Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

ಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಇದೀಗ ಜೆಡಿಎಸ್ ಪಕ್ಷ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎನ ಭಾಗವಾಗಿದೆ. ಆದರೆ, ಮೈತ್ರಿ ಬೆನ್ನಲ್ಲಿಯೇ ಜೆಡಿಎಸ್‌ನಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಒಂದಿಷ್ಟು ಶಾಸಕರು ಹಾಗೂ ಹಲವು ಮುಸ್ಲಿಂ ಮುಖಂಡರು ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯಾತೀತ ಪಕ್ಷ ಮೈತ್ರಿ ಮಾಡಿಕೊಂಡಿರುವ ವರಿಷ್ಠರ ನಡೆಗೆ ಬೇಸತ್ತ ಜೆಡಿಎಸ್‌ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ಈಗಾಗಲೇ ಕೆಲವರು ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ತೊರೆಯುವುದಾಗಿ ಸಿಎಂ ಇಬ್ರಾಹಿಂ ಅವರೂ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಈ ನಡುವೆ ಇನ್ನೂ ಹಲವು ಮುಸ್ಲಿಂ ಮುಖಂಡರು ಪಕ್ಷ ತೊರೆಯುವ ನಿಲುವಿಗೆ ಬಂದಿದ್ದಾರೆ. ಈ ಸಂಬಂಧ ಪಕ್ಷದ ಮುಸ್ಲಿಂ ಮುಖಂಡರು ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ಚರ್ಚಿಸಿದ್ದಾರೆ.

ಈ ಸಭೆಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೆಜ್ಜೆ ಹಾಕಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಸಮುದಾಯದ ಜನರ ಭಾವನೆಗೆ ಜೆಡಿಎಸ್‌ ವಿರುದ್ಧವಾಗಿ ನಡೆದುಕೊಂಡಿದ್ದನ್ನು ಮನವರಿಕೆ ಮಾಡಿಕೊಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಯಾದಗಿರಿ ಜಿಲ್ಲೆಯ ಗುರುಮಿಠಕಲ್‌ನ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು ಅವರು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಬಹಿರಂಗವಾಗಿಯೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಈ ಮೈತ್ರಿ ತಮ್ಮ ಒಪ್ಪಿಗೆ ಇಲ್ಲ, ಒಂದು ವೇಳೆ ನಮ್ಮ ವರಿಷ್ಠರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೇ ಕ್ಷೇತ್ರದ ಜನಾಭಿಪ್ರಾಯ ಕೇಳಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಅದರ ಬೆನ್ನಲ್ಲಿಯೇ ತಮ್ಮ ಜನ ಸಂಪರ್ಕ ಕಚೇರಿಯನ್ನು ಸಚಿವ ಶರಣಪ್ಪ ದರ್ಶನಾಪುರ ಅವರಿಂದ ಉದ್ಘಾಟನೆ ಮಾಡಿಸಿದ್ದರು. ಜೆಡಿಎಸ್‌ ಶಾಸಕರ ಈ ನಡೆ ಕುತೂಹಲ ಕೆರಳಿಸಿದೆ.

ಕೇವಲ ಶರಣಗೌಡ ಕಂದಕೂರು ಮಾತ್ರವಲ್ಲದೇ ಹಲವು ಜೆಡಿಎಸ್‌ ಶಾಸಕರು ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 7-8 ಶಾಸಕರು ಮುಂದಿನ ನಡೆ ಏನು ಎಂಬುದನ್ನು ತೀರ್ಮಾನಿಸಲು ಸಭೆ ಸೇರುತ್ತಾರೆ ಎಂದು ಹೇಳಲಾಗಿದೆ.

ಜೆಡಿಎಸ್‌ – ಬಿಜೆಪಿ ಮೈತ್ರಿ ಖಚಿತವಾಗುತ್ತಿದಂತೆ ಕೊಡಗು ಜೆಡಿಎಸ್‌ ಮಾಜಿ ಅಧ್ಯಕ್ಷ ಕೆಎಂ ಗಣೇಶ್‌ ಮತ್ತು ಅವರ ಬೆಂಬಲಿಗರು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್‌ ಪಕ್ಷದ ಮಡಿಕೇರಿ ಬ್ಲಾಕ್‌ ಅಧ್ಯಕ್ಷರಾಗಿದ್ದ ಕೆಎಂ ಗಣೇಶ್‌, ಕೆಲ ವರ್ಷಗಳ ಹಿಂದೆ ಅಸಮಾಧಾನಗೊಂಡು ಜೆಡಿಎಸ್‌ ಸೇರ್ಪಡೆಯಾಗಿದ್ದರು. ಸಂಕೇತ್‌ ಪೂವಯ್ಯ ಬಳಿಕ ಜೆಡಿಎಸ್‌ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಗಣೇಶ್‌ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ವಿಧಾನಸಭೆ ಚುನಾವಣೆಯ ಬಳಿಕ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗಣೇಶ್‌ ಜೆಡಿಎಸ್‌ – ಬಿಜೆಪಿ ಮೈತ್ರಿ ಖಚಿತವಾಗುತ್ತಿದಂತೆ ಜೆಡಿಎಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮರಳಿದ್ದಾರೆ.

ಇದನ್ನೂ ಓದಿ: NDA ಮೈತ್ರಿಕೂಟಕ್ಕೆ ಅಧಿಕೃತವಾಗಿ JDS ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...