Homeಕರ್ನಾಟಕಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

- Advertisement -
- Advertisement -

| ನೀಲಗಾರ |

ಕಳೆದ ವಾರ ‘ಆಗಿಯೇಬಿಟ್ಟಿತಾ ಜೆಡಿಎಸ್-ಬಿಜೆಪಿ ಮೈತ್ರಿ?’ ಎಂಬ ವರದಿ ನಮ್ಮಲ್ಲಿ ಪ್ರಕಟವಾಗಿತ್ತು. ಮೇಲ್ನೋಟಕ್ಕೆ ಕುಮಾರಸ್ವಾಮಿಯವರ ಸಿದ್ಧಾಂತಹೀನ ದುಡುಕಿನ ಹೇಳಿಕೆಯಂತೆ ಕಂಡಿದ್ದ ಬೆಂಬಲದ ಹೇಳಿಕೆಯ ಹಿಂದೆ ಸ್ಪಷ್ಟ ಲೆಕ್ಕಾಚಾರವಿತ್ತು. ಸಿದ್ಧಾಂತಕ್ಕೂ ಅವರಿಗೂ ಸಂಬಂಧ ಹೇಗೂ ಇರಲಿಲ್ಲ. ಆದರೆ ಜೆಡಿಎಸ್‌ನ ಅಸ್ತಿತ್ವವೇ ಅಲುಗಾಡುತ್ತಿದೆ ಎಂಬುದನ್ನು ವಿವರಿಸುವ ನಾಲ್ಕು ಅಂಶಗಳನ್ನು ಆ ವರದಿಯಲ್ಲಿ ಬರೆಯಲಾಗಿತ್ತು.

ಇದೀಗ ದೇವೇಗೌಡರು ಒಂದು ಹೆಜ್ಜೆ ಮುಂದೆ ಹೋಗಿ, ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಅಭಯವನ್ನು ನೀಡಿದ್ದಾರೆ. ಬಹಳ ನಾಜೂಕಿನಿಂದ ಅದಕ್ಕೆ ಬೇಕಾದ ಸಮರ್ಥನೆಯನ್ನೂ ಕೊಡುವ ಪ್ರಯತ್ನ ಮಾಡಿದ್ದಾರೆ. ‘ಸಿದ್ದರಾಮಯ್ಯ ಅಹಿಂದ ನಾಯಕ. ನಾನು ಯಾವ ಹಿಂದ ನಾಯಕನೋ ಗೊತ್ತಿಲ್ಲ. ಅವರು ಬೇಕಾದರೆ ಇನ್ನೊಂದು ಚುನಾವಣೆ ಬರಲಿ ಎಂತಲೂ ಹೇಳಬಹುದು. ನಾನು ಅಷ್ಟು ಶಕ್ತನಲ್ಲ. ಹಾಗಾಗಿ ಚುನಾವಣೆ ಬರುವುದು ಬೇಡ’ ಎಂದಿದ್ದಾರೆ. ದೇವೇಗೌಡರು ಖುದ್ದಾಗಿ ಫೋನ್ ಮಾಡಿ ಯಡಿಯೂರಪ್ಪನವರ ಹತ್ತಿರ ಮಾತಾಡಿದ್ದಾರೆ ಎಂತಲೂ ಹೇಳಲಾಗುತ್ತಿದೆ.

ಕಳೆದ ವಾರವೇ ಹೇಳಿದ್ದಂತೆ ಹಲವು ಶಾಸಕರು ಬಿಜೆಪಿಯ ಕಡೆಗೆ ಒಲವು ತೋರಿಸಿರುವುದು ಸ್ಪಷ್ಟವಿತ್ತು ಮತ್ತು ಬಿಜೆಪಿಯು ಘಾತುಕತನದಿಂದ ಇನ್ನಷ್ಟು ಜನರನ್ನು ಸೆಳೆದುಕೊಳ್ಳುವುದೂ ಕಷ್ಟವಿರಲಿಲ್ಲ. ಈ ವಾರದ ಬೆಳವಣಿಗೆ ಎಂದರೆ ಜೆಡಿಎಸ್‌ನ ವಿಧಾನಪರಿಷತ್ತಿನ ಸದಸ್ಯರು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವರು ಸಭೆಯೊಂದನ್ನು ನಡೆಸಿದರು ಮತ್ತು ರೆಸಾರ್ಟ್ವೊಂದಕ್ಕೆ ಜೊತೆಗೂಡಿ ಹೋಗುವ ಕುರಿತೂ ಚರ್ಚಿಸಿದರು. ಶಾಸಕರ ಅಸಮಾಧಾನ ತಣಿಸಲು ದೇವೇಗೌಡರು ಸಭೆ ಕರೆದರೆ, ಕುಮಾರಸ್ವಾಮಿ ಲಂಡನ್ ವಿಮಾನ ಹತ್ತಿದ್ದರು. ಇಂತಹ ಹಲವು ಸಂದರ್ಭಗಳಲ್ಲಿ ತಂದೆ, ಮಗ ಏನೋ ಭಿನ್ನ ನಿಲುವು ತಳೆದಂತೆ ಮಾಡುವುದು, ಸಭೆಯಲ್ಲಿ ತನ್ನ ಅಸಹಾಯಕತೆಯನ್ನು ತಂದೆ ಮಗನ ಮೇಲೆ ಅಥವಾ ಮಗ ತಂದೆಯ ಮೇಲೆ ಹಾಕುವುದು ಇವೆಲ್ಲವೂ ಸಂದಿಗ್ಧವನ್ನು ಮ್ಯಾನೇಜ್ ಮಾಡುವ ಗೌಡರ ಕುಟುಂಬದ ವಿಧಾನಗಳಲ್ಲಿ ಒಂದು. ಆದರೆ, ಅಂತಿಮವಾಗಿ ಇಬ್ಬರೂ ಒಂದೇ ನಿಲುವಿಗೆ ಬಂದಿರುತ್ತಾರೆ. ಇದರಲ್ಲಿ ನಿಜಕ್ಕೂ ದೊಡ್ಡಗೌಡರು ಮತ್ತು ಎಚ್‌ಡಿಕೆ ನಡುವಿನ ಅಭಿಪ್ರಾಯಬೇಧವೂ ಕೆಲಸ ಮಾಡದಿರುವುದಿಲ್ಲ. ಆದರೆ ಅದನ್ನೇ ಭಿನ್ನಮತ ನಿಭಾಯಿಸುವ ಅಸ್ತ್ರವಾಗಿ ಬಳಸುವ ಚಾಕಚಕ್ಯತೆ ಅವರಿಗೆ ಸಿದ್ಧಿಸಿದೆ.

