Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...