Homeಕರ್ನಾಟಕಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

- Advertisement -
- Advertisement -

| ನೀಲಗಾರ |

ಕಳೆದ ವಾರ ‘ಆಗಿಯೇಬಿಟ್ಟಿತಾ ಜೆಡಿಎಸ್-ಬಿಜೆಪಿ ಮೈತ್ರಿ?’ ಎಂಬ ವರದಿ ನಮ್ಮಲ್ಲಿ ಪ್ರಕಟವಾಗಿತ್ತು. ಮೇಲ್ನೋಟಕ್ಕೆ ಕುಮಾರಸ್ವಾಮಿಯವರ ಸಿದ್ಧಾಂತಹೀನ ದುಡುಕಿನ ಹೇಳಿಕೆಯಂತೆ ಕಂಡಿದ್ದ ಬೆಂಬಲದ ಹೇಳಿಕೆಯ ಹಿಂದೆ ಸ್ಪಷ್ಟ ಲೆಕ್ಕಾಚಾರವಿತ್ತು. ಸಿದ್ಧಾಂತಕ್ಕೂ ಅವರಿಗೂ ಸಂಬಂಧ ಹೇಗೂ ಇರಲಿಲ್ಲ. ಆದರೆ ಜೆಡಿಎಸ್‌ನ ಅಸ್ತಿತ್ವವೇ ಅಲುಗಾಡುತ್ತಿದೆ ಎಂಬುದನ್ನು ವಿವರಿಸುವ ನಾಲ್ಕು ಅಂಶಗಳನ್ನು ಆ ವರದಿಯಲ್ಲಿ ಬರೆಯಲಾಗಿತ್ತು.

ಇದೀಗ ದೇವೇಗೌಡರು ಒಂದು ಹೆಜ್ಜೆ ಮುಂದೆ ಹೋಗಿ, ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಅಭಯವನ್ನು ನೀಡಿದ್ದಾರೆ. ಬಹಳ ನಾಜೂಕಿನಿಂದ ಅದಕ್ಕೆ ಬೇಕಾದ ಸಮರ್ಥನೆಯನ್ನೂ ಕೊಡುವ ಪ್ರಯತ್ನ ಮಾಡಿದ್ದಾರೆ. ‘ಸಿದ್ದರಾಮಯ್ಯ ಅಹಿಂದ ನಾಯಕ. ನಾನು ಯಾವ ಹಿಂದ ನಾಯಕನೋ ಗೊತ್ತಿಲ್ಲ. ಅವರು ಬೇಕಾದರೆ ಇನ್ನೊಂದು ಚುನಾವಣೆ ಬರಲಿ ಎಂತಲೂ ಹೇಳಬಹುದು. ನಾನು ಅಷ್ಟು ಶಕ್ತನಲ್ಲ. ಹಾಗಾಗಿ ಚುನಾವಣೆ ಬರುವುದು ಬೇಡ’ ಎಂದಿದ್ದಾರೆ. ದೇವೇಗೌಡರು ಖುದ್ದಾಗಿ ಫೋನ್ ಮಾಡಿ ಯಡಿಯೂರಪ್ಪನವರ ಹತ್ತಿರ ಮಾತಾಡಿದ್ದಾರೆ ಎಂತಲೂ ಹೇಳಲಾಗುತ್ತಿದೆ.

ಕಳೆದ ವಾರವೇ ಹೇಳಿದ್ದಂತೆ ಹಲವು ಶಾಸಕರು ಬಿಜೆಪಿಯ ಕಡೆಗೆ ಒಲವು ತೋರಿಸಿರುವುದು ಸ್ಪಷ್ಟವಿತ್ತು ಮತ್ತು ಬಿಜೆಪಿಯು ಘಾತುಕತನದಿಂದ ಇನ್ನಷ್ಟು ಜನರನ್ನು ಸೆಳೆದುಕೊಳ್ಳುವುದೂ ಕಷ್ಟವಿರಲಿಲ್ಲ. ಈ ವಾರದ ಬೆಳವಣಿಗೆ ಎಂದರೆ ಜೆಡಿಎಸ್‌ನ ವಿಧಾನಪರಿಷತ್ತಿನ ಸದಸ್ಯರು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವರು ಸಭೆಯೊಂದನ್ನು ನಡೆಸಿದರು ಮತ್ತು ರೆಸಾರ್ಟ್ವೊಂದಕ್ಕೆ ಜೊತೆಗೂಡಿ ಹೋಗುವ ಕುರಿತೂ ಚರ್ಚಿಸಿದರು. ಶಾಸಕರ ಅಸಮಾಧಾನ ತಣಿಸಲು ದೇವೇಗೌಡರು ಸಭೆ ಕರೆದರೆ, ಕುಮಾರಸ್ವಾಮಿ ಲಂಡನ್ ವಿಮಾನ ಹತ್ತಿದ್ದರು. ಇಂತಹ ಹಲವು ಸಂದರ್ಭಗಳಲ್ಲಿ ತಂದೆ, ಮಗ ಏನೋ ಭಿನ್ನ ನಿಲುವು ತಳೆದಂತೆ ಮಾಡುವುದು, ಸಭೆಯಲ್ಲಿ ತನ್ನ ಅಸಹಾಯಕತೆಯನ್ನು ತಂದೆ ಮಗನ ಮೇಲೆ ಅಥವಾ ಮಗ ತಂದೆಯ ಮೇಲೆ ಹಾಕುವುದು ಇವೆಲ್ಲವೂ ಸಂದಿಗ್ಧವನ್ನು ಮ್ಯಾನೇಜ್ ಮಾಡುವ ಗೌಡರ ಕುಟುಂಬದ ವಿಧಾನಗಳಲ್ಲಿ ಒಂದು. ಆದರೆ, ಅಂತಿಮವಾಗಿ ಇಬ್ಬರೂ ಒಂದೇ ನಿಲುವಿಗೆ ಬಂದಿರುತ್ತಾರೆ. ಇದರಲ್ಲಿ ನಿಜಕ್ಕೂ ದೊಡ್ಡಗೌಡರು ಮತ್ತು ಎಚ್‌ಡಿಕೆ ನಡುವಿನ ಅಭಿಪ್ರಾಯಬೇಧವೂ ಕೆಲಸ ಮಾಡದಿರುವುದಿಲ್ಲ. ಆದರೆ ಅದನ್ನೇ ಭಿನ್ನಮತ ನಿಭಾಯಿಸುವ ಅಸ್ತ್ರವಾಗಿ ಬಳಸುವ ಚಾಕಚಕ್ಯತೆ ಅವರಿಗೆ ಸಿದ್ಧಿಸಿದೆ.