ಈಗಲೂ ಅದೇ ಆಗಿದೆ. ಎಚ್‌ಡಿಕೆ ಹೇಳಿದ್ದನ್ನೇ ಗೌಡರೂ ಹೇಳಿದ್ದಾರೆ. ಕಾರಣಗಳನ್ನು ಅವರ ರೀತಿಯಲ್ಲಿ ಅವರೂ, ಇವರ ರೀತಿಯಲ್ಲಿ ಇವರೂ ಹೇಳಿದ್ದಾರಷ್ಟೇ. ‘ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಬಿದ್ದಿತು ಎಂದು ನನಗೆ ಈಗ ಮನವರಿಕೆಯಾಗಿದೆ’ ಎಂದು ದೊಡ್ಡ ಗೌಡರು ಇಂದು ಹೇಳಿದ್ದಾರೆ. ಅಂದರೆ ಇಡೀ ಕಾಂಗ್ರೆಸ್ ಪಕ್ಷಕ್ಕಿಂತ ಸಿದ್ದರಾಮಯ್ಯರನ್ನು ಗುರಿ ಮಾಡುವುದು, ಬಿಜೆಪಿಯ ಜೊತೆಗೆ ಕೈ ಜೋಡಿಸುವುದು ಮತ್ತು ಆ ಮೂಲಕ ಅಹಿಂದ ವರ್ಸಸ್ ಮೇಲ್ಜಾತಿ ಧ್ರುವೀಕರಣಕ್ಕೆ ಬೇಕಾದ ಕಥನ ಸಿದ್ಧ ಮಾಡುತ್ತಾ ಹೋಗುವುದು ಇದರ ಹಿಂದಿನ ಲೆಕ್ಕಾಚಾರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಅನ್ನು ಕೈ ಹಿಡಿದಿದ್ದು ಇದೇ ಆಗಿತ್ತು. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಇದಕ್ಕೆ ಒಂದಷ್ಟು ಧಕ್ಕೆ ಬಂದಿತ್ತು. ಈಗ ಮತ್ತೆ ಧ್ರುವೀಕರಣಕ್ಕೆ ಪ್ರಯತ್ನಿಸಿ ತಮ್ಮ ನೆಲೆ ಉಳಿಸಿಕೊಳ್ಳುವ ಯತ್ನ ಮಾಡುತ್ತಿರುವುದನ್ನು ಗೌಡರು ಇಂದು ಲೆಕ್ಕಾಚಾರ ಹಾಕಿ ಆಡಿದ ಮಾತುಗಳಲ್ಲಿ ನೋಡಬಹುದು.

