Homeಕರ್ನಾಟಕಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

‘ಈದಿನ.ಕಾಂ’ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು” ಎಂದಿದ್ದಾರೆ.

- Advertisement -
- Advertisement -

“ಬಿಜೆಪಿಯ ಐಟಿ ಸೆಲ್‌ ಮುಖ್ಯಸ್ಥರಾದ ಅಮಿತ್ ಮಾಳವೀಯ ಅವರ ಕೆಲಸವನ್ನು ಸುದ್ದಿವಾಹಿನಿಗಳೇ ಮಾಡುತ್ತಿವೆ” ಎಂದು ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ತಿಳಿಸಿದ್ದಾರೆ.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಪಡೆದು ಹೊರಗೆ ಬಂದಿರುವ ಅವರು, ಕನ್ನಡದ ಸುದ್ದಿ ಜಾಲತಾಣ ‘ಈ ದಿನ’ಕ್ಕೆ ವಿಶೇಷ ಸಂದರ್ಶನ ನೀಡಿದ್ದು, ಮುಖ್ಯವಾಹಿನಿ ಮಾಧ್ಯಮಗಳ ವರ್ತನೆಗಳನ್ನು ವಿಶ್ಲೇಷಿಸಿದ್ದಾರೆ.

ಪತ್ರಕರ್ತ ಎಸ್.ಕುಮಾರ್‌ ಅವರು ನಡೆಸಿರುವ ಸಂದರ್ಶನದಲ್ಲಿ, “ದ್ವೇಷವನ್ನು ಬಯಲು ಮಾಡುವವರನ್ನು ಬೇಟೆಯಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ, ಬಾಬಿ ಘೋಷ್‌ ಹೇಟ್‌ ಟ್ರ್ಯಾಕ್‌ ಮಾಡಿದ್ದಕ್ಕೆ ಕೆಲಸ ಕಳೆದುಕೊಂಡರು, ಹಿಂದುಸ್ತಾನ್ ಟೈಮ್ಸ್ ಅವರನ್ನು ಕೆಲಸದಿಂದ ತೆಗೆದು ಹಾಕಿತು. ನಿಮ್ಮಂತಹ ಫ್ಯಾಕ್ಟ್‌ಚೆಕರ್‌‌ಗಳು ಕೂಡ ವಿನಾ ಕಾರಣ ವಿವಿಧ ರೀತಿಯ ಒತ್ತಡಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಹೊತ್ತಲ್ಲಿ ಮಾಧ್ಯಮಗಳು ಹೇಗಿರಬೇಕು? ಈ ವಿದ್ಯಮಾನವನ್ನು ಹೇಗೆ ನೋಡ್ತೀರಿ?” ಎಂದು ಕೇಳಿರುವ ಪ್ರಶ್ನೆಗೆ ಜುಬೇರ್‌ ಪ್ರತಿಕ್ರಿಯೆ ನೀಡಿ ಮಾಧ್ಯಮಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಇಂದು ನೋಡುತ್ತಿರುವ ದ್ವೇಷದ ವಾತಾವರಣಕ್ಕೆ ಟಿವಿ ಚಾನೆಲ್‌ಗಳೇ ಕಾರಣ. 2014ರ ನಂತರವೂ ಎರಡು ಮೂರು ವರ್ಷ ಕಾಲ ಬಿಜೆಪಿ ಐಟಿ ಸೆಲ್ ಕ್ಯಾಂಪೇನ್‌ಗಳನ್ನು ಮಾಡುತ್ತಿತ್ತು. ಆಗ ಮಾಧ್ಯಮ ವಿರೋಧಿಸದೇ, ಸುಮ್ಮನಿದ್ದು ಬಿಡುತ್ತಿತ್ತು. ಯಾವುದೇ ಪ್ರೊಪಗಾಂಡ ಪ್ರಚಾರಕ್ಕೆ ಅಮಿತ್ ಮಾಳವೀಯಾ ಮತ್ತವರ ತಂಡ ಕೆಲಸ ಮಾಡುತ್ತಿತ್ತು. ಹ್ಯಾ‌ಷ್‌ಟ್ಯಾಗ್‌, ಮೋದಿ ಹೊಗಳಿಕೆ ಇತ್ಯಾದಿ ನಡೆಸುತ್ತಿದ್ದರು. ಗಮನಿಸಬೇಕಾದ ಸಂಗತಿಯೆಂದರೆ, ಕಳೆದ ಎರಡು ವರ್ಷಗಳಿಂದ ಅವರು ಈ ರೀತಿಯ ಕ್ಯಾಂಪೇನ್ ನಡೆಸುತ್ತಿಲ್ಲ. ಈಗ ಈ ಕೆಲಸವನ್ನು ಸುದ್ದಿವಾಹಿನಿಗಳಿಗೆ ಮತ್ತು ಅದರ ಆಂಕರ್‌ಗಳಿಗೆ ನೀಡಲಾಗಿದೆ” ಎಂದಿದ್ದಾರೆ.

“ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಸ್ವತಃ ತಾವೇ ಟ್ವಿಟ್ ಮಾಡುವುದಿಲ್ಲ ಬದಲಿಗೆ ಸುದ್ದಿವಾಹಿನಿಯೊಂದರ ಅಂಕರ್‌ಗಳು ಮಾಡಿದ ಟ್ವೀಟನ್ನು ರೀಟ್ವೀಟ್‌ ಮಾಡುತ್ತಾರೆ. ಸುಧೀಶ್‌ ಚೌಧರಿ, ಚಿತ್ರಾ ಹೀಗೆ ಹಲವರಿದ್ದಾರೆ, ಮೊದಲು ಸುದ್ದಿಯಾಗುತ್ತದೆ. ಆಮೇಲೆ ಬಿಜೆಪಿ ಐಟಿ ಸೆಲ್‌ ನಿಂದ ವೈರಲ್ ಆಗುತ್ತದೆ. ಬಿಜೆಪಿ ಐಟಿ ಸೆಲ್ ಮಾಡುತ್ತಿದ್ದ ಕೆಲಸವನ್ನು ಈಗ ಮುಖ್ಯವಾಹಿನಿ ಸುದ್ದಿ ವಾಹಿನಿಗಳು ಮಾಡಲಾರಂಭಿಸಿವೆ. ಹಾಗಾಗಿ ಜನ ನಂಬುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಮ್ಮ ಕೆಲಸ ಸತ್ಯವನ್ನು ಹೇಳುವುದು. 90% ಸರಿ ಇದ್ದರೂ, ಶೇ. 10 ತಪ್ಪು ಏನು ಎಂಬುದನ್ನು ಬಯಲು ಮಾಡುವುದು. ಆದರೆ ಪ್ರಸ್ತುತ ಪ್ರತಿಯೊಂದನ್ನು ಸಂಪೂರ್ಣವಾಗಿ ಮರೆಮಾಚಲಾಗುತ್ತಿದೆ. ಸುದ್ದಿ ವಾಹಿನಿಗಳು ರಾಜಿಯಾಗಿವೆ. ಬಹುಶಃ, ಇಡಿ, ಐಟಿಗೆ ಹೆದರಿರಬಹುದು. ಕೆಲವರು ಸೈದ್ಧಾಂತಿಕವಾಗಿ ಅವರ ಜೊತೆಗೆ ಇರುವ ಕಾರಣಕ್ಕೂ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“2 ಕೋಟಿ ರೂ.ಗೆ ಟ್ವೀಟ್‌ ಮಾಡಿ ದೇಣಿಗೆಯನ್ನು ಸ್ವಂತ ಖಾತೆಗೆ ಪಡೆದುಕೊಂಡಿದ್ದಾರೆ” ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ನನಗೆ 2 ರೂ. ಕೋಟಿ ವಿಚಾರ ಗೊತ್ತೇ ಇರಲಿಲ್ಲ. ಬಿಡುಗಡೆಯಾಗಿ ಹೊರಬರುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ತಮಾಷೆ ಮಾಡುತ್ತಾ, ‘ಇನ್ನು ಮೇಲೆ 2 ಕೋಟಿ ರೂ. ಸಂಪಾದಿಸುತ್ತೀರಿ’ ಎಂದರು. ಆಗಲೂ ಅರ್ಥವಾಗಲಿಲ್ಲ. ಉತ್ತರ ಪ್ರದೇಶ ಗರಿಮಾ ಪ್ರಸಾದ್ ಈ ಆರೋಪ ಮಾಡಿದ್ದರು. ಟ್ವೀಟ್‌ ಮಾಡುವುದಕ್ಕೆ ಯಾರು 2 ರೂ. ಕೋಟಿ ಕೊಡುತ್ತಾರೆ? ಅಂತಾರಾಷ್ಟ್ರೀಯ ಖ್ಯಾತಿಯ ಸೆಲೆಬ್ರಿಟಿಯೊಬ್ಬರು ಯಾವುದಾದರೂ ಕಮರ್ಷಿಯಲ್ ವಸ್ತುವಿನ ಪ್ರಚಾರಕ್ಕೆ ಅಷ್ಟು ಪಡೆಯಬಹುದೇನೊ! ಅದಲ್ಲದೆ, ಪಾಕಿಸ್ತಾನ, ಸಿರಿಯಾದಿಂದ ದೇಣಿಗೆ ಪಡೆದಿದ್ದೇನೆ ಎಂಬ ಆರೋಪವೂ ಬಂತು” ಎಂದಿದ್ದಾರೆ.