ಈಗಲೂ ಅದೇ ಆಗಿದೆ. ಎಚ್‌ಡಿಕೆ ಹೇಳಿದ್ದನ್ನೇ ಗೌಡರೂ ಹೇಳಿದ್ದಾರೆ. ಕಾರಣಗಳನ್ನು ಅವರ ರೀತಿಯಲ್ಲಿ ಅವರೂ, ಇವರ ರೀತಿಯಲ್ಲಿ ಇವರೂ ಹೇಳಿದ್ದಾರಷ್ಟೇ. ‘ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಬಿದ್ದಿತು ಎಂದು ನನಗೆ ಈಗ ಮನವರಿಕೆಯಾಗಿದೆ’ ಎಂದು ದೊಡ್ಡ ಗೌಡರು ಇಂದು ಹೇಳಿದ್ದಾರೆ. ಅಂದರೆ ಇಡೀ ಕಾಂಗ್ರೆಸ್ ಪಕ್ಷಕ್ಕಿಂತ ಸಿದ್ದರಾಮಯ್ಯರನ್ನು ಗುರಿ ಮಾಡುವುದು, ಬಿಜೆಪಿಯ ಜೊತೆಗೆ ಕೈ ಜೋಡಿಸುವುದು ಮತ್ತು ಆ ಮೂಲಕ ಅಹಿಂದ ವರ್ಸಸ್ ಮೇಲ್ಜಾತಿ ಧ್ರುವೀಕರಣಕ್ಕೆ ಬೇಕಾದ ಕಥನ ಸಿದ್ಧ ಮಾಡುತ್ತಾ ಹೋಗುವುದು ಇದರ ಹಿಂದಿನ ಲೆಕ್ಕಾಚಾರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಅನ್ನು ಕೈ ಹಿಡಿದಿದ್ದು ಇದೇ ಆಗಿತ್ತು. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಇದಕ್ಕೆ ಒಂದಷ್ಟು ಧಕ್ಕೆ ಬಂದಿತ್ತು. ಈಗ ಮತ್ತೆ ಧ್ರುವೀಕರಣಕ್ಕೆ ಪ್ರಯತ್ನಿಸಿ ತಮ್ಮ ನೆಲೆ ಉಳಿಸಿಕೊಳ್ಳುವ ಯತ್ನ ಮಾಡುತ್ತಿರುವುದನ್ನು ಗೌಡರು ಇಂದು ಲೆಕ್ಕಾಚಾರ ಹಾಕಿ ಆಡಿದ ಮಾತುಗಳಲ್ಲಿ ನೋಡಬಹುದು.

