Homeಕರ್ನಾಟಕಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 (ಸೋಮವಾರ) ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಂಡಿದೆ.

ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ಕರ್ನಾಟಕ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ’ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ” ಎಂದು ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಗಣೇಶ ಹಬ್ಬಕ್ಕೆ ಕೊರೊನಾ ರೂಲ್ಸ್, ದೇದೇವಾಲಯಗಳಿಗೆ ಕೊರೊನಾ ರೂಲ್ಸ್, ಮದುವೆ ಸಮಾರಂಭಗಳಿಗೆ ಕೊರೊನಾ ರೂಲ್ಸ್, ಸಂತೆ, ಮಾರ್ಕೆಟ್‌ಗಳಿಗೆ ಕೊರೊನಾ ರೂಲ್ಸ್ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ!” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಶೀರ್ವಾದ ಯಾತ್ರೆಯಲ್ಲಿ ಉಂಟಾದ ನೂಕುನುಗ್ಗಲಿನ ಚಿತ್ರಗಳನ್ನು ಹಂಚಿಕೊಂಡಿದೆ.

“ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ?” ಎಂದು ಟೀಕಿಸಿದೆ.

ಕೊರೊನಾಶಿರ್ವಾದಯಾತ್ರೆ ಹ್ಯಾಶ್‌ಟ್ಯಾಗ್ ಬಳಸಿ ಸರ್ಕಾರ ಜನಾಶೀರ್ವಾದ ಯಾತ್ರೆ ಹೆಸರಲ್ಲಿ ಕೊರೊನಾ ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿಗೆ ವಿಪಕ್ಷಗಳು ಅನುಮತಿ ನೀಡದ ಕಾರಣ, ಇಂತಹ ಜನಾಶೀರ್ವಾದ ಯಾತ್ರೆಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿತ್ತು ಎನ್ನಲಾಗಿದೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮಾಹಿತಿ ನೀಡಿದ್ದರು.


ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...