ಇದನ್ನೂ ಓದಿರಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಪೊಲೀಸ್ ವಿಚಾರಣೆಯ ಕುರಿತು ಮಾತನಾಡಿರುವ ಅವರು, “ಟ್ವೀಟ್‌ ಕಾರಣಕ್ಕೆ ನನ್ನ ಮೇಲೆ ಎಫ್‌ಐಆರ್ ಹಾಕಲಾಯಿತಾದರೂ ವಿಚಾರಣೆಯಲ್ಲಿ ಕೇಳಿದ್ದು ಬೇರೆಯದೇ ಪ್ರಶ್ನೆಗಳನ್ನು! ಹತ್ತು ಪರ್ಸೆಂಟ್‌ನಷ್ಟು ನನ್ನ ಟ್ವೀಟ್‌ಗಳ ಬಗ್ಗೆ ಕೇಳಲಿಲ್ಲ. ಹೆಚ್ಚು ಆಸಕ್ತಿ ಇದ್ದಿದ್ದು ಅಲ್ಟ್‌ ನ್ಯೂಸ್, ಅದಕ್ಕಿರುವ ಆರ್ಥಿಕ ಬೆಂಬಲ, ಹೇಗೆ ಶುರುವಾಯಿತು, ಪ್ರತೀಕ್ ಹೇಗೆ ಪರಿಚಯವಾದರು, ಪ್ರತೀಕ್‌ ತಂದೆಯ ಬಗ್ಗೆ ಮೊದಲಾಗಿ ಹೆಚ್ಚು ಪ್ರಶ್ನೆಗಳನ್ನು ಕೇಳಿದರು. ಮಾಧ್ಯಮಗಳಲ್ಲಿ ಟ್ವೀಟ್‌ ಕಾರಣಕ್ಕೆ ಎಂದು ಸುದ್ದಿಯಾಗುತ್ತಿದ್ದರೆ, ವಿಚಾರಣೆಯಲ್ಲಿ ಬೇರೆಯದೇ ಪ್ರಶ್ನೆಗಳು ನನ್ನ ಮುಂದೆ ಬರುತ್ತಿದ್ದವು. ವಿಚಾರಣೆ ಮಾಡುತ್ತಿದ್ದ ಅಧಿಕಾರಿಗಳಿಗೆ ವಾಟ್ಸ್‌ ಆಪ್ ಮೂಲಕ ಪ್ರಶ್ನೆಗಳು ಬರುತ್ತಿದ್ದವು. ನಾನು ಗಮನಿಸಿದ್ದೇನೆ. ಲಿಂಕ್‌ಗಳು ಬರುತ್ತಿದ್ದವು. ಒಪಿಇಂಡಿಯಾ ರೀತಿಯ ಲಿಂಕ್‌ಗಳು. ಅವುಗಳನ್ನು ಓಪನ್ ಮಾಡಿ, ನನ್ನನ್ನು ಪ್ರಶ್ನಿಸುತ್ತಿದ್ದರು” ಎಂದಿದ್ದಾರೆ.

ತಮ್ಮ ಜೀವನದ ಕುರಿತು ವಿಸ್ತೃತವಾಗಿ ‘ಈ ದಿನ.ಕಾಂ’ ಜೊತೆ ಜುಬೇ‌ರ್‌ ಮಾತನಾಡಿದ್ದಾರೆ. ತಮ್ಮ ಪತ್ರಿಕೋದ್ಯಮದ ಜೀವನದ ಸ್ವಾರಸ್ಯಕರ ಸಂಗತಿಗಳನ್ನು ಅವರು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಕನ್ನಡ ಮಾಧ್ಯಮವೊಂದಕ್ಕೆ ನೀಡಿದ ಮೊದಲ ಸಂದರ್ಶನವೂ ಇದಾಗಿದೆ. (ಸಂದರ್ಶನದ ಪೂರ್ಣ ಪಠ್ಯ ‘ಇಲ್ಲಿ’ ನೋಡಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿನ್ನಂಥ ದೇಶ ದ್ರೋಹಿಯ ಮರಣ ಶಾಸನ ಬರೆಯುವ ಕೆಲಸವನ್ನು ಅವರೇ ಮಾಡಬಹುದೇ !

LEAVE A REPLY

Please enter your comment!
Please enter your name here

- Advertisment -

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...