ಅತ್ತ ಶರದ್‌ಪವಾರ್ ಜೊತೆಗೂ ಆಪ್ತರಾಗಿರುವ ದೇವೇಗೌಡರು ಹರಿಯಾಣ ಹಾಗೂ ಮಹಾರಾಷ್ಟ್ರಗಳಲ್ಲಿ ಅತಂತ್ರ ಪರಿಸ್ಥಿತಿ ಉಂಟಾದ ನಂತರ ಬಿಜೆಪಿಯ ಜೊತೆಗೆ ಕೈ ಜೋಡಿಸಲಾರರು ಎಂಬ ಮಾತು ಜೆಡಿಎಸ್ ವಲಯಗಳಲ್ಲಿತ್ತು. ಆದರೆ ಕರ್ನಾಟಕದ ಮಟ್ಟಿಗೆ ಜೆಡಿಎಸ್ ಪರಿಸ್ಥಿತಿ ಕಷ್ಟವಿತ್ತು. ಈಗಲೇ ಚುನಾವಣೆ ನಡೆದರೆ ಬಹಳವೇ ಕಷ್ಟವಿದೆ ಎಂಬ ದೇವೇಗೌಡರ ಮಾತು ಸುಳ್ಳಲ್ಲ. ರಾಜ್ಯಗಳ ಮಟ್ಟಿಗೆ ಏನೇ ವ್ಯತ್ಯಾಸ ಉಂಟಾದರೂ, ಕೇಂದ್ರದಲ್ಲಿ ಮೋದಿ-ಶಾರನ್ನು ಅಲುಗಾಡಿಸುವ ಶಕ್ತಿ ಸದ್ಯಕ್ಕಂತೂ ಕಾಣುತ್ತಿಲ್ಲ. ಹೀಗಾಗಿ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎನ್ನುವಷ್ಟು ದೂರಾಲೋಚನೆ ಪಳಗಿದ ರಾಜಕಾರಣಿಗಳಿಗೆ ಇರುವುದಿಲ್ಲವೇ?

ಹೀಗಾಗಿ ಈ ಸಾರಿ ಗೌಡರು ಯಾವ ಹಿಂಜರಿಕೆಯನ್ನೂ ತೋರಿಲ್ಲ. ಹಿಂದಿನ ಸಾರಿ ಜೆಡಿಎಸ್ ಬಿಜೆಪಿ ಮೈತ್ರಿಯಾದಾಗಲಾದರೂ ‘ಕೋಮುವಾದ, ಜಾತ್ಯಾತೀತತೆ’ ಇತ್ಯಾದಿ ಮಾತುಗಳು ಅವರ ಬಾಯಿಂದ ಬಂದಿದ್ದವು. ಆದರೆ ಈ ಸಾರಿ ಕೇವಲ ಸಿದ್ದರಾಮಯ್ಯರಿಗೆ ವಿರೋಧ ಮಾತ್ರವಲ್ಲದೇ ಯಡಿಯೂರಪ್ಪನವರ ಸರ್ಕಾರಕ್ಕೆ ಅಭಯವನ್ನೂ ನೀಡುವ ಸ್ಪಷ್ಟತೆಯನ್ನೂ ಅವರು ನೀಡಿಬಿಟ್ಟಿದ್ದಾರೆ. ಅದರ ಜೊತೆ ಜೊತೆಗೇ ಮುಂದಿನ ಯೋಜನೆಯನ್ನೂ ಪ್ರಕಟಿಸಿದ್ದಾರೆ. ಅದು – ಪಕ್ಷವನ್ನು ಕಟ್ಟುವುದು. ಸೈದ್ಧಾಂತಿಕ ಅವಕಾಶವಾದಿತನದ ಬಗ್ಗೆ ಏನೇ ಟೀಕೆ ಇದ್ದರೂ ಮೆಚ್ಚಿಕೊಳ್ಳಬೇಕಾದ್ದು ಗೌಡರ ಈ ಗುಣವನ್ನು.

ಏನು ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪನವರ ಸರ್ಕಾರವು ಪೂರ್ಣಾವಧಿ ಬಾಳಲಾರದು ಎಂಬುದು ಖಚಿತ. ಹಾಗಾಗಿ ಒಂದಷ್ಟು ಕಾಲ ಸರ್ಕಾರವನ್ನು ಉಳಿಸಿ, ಅಷ್ಟು ಅವಧಿಯನ್ನು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಂಡರೆ ಒಳ್ಳೆಯದು ಎಂಬ ಮುಂದಾಲೋಚನೆ ಅವರದ್ದು. ಹೇಗೂ ಮುಂದೆಯೂ ಎರಡರಲ್ಲೊಂದು ಪಕ್ಷಕ್ಕೆ ತಮ್ಮ ಜೊತೆಗೆ ಮೈತ್ರಿ ಮಾಡಿಕೊಳ್ಳಲೇಬೇಕಾದಷ್ಟು ಅನಿವಾರ್ಯತೆಯಿರುವ ಅತಂತ್ರತೆ ಉಂಟಾಗುವಷ್ಟು ಪಕ್ಷ ಬೆಳೆಸುವುದಷ್ಟೇ ಸಾಧ್ಯ. ಆ ಮಧ್ಯೆ ಮಾಡಬೇಕಿರುವುದು ಸಿದ್ದರಾಮಯ್ಯರನ್ನು ಹಣಿಯುವುದಷ್ಟೇ.

ಬಹುಶಃ ಸಿದ್ದರಾಮಯ್ಯನವರ ಬೆಳವಣಿಗೆ ಇರುವುದೂ ಯಡಿಯೂರಪ್ಪ, ದೇವೇಗೌಡ ರಾಜಕಾರಣವನ್ನು ವಿರೋಧಿಸುವುದರಲ್ಲೇ ಇರಬಹುದು. ಹಾಗಾಗಿ ಕರ್ನಾಟಕದ ರಾಜಕಾರಣವು ಮತ್ತೆ 2018ರ ಹೊತ್ತಿಗೇ ಬಂದು ನಿಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...