ಅತ್ತ ಶರದ್‌ಪವಾರ್ ಜೊತೆಗೂ ಆಪ್ತರಾಗಿರುವ ದೇವೇಗೌಡರು ಹರಿಯಾಣ ಹಾಗೂ ಮಹಾರಾಷ್ಟ್ರಗಳಲ್ಲಿ ಅತಂತ್ರ ಪರಿಸ್ಥಿತಿ ಉಂಟಾದ ನಂತರ ಬಿಜೆಪಿಯ ಜೊತೆಗೆ ಕೈ ಜೋಡಿಸಲಾರರು ಎಂಬ ಮಾತು ಜೆಡಿಎಸ್ ವಲಯಗಳಲ್ಲಿತ್ತು. ಆದರೆ ಕರ್ನಾಟಕದ ಮಟ್ಟಿಗೆ ಜೆಡಿಎಸ್ ಪರಿಸ್ಥಿತಿ ಕಷ್ಟವಿತ್ತು. ಈಗಲೇ ಚುನಾವಣೆ ನಡೆದರೆ ಬಹಳವೇ ಕಷ್ಟವಿದೆ ಎಂಬ ದೇವೇಗೌಡರ ಮಾತು ಸುಳ್ಳಲ್ಲ. ರಾಜ್ಯಗಳ ಮಟ್ಟಿಗೆ ಏನೇ ವ್ಯತ್ಯಾಸ ಉಂಟಾದರೂ, ಕೇಂದ್ರದಲ್ಲಿ ಮೋದಿ-ಶಾರನ್ನು ಅಲುಗಾಡಿಸುವ ಶಕ್ತಿ ಸದ್ಯಕ್ಕಂತೂ ಕಾಣುತ್ತಿಲ್ಲ. ಹೀಗಾಗಿ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎನ್ನುವಷ್ಟು ದೂರಾಲೋಚನೆ ಪಳಗಿದ ರಾಜಕಾರಣಿಗಳಿಗೆ ಇರುವುದಿಲ್ಲವೇ?

ಹೀಗಾಗಿ ಈ ಸಾರಿ ಗೌಡರು ಯಾವ ಹಿಂಜರಿಕೆಯನ್ನೂ ತೋರಿಲ್ಲ. ಹಿಂದಿನ ಸಾರಿ ಜೆಡಿಎಸ್ ಬಿಜೆಪಿ ಮೈತ್ರಿಯಾದಾಗಲಾದರೂ ‘ಕೋಮುವಾದ, ಜಾತ್ಯಾತೀತತೆ’ ಇತ್ಯಾದಿ ಮಾತುಗಳು ಅವರ ಬಾಯಿಂದ ಬಂದಿದ್ದವು. ಆದರೆ ಈ ಸಾರಿ ಕೇವಲ ಸಿದ್ದರಾಮಯ್ಯರಿಗೆ ವಿರೋಧ ಮಾತ್ರವಲ್ಲದೇ ಯಡಿಯೂರಪ್ಪನವರ ಸರ್ಕಾರಕ್ಕೆ ಅಭಯವನ್ನೂ ನೀಡುವ ಸ್ಪಷ್ಟತೆಯನ್ನೂ ಅವರು ನೀಡಿಬಿಟ್ಟಿದ್ದಾರೆ. ಅದರ ಜೊತೆ ಜೊತೆಗೇ ಮುಂದಿನ ಯೋಜನೆಯನ್ನೂ ಪ್ರಕಟಿಸಿದ್ದಾರೆ. ಅದು – ಪಕ್ಷವನ್ನು ಕಟ್ಟುವುದು. ಸೈದ್ಧಾಂತಿಕ ಅವಕಾಶವಾದಿತನದ ಬಗ್ಗೆ ಏನೇ ಟೀಕೆ ಇದ್ದರೂ ಮೆಚ್ಚಿಕೊಳ್ಳಬೇಕಾದ್ದು ಗೌಡರ ಈ ಗುಣವನ್ನು.

ಏನು ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪನವರ ಸರ್ಕಾರವು ಪೂರ್ಣಾವಧಿ ಬಾಳಲಾರದು ಎಂಬುದು ಖಚಿತ. ಹಾಗಾಗಿ ಒಂದಷ್ಟು ಕಾಲ ಸರ್ಕಾರವನ್ನು ಉಳಿಸಿ, ಅಷ್ಟು ಅವಧಿಯನ್ನು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಂಡರೆ ಒಳ್ಳೆಯದು ಎಂಬ ಮುಂದಾಲೋಚನೆ ಅವರದ್ದು. ಹೇಗೂ ಮುಂದೆಯೂ ಎರಡರಲ್ಲೊಂದು ಪಕ್ಷಕ್ಕೆ ತಮ್ಮ ಜೊತೆಗೆ ಮೈತ್ರಿ ಮಾಡಿಕೊಳ್ಳಲೇಬೇಕಾದಷ್ಟು ಅನಿವಾರ್ಯತೆಯಿರುವ ಅತಂತ್ರತೆ ಉಂಟಾಗುವಷ್ಟು ಪಕ್ಷ ಬೆಳೆಸುವುದಷ್ಟೇ ಸಾಧ್ಯ. ಆ ಮಧ್ಯೆ ಮಾಡಬೇಕಿರುವುದು ಸಿದ್ದರಾಮಯ್ಯರನ್ನು ಹಣಿಯುವುದಷ್ಟೇ.

ಬಹುಶಃ ಸಿದ್ದರಾಮಯ್ಯನವರ ಬೆಳವಣಿಗೆ ಇರುವುದೂ ಯಡಿಯೂರಪ್ಪ, ದೇವೇಗೌಡ ರಾಜಕಾರಣವನ್ನು ವಿರೋಧಿಸುವುದರಲ್ಲೇ ಇರಬಹುದು. ಹಾಗಾಗಿ ಕರ್ನಾಟಕದ ರಾಜಕಾರಣವು ಮತ್ತೆ 2018ರ ಹೊತ್ತಿಗೇ ಬಂದು ನಿಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...