Homeಕರ್ನಾಟಕಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 (ಸೋಮವಾರ) ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಂಡಿದೆ.

ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ಕರ್ನಾಟಕ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ’ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ” ಎಂದು ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಗಣೇಶ ಹಬ್ಬಕ್ಕೆ ಕೊರೊನಾ ರೂಲ್ಸ್, ದೇದೇವಾಲಯಗಳಿಗೆ ಕೊರೊನಾ ರೂಲ್ಸ್, ಮದುವೆ ಸಮಾರಂಭಗಳಿಗೆ ಕೊರೊನಾ ರೂಲ್ಸ್, ಸಂತೆ, ಮಾರ್ಕೆಟ್‌ಗಳಿಗೆ ಕೊರೊನಾ ರೂಲ್ಸ್ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ!” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಶೀರ್ವಾದ ಯಾತ್ರೆಯಲ್ಲಿ ಉಂಟಾದ ನೂಕುನುಗ್ಗಲಿನ ಚಿತ್ರಗಳನ್ನು ಹಂಚಿಕೊಂಡಿದೆ.

“ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ?” ಎಂದು ಟೀಕಿಸಿದೆ.

ಕೊರೊನಾಶಿರ್ವಾದಯಾತ್ರೆ ಹ್ಯಾಶ್‌ಟ್ಯಾಗ್ ಬಳಸಿ ಸರ್ಕಾರ ಜನಾಶೀರ್ವಾದ ಯಾತ್ರೆ ಹೆಸರಲ್ಲಿ ಕೊರೊನಾ ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿಗೆ ವಿಪಕ್ಷಗಳು ಅನುಮತಿ ನೀಡದ ಕಾರಣ, ಇಂತಹ ಜನಾಶೀರ್ವಾದ ಯಾತ್ರೆಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿತ್ತು ಎನ್ನಲಾಗಿದೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮಾಹಿತಿ ನೀಡಿದ್ದರು.


ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...