Homeಕರ್ನಾಟಕಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

‘ಈದಿನ.ಕಾಂ’ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು” ಎಂದಿದ್ದಾರೆ.

- Advertisement -
- Advertisement -

“ಬಿಜೆಪಿಯ ಐಟಿ ಸೆಲ್‌ ಮುಖ್ಯಸ್ಥರಾದ ಅಮಿತ್ ಮಾಳವೀಯ ಅವರ ಕೆಲಸವನ್ನು ಸುದ್ದಿವಾಹಿನಿಗಳೇ ಮಾಡುತ್ತಿವೆ” ಎಂದು ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ತಿಳಿಸಿದ್ದಾರೆ.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಪಡೆದು ಹೊರಗೆ ಬಂದಿರುವ ಅವರು, ಕನ್ನಡದ ಸುದ್ದಿ ಜಾಲತಾಣ ‘ಈ ದಿನ’ಕ್ಕೆ ವಿಶೇಷ ಸಂದರ್ಶನ ನೀಡಿದ್ದು, ಮುಖ್ಯವಾಹಿನಿ ಮಾಧ್ಯಮಗಳ ವರ್ತನೆಗಳನ್ನು ವಿಶ್ಲೇಷಿಸಿದ್ದಾರೆ.

ಪತ್ರಕರ್ತ ಎಸ್.ಕುಮಾರ್‌ ಅವರು ನಡೆಸಿರುವ ಸಂದರ್ಶನದಲ್ಲಿ, “ದ್ವೇಷವನ್ನು ಬಯಲು ಮಾಡುವವರನ್ನು ಬೇಟೆಯಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ, ಬಾಬಿ ಘೋಷ್‌ ಹೇಟ್‌ ಟ್ರ್ಯಾಕ್‌ ಮಾಡಿದ್ದಕ್ಕೆ ಕೆಲಸ ಕಳೆದುಕೊಂಡರು, ಹಿಂದುಸ್ತಾನ್ ಟೈಮ್ಸ್ ಅವರನ್ನು ಕೆಲಸದಿಂದ ತೆಗೆದು ಹಾಕಿತು. ನಿಮ್ಮಂತಹ ಫ್ಯಾಕ್ಟ್‌ಚೆಕರ್‌‌ಗಳು ಕೂಡ ವಿನಾ ಕಾರಣ ವಿವಿಧ ರೀತಿಯ ಒತ್ತಡಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಹೊತ್ತಲ್ಲಿ ಮಾಧ್ಯಮಗಳು ಹೇಗಿರಬೇಕು? ಈ ವಿದ್ಯಮಾನವನ್ನು ಹೇಗೆ ನೋಡ್ತೀರಿ?” ಎಂದು ಕೇಳಿರುವ ಪ್ರಶ್ನೆಗೆ ಜುಬೇರ್‌ ಪ್ರತಿಕ್ರಿಯೆ ನೀಡಿ ಮಾಧ್ಯಮಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಇಂದು ನೋಡುತ್ತಿರುವ ದ್ವೇಷದ ವಾತಾವರಣಕ್ಕೆ ಟಿವಿ ಚಾನೆಲ್‌ಗಳೇ ಕಾರಣ. 2014ರ ನಂತರವೂ ಎರಡು ಮೂರು ವರ್ಷ ಕಾಲ ಬಿಜೆಪಿ ಐಟಿ ಸೆಲ್ ಕ್ಯಾಂಪೇನ್‌ಗಳನ್ನು ಮಾಡುತ್ತಿತ್ತು. ಆಗ ಮಾಧ್ಯಮ ವಿರೋಧಿಸದೇ, ಸುಮ್ಮನಿದ್ದು ಬಿಡುತ್ತಿತ್ತು. ಯಾವುದೇ ಪ್ರೊಪಗಾಂಡ ಪ್ರಚಾರಕ್ಕೆ ಅಮಿತ್ ಮಾಳವೀಯಾ ಮತ್ತವರ ತಂಡ ಕೆಲಸ ಮಾಡುತ್ತಿತ್ತು. ಹ್ಯಾ‌ಷ್‌ಟ್ಯಾಗ್‌, ಮೋದಿ ಹೊಗಳಿಕೆ ಇತ್ಯಾದಿ ನಡೆಸುತ್ತಿದ್ದರು. ಗಮನಿಸಬೇಕಾದ ಸಂಗತಿಯೆಂದರೆ, ಕಳೆದ ಎರಡು ವರ್ಷಗಳಿಂದ ಅವರು ಈ ರೀತಿಯ ಕ್ಯಾಂಪೇನ್ ನಡೆಸುತ್ತಿಲ್ಲ. ಈಗ ಈ ಕೆಲಸವನ್ನು ಸುದ್ದಿವಾಹಿನಿಗಳಿಗೆ ಮತ್ತು ಅದರ ಆಂಕರ್‌ಗಳಿಗೆ ನೀಡಲಾಗಿದೆ” ಎಂದಿದ್ದಾರೆ.

“ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಸ್ವತಃ ತಾವೇ ಟ್ವಿಟ್ ಮಾಡುವುದಿಲ್ಲ ಬದಲಿಗೆ ಸುದ್ದಿವಾಹಿನಿಯೊಂದರ ಅಂಕರ್‌ಗಳು ಮಾಡಿದ ಟ್ವೀಟನ್ನು ರೀಟ್ವೀಟ್‌ ಮಾಡುತ್ತಾರೆ. ಸುಧೀಶ್‌ ಚೌಧರಿ, ಚಿತ್ರಾ ಹೀಗೆ ಹಲವರಿದ್ದಾರೆ, ಮೊದಲು ಸುದ್ದಿಯಾಗುತ್ತದೆ. ಆಮೇಲೆ ಬಿಜೆಪಿ ಐಟಿ ಸೆಲ್‌ ನಿಂದ ವೈರಲ್ ಆಗುತ್ತದೆ. ಬಿಜೆಪಿ ಐಟಿ ಸೆಲ್ ಮಾಡುತ್ತಿದ್ದ ಕೆಲಸವನ್ನು ಈಗ ಮುಖ್ಯವಾಹಿನಿ ಸುದ್ದಿ ವಾಹಿನಿಗಳು ಮಾಡಲಾರಂಭಿಸಿವೆ. ಹಾಗಾಗಿ ಜನ ನಂಬುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಮ್ಮ ಕೆಲಸ ಸತ್ಯವನ್ನು ಹೇಳುವುದು. 90% ಸರಿ ಇದ್ದರೂ, ಶೇ. 10 ತಪ್ಪು ಏನು ಎಂಬುದನ್ನು ಬಯಲು ಮಾಡುವುದು. ಆದರೆ ಪ್ರಸ್ತುತ ಪ್ರತಿಯೊಂದನ್ನು ಸಂಪೂರ್ಣವಾಗಿ ಮರೆಮಾಚಲಾಗುತ್ತಿದೆ. ಸುದ್ದಿ ವಾಹಿನಿಗಳು ರಾಜಿಯಾಗಿವೆ. ಬಹುಶಃ, ಇಡಿ, ಐಟಿಗೆ ಹೆದರಿರಬಹುದು. ಕೆಲವರು ಸೈದ್ಧಾಂತಿಕವಾಗಿ ಅವರ ಜೊತೆಗೆ ಇರುವ ಕಾರಣಕ್ಕೂ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“2 ಕೋಟಿ ರೂ.ಗೆ ಟ್ವೀಟ್‌ ಮಾಡಿ ದೇಣಿಗೆಯನ್ನು ಸ್ವಂತ ಖಾತೆಗೆ ಪಡೆದುಕೊಂಡಿದ್ದಾರೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ನನಗೆ 2 ರೂ. ಕೋಟಿ ವಿಚಾರ ಗೊತ್ತೇ ಇರಲಿಲ್ಲ. ಬಿಡುಗಡೆಯಾಗಿ ಹೊರಬರುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ತಮಾಷೆ ಮಾಡುತ್ತಾ, ‘ಇನ್ನು ಮೇಲೆ 2 ಕೋಟಿ ರೂ. ಸಂಪಾದಿಸುತ್ತೀರಿ’ ಎಂದರು. ಆಗಲೂ ಅರ್ಥವಾಗಲಿಲ್ಲ. ಉತ್ತರ ಪ್ರದೇಶ ಗರಿಮಾ ಪ್ರಸಾದ್ ಈ ಆರೋಪ ಮಾಡಿದ್ದರು. ಟ್ವೀಟ್‌ ಮಾಡುವುದಕ್ಕೆ ಯಾರು 2 ರೂ. ಕೋಟಿ ಕೊಡುತ್ತಾರೆ? ಅಂತಾರಾಷ್ಟ್ರೀಯ ಖ್ಯಾತಿಯ ಸೆಲೆಬ್ರಿಟಿಯೊಬ್ಬರು ಯಾವುದಾದರೂ ಕಮರ್ಷಿಯಲ್ ವಸ್ತುವಿನ ಪ್ರಚಾರಕ್ಕೆ ಅಷ್ಟು ಪಡೆಯಬಹುದೇನೊ! ಅದಲ್ಲದೆ, ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ ಪಡೆದಿದ್ದೇನೆ ಎಂಬ ಆರೋಪವೂ ಬಂತು” ಎಂದಿದ್ದಾರೆ.

