Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...