿರುವ ದ್ವೇಷದ ವಾತಾವರಣಕ್ಕೆ ಟಿವಿ ಚಾನೆಲ್‌ಗಳೇ ಕಾರಣ. 2014ರ ನಂತರವೂ ಎರಡು ಮೂರು ವರ್ಷ ಕಾಲ ಬಿಜೆಪಿ ಐಟಿ ಸೆಲ್ ಕ್ಯಾಂಪೇನ್‌ಗಳನ್ನು ಮಾಡುತ್ತಿತ್ತು. ಆಗ ಮಾಧ್ಯಮ ವಿರೋಧಿಸದೇ, ಸುಮ್ಮನಿದ್ದು ಬಿಡುತ್ತಿತ್ತು. ಯಾವುದೇ ಪ್ರೊಪಗಾಂಡ ಪ್ರಚಾರಕ್ಕೆ ಅಮಿತ್ ಮಾಳವೀಯಾ ಮತ್ತವರ ತಂಡ ಕೆಲಸ ಮಾಡುತ್ತಿತ್ತು. ಹ್ಯಾ‌ಷ್‌ಟ್ಯಾಗ್‌, ಮೋದಿ ಹೊಗಳಿಕೆ ಇತ್ಯಾದಿ ನಡೆಸುತ್ತಿದ್ದರು. ಗಮನಿಸಬೇಕಾದ ಸಂಗತಿಯೆಂದರೆ, ಕಳೆದ ಎರಡು ವರ್ಷಗಳಿಂದ ಅವರು ಈ ರೀತಿಯ ಕ್ಯಾಂಪೇನ್ ನಡೆಸುತ್ತಿಲ್ಲ. ಈಗ ಈ ಕೆಲಸವನ್ನು ಸುದ್ದಿವಾಹಿನಿಗಳಿಗೆ ಮತ್ತು ಅದರ ಆಂಕರ್‌ಗಳಿಗೆ ನೀಡಲಾಗಿದೆ” ಎಂದಿದ್ದಾರೆ.

“ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಸ್ವತಃ ತಾವೇ ಟ್ವಿಟ್ ಮಾಡುವುದಿಲ್ಲ ಬದಲಿಗೆ ಸುದ್ದಿವಾಹಿನಿಯೊಂದರ ಅಂಕರ್‌ಗಳು ಮಾಡಿದ ಟ್ವೀಟನ್ನು ರೀಟ್ವೀಟ್‌ ಮಾಡುತ್ತಾರೆ. ಸುಧೀಶ್‌ ಚೌಧರಿ, ಚಿತ್ರಾ ಹೀಗೆ ಹಲವರಿದ್ದಾರೆ, ಮೊದಲು ಸುದ್ದಿಯಾಗುತ್ತದೆ. ಆಮೇಲೆ ಬಿಜೆಪಿ ಐಟಿ ಸೆಲ್‌ ನಿಂದ ವೈರಲ್ ಆಗುತ್ತದೆ. ಬಿಜೆಪಿ ಐಟಿ ಸೆಲ್ ಮಾಡುತ್ತಿದ್ದ ಕೆಲಸವನ್ನು ಈಗ ಮುಖ್ಯವಾಹಿನಿ ಸುದ್ದಿ ವಾಹಿನಿಗಳು ಮಾಡಲಾರಂಭಿಸಿವೆ. ಹಾಗಾಗಿ ಜನ ನಂಬುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಮ್ಮ ಕೆಲಸ ಸತ್ಯವನ್ನು ಹೇಳುವುದು. 90% ಸರಿ ಇದ್ದರೂ, ಶೇ. 10 ತಪ್ಪು ಏನು ಎಂಬುದನ್ನು ಬಯಲು ಮಾಡುವುದು. ಆದರೆ ಪ್ರಸ್ತುತ ಪ್ರತಿಯೊಂದನ್ನು ಸಂಪೂರ್ಣವಾಗಿ ಮರೆಮಾಚಲಾಗುತ್ತಿದೆ. ಸುದ್ದಿ ವಾಹಿನಿಗಳು ರಾಜಿಯಾಗಿವೆ. ಬಹುಶಃ, ಇಡಿ, ಐಟಿಗೆ ಹೆದರಿರಬಹುದು. ಕೆಲವರು ಸೈದ್ಧಾಂತಿಕವಾಗಿ ಅವರ ಜೊತೆಗೆ ಇರುವ ಕಾರಣಕ್ಕೂ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“2 ಕೋಟಿ ರೂ.ಗೆ ಟ್ವೀಟ್‌ ಮಾಡಿ ದೇಣಿಗೆಯನ್ನು ಸ್ವಂತ ಖಾತೆಗೆ ಪಡೆದುಕೊಂಡಿದ್ದಾರೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ನನಗೆ 2 ರೂ. ಕೋಟಿ ವಿಚಾರ ಗೊತ್ತೇ ಇರಲಿಲ್ಲ. ಬಿಡುಗಡೆಯಾಗಿ ಹೊರಬರುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ತಮಾಷೆ ಮಾಡುತ್ತಾ, ‘ಇನ್ನು ಮೇಲೆ 2 ಕೋಟಿ ರೂ. ಸಂಪಾದಿಸುತ್ತೀರಿ’ ಎಂದರು. ಆಗಲೂ ಅರ್ಥವಾಗಲಿಲ್ಲ. ಉತ್ತರ ಪ್ರದೇಶ ಗರಿಮಾ ಪ್ರಸಾದ್ ಈ ಆರೋಪ ಮಾಡಿದ್ದರು. ಟ್ವೀಟ್‌ ಮಾಡುವುದಕ್ಕೆ ಯಾರು 2 ರೂ. ಕೋಟಿ ಕೊಡುತ್ತಾರೆ? ಅಂತಾರಾಷ್ಟ್ರೀಯ ಖ್ಯಾತಿಯ ಸೆಲೆಬ್ರಿಟಿಯೊಬ್ಬರು ಯಾವುದಾದರೂ ಕಮರ್ಷಿಯಲ್ ವಸ್ತುವಿನ ಪ್ರಚಾರಕ್ಕೆ ಅಷ್ಟು ಪಡೆಯಬಹುದೇನೊ! ಅದಲ್ಲದೆ, ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ ಪಡೆದಿದ್ದೇನೆ ಎಂಬ ಆರೋಪವೂ ಬಂತು” ಎಂದಿದ್ದಾರೆ.

