Homeಕರ್ನಾಟಕಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 (ಸೋಮವಾರ) ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಂಡಿದೆ.

ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ಕರ್ನಾಟಕ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ’ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ” ಎಂದು ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಗಣೇಶ ಹಬ್ಬಕ್ಕೆ ಕೊರೊನಾ ರೂಲ್ಸ್, ದೇದೇವಾಲಯಗಳಿಗೆ ಕೊರೊನಾ ರೂಲ್ಸ್, ಮದುವೆ ಸಮಾರಂಭಗಳಿಗೆ ಕೊರೊನಾ ರೂಲ್ಸ್, ಸಂತೆ, ಮಾರ್ಕೆಟ್‌ಗಳಿಗೆ ಕೊರೊನಾ ರೂಲ್ಸ್ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ!” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಶೀರ್ವಾದ ಯಾತ್ರೆಯಲ್ಲಿ ಉಂಟಾದ ನೂಕುನುಗ್ಗಲಿನ ಚಿತ್ರಗಳನ್ನು ಹಂಚಿಕೊಂಡಿದೆ.

“ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ?” ಎಂದು ಟೀಕಿಸಿದೆ.

ಕೊರೊನಾಶಿರ್ವಾದಯಾತ್ರೆ ಹ್ಯಾಶ್‌ಟ್ಯಾಗ್ ಬಳಸಿ ಸರ್ಕಾರ ಜನಾಶೀರ್ವಾದ ಯಾತ್ರೆ ಹೆಸರಲ್ಲಿ ಕೊರೊನಾ ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿಗೆ ವಿಪಕ್ಷಗಳು ಅನುಮತಿ ನೀಡದ ಕಾರಣ, ಇಂತಹ ಜನಾಶೀರ್ವಾದ ಯಾತ್ರೆಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿತ್ತು ಎನ್ನಲಾಗಿದೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮಾಹಿತಿ ನೀಡಿದ್ದರು.


ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...