Homeಮುಖಪುಟಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೆ ಅಲೆ ತೀವ್ರವಾಗಿ ಹರಡುತ್ತಿದೆ. ಬಿಜೆಪಿ ‘ಐಟಿ ಸೆಲ್‌’ ಅವುಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಈ ನಡುವೆ ಬಂಗಾಳದಲ್ಲಿ ಚುನಾವಣೋತ್ತರ ಗಲಭೆ ನಡೆದಿದ್ದು, ಬಿಜೆಪಿ ಐಟಿ ಸೆಲ್ ಹಳೆಯ ಫೋಟೋಗಳನ್ನು ಬಳಸಿಕೊಂಡು ಬಂಗಾಳ ಗಲಭೆಯ ಚಿತ್ರಗಳು ಎಂದು ಸುಳ್ಳು ಹರಡುತ್ತಾ ಜನರ ದಾರಿ ತಪ್ಪಿಸುತ್ತಿದೆ. ಬಿಜೆಪಿಯು ಬೃಹತ್‌ ಐಟಿ ಸೆಲ್‌ ನೆಟ್ವರ್ಕ್ ಹೊಂದಿದೆ.

ಬಿಜೆಪಿ ಐಟಿ ಸೆಲ್‌ನ ಖಾತೆಯಾದ ‘ವಿನಿತಾ ಹಿಂದೂಸ್ತಾನಿ’ ಎಂಬ ಖಾತೆಯು ಬೆಂಬಲಿಗರನ್ನು ಸೆಳೆಯಲು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಯುವತಿಯ ಫೋಟೋವನ್ನು ಬಳಸಿಕೊಂಡಿದ್ದು ಪತ್ತೆ ಹಚ್ಚಲಾಗಿದೆ. ಇದೀಗ ಈ ಖಾತೆಯನ್ನು ಡಿಲಿಟ್ ಮಾಡಲಾಗಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ

‘ವಿನಿತಾ ಹಿಂದೂಸ್ತಾನಿ’ ಖಾತೆಯೂ ಟ್ವಿಟರ್‌ನಲ್ಲಿ ಸುಮಾರು 21 ಸಾವಿರಕ್ಕೂ ಅಧಿಕ ಫಾಲೋವರ್‌‌ಗಳನ್ನು ಹೊಂದಿತ್ತು. ಇದರ ಬಯೋದಲ್ಲಿ, ಬಿಹಾರಿ ಮತ್ತು ಭಾರತೀಯ ಆಗಿದ್ದಕ್ಕೆ ಹೆಮ್ಮ, ಟೀಚರ್‌, ಕೇಸರಿ ಪ್ರೀತಿ, ಬಿಜೆಪಿ ಮತ್ತು ಆರೆಸ್ಸೆಸ್ ಫಾಲೋವರ್‌, ಹೆಮ್ಮೆಯ ಹಿಂದೂ ಎಂದು ಬರೆಯಲಾಗಿತ್ತು.

ಈ ಖಾತೆಯು ಬಿಜೆಪಿ ಐಟಿ ಸೆಲ್‌ನ ಖಾತೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವೆಬ್‌ಸೈಟ್‌ಗೆ ಲಿಂಕ್ ಆಗಿತ್ತು. ಟ್ವಿಟರ್‌ನಲ್ಲಿ ಸಾಮಾನ್ಯವಾಗಿ ಈ ರೀತಿಯ ಖಾತೆಗಳು ಬಿಜೆಪಿ ಸಂಬಂಧಿತ ಸುದ್ದಿಗಳನ್ನು ಅಥವಾ ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ತೊಡಗಿಕೊಂಡಿದೆ. ಇದೀಗ ಈ ಖಾತೆಯನ್ನು ಡಿಲೀಟ್ ಮಾಡಲಾಗಿದ್ದು ಅದೇ ಚಿತ್ರವನ್ನು ಬಳಸಿಕೊಂಡು ‘ವಿನಿತಾ’ ಹೆಸರಲ್ಲಿ ಮತ್ತೆ ಎರಡು ಖಾತೆಗಳು ಟ್ವಿಟರ್‌ನಲ್ಲಿ ಸಕ್ರೀಯವಾಗಿದೆ. ಅದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಈ ಖಾತೆಗಳಲ್ಲಿನ ಫ್ರೋಫೈಲ್‌ ಚಿತ್ರವನ್ನು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಎಂಬ ಹೆಸರಿನ ಫೇಸ್‌ಬುಕ್ ಫೇಜ್‌ನಿಂದ ಪಡೆಯಲಾಗಿದೆ. ಈ ಚಿತ್ರವನ್ನು ಎಪ್ರಿಲ್‌ 12 2014 ರಂದು ಪೇಜ್‌ಗೆ ಅಪ್ಲೋಡ್ ಮಾಡಲಾತ್ತು·

ಈ ಬಗ್ಗೆ ಆಲ್ಟ್‌ನ್ಯೂಸ್ ಸಂಸ್ಥಾಪಕ ಮೊಹಮ್ಮದ್ ಝುಬೇರ್‌, “ಕ್ಯೂಟ್‌ ‘ಹಿಂದೂಸ್ತಾನಿ’ ಹುಡುಗ @ vinita4india ಮುಗ್ಧ ಬಿಜೆಪಿ ಬೆಂಬಲಿಗರನ್ನು ಆಕರ್ಷಿಸಲು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಪೇಜ್‌ನಿಂದ ಚಿತ್ರವನ್ನು ಎತ್ತುತ್ತಿದ್ದಾನೆ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...