ಇದನ್ನೂ ಓದಿರಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಪೊಲೀಸ್ ವಿಚಾರಣೆಯ ಕುರಿತು ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು! ಹತ್ತು ಪರ್ಸೆಂಟ್‌ನಷ್ಟು ನನ್ನ ಟ್ವೀಟ್‌ಗಳ ಬಗ್ಗೆ ಕೇಳಲಿಲ್ಲ. ಹೆಚ್ಚು ಆಸಕ್ತಿ ಇದ್ದಿದ್ದು ಅಲ್ಟ್‌ ನ್ಯೂಸ್, ಅದಕ್ಕಿರುವ ಆರ್ಥಿಕ ಬೆಂಬಲ, ಹೇಗೆ ಶುರುವಾಯಿತು, ಪ್ರತೀಕ್ ಹೇಗೆ ಪರಿಚಯವಾದರು, ಪ್ರತೀಕ್‌ ತಂದೆಯ ಬಗ್ಗೆ ಮೊದಲಾಗಿ ಹೆಚ್ಚು ಪ್ರಶ್ನೆಗಳನ್ನು ಕೇಳಿದರು. ಮಾಧ್ಯಮಗಳಲ್ಲಿ ಟ್ವೀಟ್‌ ಕಾರಣಕ್ಕೆ ಎಂದು ಸುದ್ದಿಯಾಗುತ್ತಿದ್ದರೆ, ವಿಚಾರಣೆಯಲ್ಲಿ ಬೇರೆಯದೇ ಪ್ರಶ್ನೆಗಳು ನನ್ನ ಮುಂದೆ ಬರುತ್ತಿದ್ದವು. ವಿಚಾರಣೆ ಮಾಡುತ್ತಿದ್ದ ಅಧಿಕಾರಿಗಳಿಗೆ ವಾಟ್ಸ್‌ ಆಪ್ ಮೂಲಕ ಪ್ರಶ್ನೆಗಳು ಬರುತ್ತಿದ್ದವು. ನಾನು ಗಮನಿಸಿದ್ದೇನೆ. ಲಿಂಕ್‌ಗಳು ಬರುತ್ತಿದ್ದವು. ಒಪಿಇಂಡಿಯಾ ರೀತಿಯ ಲಿಂಕ್‌ಗಳು. ಅವುಗಳನ್ನು ಓಪನ್ ಮಾಡಿ, ನನ್ನನ್ನು ಪ್ರಶ್ನಿಸುತ್ತಿದ್ದರು” ಎಂದಿದ್ದಾರೆ.

ತಮ್ಮ ಜೀವನದ ಕುರಿತು ವಿಸ್ತೃತವಾಗಿ ‘ಈ ದಿನ.ಕಾಂ’ ಜೊತೆ ಜುಬೇ‌ರ್‌ ಮಾತನಾಡಿದ್ದಾರೆ. ತಮ್ಮ ಪತ್ರಿಕೋದ್ಯಮದ ಜೀವನದ ಸ್ವಾರಸ್ಯಕರ ಸಂಗತಿಗಳನ್ನು ಅವರು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಕನ್ನಡ ಮಾಧ್ಯಮವೊಂದಕ್ಕೆ ನೀಡಿದ ಮೊದಲ ಸಂದರ್ಶನವೂ ಇದಾಗಿದೆ. (ಸಂದರ್ಶನದ ಪೂರ್ಣ ಪಠ್ಯ ‘ಇಲ್ಲಿ’ ನೋಡಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿನ್ನಂಥ ದೇಶ ದ್ರೋಹಿಯ ಮರಣ ಶಾಸನ ಬರೆಯುವ ಕೆಲಸವನ್ನು ಅವರೇ ಮಾಡಬಹುದೇ !

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....