ಇದನ್ನೂ ಓದಿರಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಪೊಲೀಸ್ ವಿಚಾರಣೆಯ ಕುರಿತು ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು! ಹತ್ತು ಪರ್ಸೆಂಟ್‌ನಷ್ಟು ನನ್ನ ಟ್ವೀಟ್‌ಗಳ ಬಗ್ಗೆ ಕೇಳಲಿಲ್ಲ. ಹೆಚ್ಚು ಆಸಕ್ತಿ ಇದ್ದಿದ್ದು ಅಲ್ಟ್‌ ನ್ಯೂಸ್, ಅದಕ್ಕಿರುವ ಆರ್ಥಿಕ ಬೆಂಬಲ, ಹೇಗೆ ಶುರುವಾಯಿತು, ಪ್ರತೀಕ್ ಹೇಗೆ ಪರಿಚಯವಾದರು, ಪ್ರತೀಕ್‌ ತಂದೆಯ ಬಗ್ಗೆ ಮೊದಲಾಗಿ ಹೆಚ್ಚು ಪ್ರಶ್ನೆಗಳನ್ನು ಕೇಳಿದರು. ಮಾಧ್ಯಮಗಳಲ್ಲಿ ಟ್ವೀಟ್‌ ಕಾರಣಕ್ಕೆ ಎಂದು ಸುದ್ದಿಯಾಗುತ್ತಿದ್ದರೆ, ವಿಚಾರಣೆಯಲ್ಲಿ ಬೇರೆಯದೇ ಪ್ರಶ್ನೆಗಳು ನನ್ನ ಮುಂದೆ ಬರುತ್ತಿದ್ದವು. ವಿಚಾರಣೆ ಮಾಡುತ್ತಿದ್ದ ಅಧಿಕಾರಿಗಳಿಗೆ ವಾಟ್ಸ್‌ ಆಪ್ ಮೂಲಕ ಪ್ರಶ್ನೆಗಳು ಬರುತ್ತಿದ್ದವು. ನಾನು ಗಮನಿಸಿದ್ದೇನೆ. ಲಿಂಕ್‌ಗಳು ಬರುತ್ತಿದ್ದವು. ಒಪಿಇಂಡಿಯಾ ರೀತಿಯ ಲಿಂಕ್‌ಗಳು. ಅವುಗಳನ್ನು ಓಪನ್ ಮಾಡಿ, ನನ್ನನ್ನು ಪ್ರಶ್ನಿಸುತ್ತಿದ್ದರು” ಎಂದಿದ್ದಾರೆ.

ತಮ್ಮ ಜೀವನದ ಕುರಿತು ವಿಸ್ತೃತವಾಗಿ ‘ಈ ದಿನ.ಕಾಂ’ ಜೊತೆ ಜುಬೇ‌ರ್‌ ಮಾತನಾಡಿದ್ದಾರೆ. ತಮ್ಮ ಪತ್ರಿಕೋದ್ಯಮದ ಜೀವನದ ಸ್ವಾರಸ್ಯಕರ ಸಂಗತಿಗಳನ್ನು ಅವರು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಕನ್ನಡ ಮಾಧ್ಯಮವೊಂದಕ್ಕೆ ನೀಡಿದ ಮೊದಲ ಸಂದರ್ಶನವೂ ಇದಾಗಿದೆ. (ಸಂದರ್ಶನದ ಪೂರ್ಣ ಪಠ್ಯ ‘ಇಲ್ಲಿ’ ನೋಡಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿನ್ನಂಥ ದೇಶ ದ್ರೋಹಿಯ ಮರಣ ಶಾಸನ ಬರೆಯುವ ಕೆಲಸವನ್ನು ಅವರೇ ಮಾಡಬಹುದೇ !

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...