Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...