Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...