Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...