Homeಕರ್ನಾಟಕBJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

- Advertisement -
- Advertisement -

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಅಮಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ದೆಹಲಿಗೆ ಹೋಗುವಾಗ ನನ್ನನ್ನು ಬಿಟ್ಟು ಹೋಗಿದ್ದಾರೆ. ಇದು ನನಗೆ ನೋವಾಗಿದೆ. ಇವರು ಬಿಜೆಪಿ ಹತ್ತಿರ ಹೋಗಿದ್ದು ತಪ್ಪು. ಅವರೇ ದೇವೇಗೌಡರ ಮನೆ ಬಳಿಗೆ ಬರಬೇಕಾಗಿತ್ತು. ಪಕ್ಷದ ಕಾರ್ಯಕರ್ತರ ಮುಂದೆ ತಲೆ ತಗ್ಗಿಸುವ ಪರಿಸ್ಥಿತಿ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದರು.

”ನಾನು ಪಕ್ಷದ ಅಧ್ಯಕ್ಷ, ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ… ಏನು ಚರ್ಚೆ ಮಾಡಿದ್ದೀರಿ ಎಂಬ ಬಗ್ಗೆ ಈವರೆಗೂ ನನಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ನಾನು ಪಕ್ಷದ ಅಧ್ಯಕ್ಷ, ಪಕ್ಷದಲ್ಲಿ ಎಲ್ಲಿ ಚರ್ಚೆ ಆಗಿದೆ?” ಎಂದು ಕುಮಾಸ್ವಾಮಿ ಅವರನ್ನು ಪ್ರಶ್ನಿಸಿದರು.

”ಜನತಾದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್​ಗೆ ಹೋಗಿದೆ. ಅದನ್ನು ಒಪ್ಪಲು ತಯಾರಿಲ್ಲ, ಅದನ್ನು ಒಪ್ಪಿಕೊಳ್ಳಿ. ಪಕ್ಷದಲ್ಲಿ ಚರ್ಚೆ ಆಗಿ ನಿರ್ಣಯ ಆದ ಮೇಲೆ ರಾಜ್ಯಾಧ್ಯಕ್ಷನಾಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಪ್ರವಾಸ ಶುರು ಮಾಡಿಲ್ಲ, ಆಗಲೇ ಹೋಗಿ ಭೇಟಿ ಮಾಡಿ ಬಂದಿದ್ದಾರೆ” ಎಂದು ಕುಮಾರಸ್ವಾಮಿ ಬಗ್ಗೆ ಅಸಮಾಧಾನ ಹೊರಹಾಕಿದರು.

ಅಕ್ಟೋಬರ್ 16ರ ಸಭೆಯ ಬಳಿಕ ಪಕ್ಷದ ವರಿಷ್ಠ ಎಚ್.​​ಡಿ ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತಾಡುತ್ತೇನೆ. ಶರದ್ ಪವಾರ್ ಸೇರಿದಂತೆ ಹಲವರು ಮತ್ತು ದೆಹಲಿಯಿಂದ ಕಾಂಗ್ರೆಸ್ ನಾಯಕರು ಮಾತಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಏನೂ ಮಾತುಕತೆ ಮಾಡಿಲ್ಲ. ಅಕ್ಟೋಬರ್ 16ರ ಬಳಿಕ ಗಟ್ಟಿ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು.

”ನನಗೆ ಸ್ಥಾನ ಮುಖ್ಯ ಅಲ್ಲ, ಮಾನ ಮುಖ್ಯ. 60 ವರ್ಷದ ರಾಜಕೀಯದಲ್ಲಿ ಕಳಂಕ ನನ್ನ ಮೇಲೆ ಇಲ್ಲ. ಮೈತ್ರಿ ಬೇಕಾಗಿಲ್ಲ ಅಂತ ಅವತ್ತು ದೇವೇಗೌಡರು ಹೇಳಿದ್ದರು. ದೇವೇಗೌಡರು ಹೋಗಿ ಮೈತ್ರಿ ಬಗ್ಗೆ ಮಾತಾಡಿಲ್ಲ, ಕುಮಾರಸ್ವಾಮಿ ಹೋಗುವಾಗ ನನಗೆ ತಿಳಿಸಿಲ್ಲ. ಜನತಾದಳ ಹಿಂದೂ ಪಕ್ಷವೂ ಅಲ್ಲ, ಮುಸ್ಲಿಂ ಪಕ್ಷವೂ ಅಲ್ಲ. ಜನತಾದಳ ಕನ್ನಡದ ಪಕ್ಷ” ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.

ಇದನ್ನೂ ಓದಿ: ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ಗೆ ಸಂಕಷ್ಟ: ಮತ್ತೊಂದು ವಿಕೆಟ್ ಪತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...