Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...