Homeಕರ್ನಾಟಕಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 (ಸೋಮವಾರ) ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಂಡಿದೆ.

ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ಕರ್ನಾಟಕ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ’ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ” ಎಂದು ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಗಣೇಶ ಹಬ್ಬಕ್ಕೆ ಕೊರೊನಾ ರೂಲ್ಸ್, ದೇದೇವಾಲಯಗಳಿಗೆ ಕೊರೊನಾ ರೂಲ್ಸ್, ಮದುವೆ ಸಮಾರಂಭಗಳಿಗೆ ಕೊರೊನಾ ರೂಲ್ಸ್, ಸಂತೆ, ಮಾರ್ಕೆಟ್‌ಗಳಿಗೆ ಕೊರೊನಾ ರೂಲ್ಸ್ ಎಲ್ಲದಕ್ಕೂ ಕೋವಿಡ್ ರೂಲ್ಸ್ ಜಾರಿಗೊಳಿಸಿದ್ದರೂ ಬಿಜೆಪಿ ಪಕ್ಷದ ಜನಾಶೀರ್ವಾದ ಯಾತ್ರೆಗೆ ಯಾವುದೇ ರೂಲ್ಸ್ ಇಲ್ಲ, ಅವರ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೇ!” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಶೀರ್ವಾದ ಯಾತ್ರೆಯಲ್ಲಿ ಉಂಟಾದ ನೂಕುನುಗ್ಗಲಿನ ಚಿತ್ರಗಳನ್ನು ಹಂಚಿಕೊಂಡಿದೆ.

“ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ?” ಎಂದು ಟೀಕಿಸಿದೆ.

ಕೊರೊನಾಶಿರ್ವಾದಯಾತ್ರೆ ಹ್ಯಾಶ್‌ಟ್ಯಾಗ್ ಬಳಸಿ ಸರ್ಕಾರ ಜನಾಶೀರ್ವಾದ ಯಾತ್ರೆ ಹೆಸರಲ್ಲಿ ಕೊರೊನಾ ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿಗೆ ವಿಪಕ್ಷಗಳು ಅನುಮತಿ ನೀಡದ ಕಾರಣ, ಇಂತಹ ಜನಾಶೀರ್ವಾದ ಯಾತ್ರೆಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿತ್ತು ಎನ್ನಲಾಗಿದೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮಾಹಿತಿ ನೀಡಿದ್ದರು.


ಇದನ್ನೂ ಓದಿ: 3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...