Homeಕರ್ನಾಟಕಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

- Advertisement -
- Advertisement -

| ನೀಲಗಾರ |

ಕಳೆದ ವಾರ ‘ಆಗಿಯೇಬಿಟ್ಟಿತಾ ಜೆಡಿಎಸ್-ಬಿಜೆಪಿ ಮೈತ್ರಿ?’ ಎಂಬ ವರದಿ ನಮ್ಮಲ್ಲಿ ಪ್ರಕಟವಾಗಿತ್ತು. ಮೇಲ್ನೋಟಕ್ಕೆ ಕುಮಾರಸ್ವಾಮಿಯವರ ಸಿದ್ಧಾಂತಹೀನ ದುಡುಕಿನ ಹೇಳಿಕೆಯಂತೆ ಕಂಡಿದ್ದ ಬೆಂಬಲದ ಹೇಳಿಕೆಯ ಹಿಂದೆ ಸ್ಪಷ್ಟ ಲೆಕ್ಕಾಚಾರವಿತ್ತು. ಸಿದ್ಧಾಂತಕ್ಕೂ ಅವರಿಗೂ ಸಂಬಂಧ ಹೇಗೂ ಇರಲಿಲ್ಲ. ಆದರೆ ಜೆಡಿಎಸ್‌ನ ಅಸ್ತಿತ್ವವೇ ಅಲುಗಾಡುತ್ತಿದೆ ಎಂಬುದನ್ನು ವಿವರಿಸುವ ನಾಲ್ಕು ಅಂಶಗಳನ್ನು ಆ ವರದಿಯಲ್ಲಿ ಬರೆಯಲಾಗಿತ್ತು.

ಇದೀಗ ದೇವೇಗೌಡರು ಒಂದು ಹೆಜ್ಜೆ ಮುಂದೆ ಹೋಗಿ, ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಅಭಯವನ್ನು ನೀಡಿದ್ದಾರೆ. ಬಹಳ ನಾಜೂಕಿನಿಂದ ಅದಕ್ಕೆ ಬೇಕಾದ ಸಮರ್ಥನೆಯನ್ನೂ ಕೊಡುವ ಪ್ರಯತ್ನ ಮಾಡಿದ್ದಾರೆ. ‘ಸಿದ್ದರಾಮಯ್ಯ ಅಹಿಂದ ನಾಯಕ. ನಾನು ಯಾವ ಹಿಂದ ನಾಯಕನೋ ಗೊತ್ತಿಲ್ಲ. ಅವರು ಬೇಕಾದರೆ ಇನ್ನೊಂದು ಚುನಾವಣೆ ಬರಲಿ ಎಂತಲೂ ಹೇಳಬಹುದು. ನಾನು ಅಷ್ಟು ಶಕ್ತನಲ್ಲ. ಹಾಗಾಗಿ ಚುನಾವಣೆ ಬರುವುದು ಬೇಡ’ ಎಂದಿದ್ದಾರೆ. ದೇವೇಗೌಡರು ಖುದ್ದಾಗಿ ಫೋನ್ ಮಾಡಿ ಯಡಿಯೂರಪ್ಪನವರ ಹತ್ತಿರ ಮಾತಾಡಿದ್ದಾರೆ ಎಂತಲೂ ಹೇಳಲಾಗುತ್ತಿದೆ.

ಕಳೆದ ವಾರವೇ ಹೇಳಿದ್ದಂತೆ ಹಲವು ಶಾಸಕರು ಬಿಜೆಪಿಯ ಕಡೆಗೆ ಒಲವು ತೋರಿಸಿರುವುದು ಸ್ಪಷ್ಟವಿತ್ತು ಮತ್ತು ಬಿಜೆಪಿಯು ಘಾತುಕತನದಿಂದ ಇನ್ನಷ್ಟು ಜನರನ್ನು ಸೆಳೆದುಕೊಳ್ಳುವುದೂ ಕಷ್ಟವಿರಲಿಲ್ಲ. ಈ ವಾರದ ಬೆಳವಣಿಗೆ ಎಂದರೆ ಜೆಡಿಎಸ್‌ನ ವಿಧಾನಪರಿಷತ್ತಿನ ಸದಸ್ಯರು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವರು ಸಭೆಯೊಂದನ್ನು ನಡೆಸಿದರು ಮತ್ತು ರೆಸಾರ್ಟ್ವೊಂದಕ್ಕೆ ಜೊತೆಗೂಡಿ ಹೋಗುವ ಕುರಿತೂ ಚರ್ಚಿಸಿದರು. ಶಾಸಕರ ಅಸಮಾಧಾನ ತಣಿಸಲು ದೇವೇಗೌಡರು ಸಭೆ ಕರೆದರೆ, ಕುಮಾರಸ್ವಾಮಿ ಲಂಡನ್ ವಿಮಾನ ಹತ್ತಿದ್ದರು. ಇಂತಹ ಹಲವು ಸಂದರ್ಭಗಳಲ್ಲಿ ತಂದೆ, ಮಗ ಏನೋ ಭಿನ್ನ ನಿಲುವು ತಳೆದಂತೆ ಮಾಡುವುದು, ಸಭೆಯಲ್ಲಿ ತನ್ನ ಅಸಹಾಯಕತೆಯನ್ನು ತಂದೆ ಮಗನ ಮೇಲೆ ಅಥವಾ ಮಗ ತಂದೆಯ ಮೇಲೆ ಹಾಕುವುದು ಇವೆಲ್ಲವೂ ಸಂದಿಗ್ಧವನ್ನು ಮ್ಯಾನೇಜ್ ಮಾಡುವ ಗೌಡರ ಕುಟುಂಬದ ವಿಧಾನಗಳಲ್ಲಿ ಒಂದು. ಆದರೆ, ಅಂತಿಮವಾಗಿ ಇಬ್ಬರೂ ಒಂದೇ ನಿಲುವಿಗೆ ಬಂದಿರುತ್ತಾರೆ. ಇದರಲ್ಲಿ ನಿಜಕ್ಕೂ ದೊಡ್ಡಗೌಡರು ಮತ್ತು ಎಚ್‌ಡಿಕೆ ನಡುವಿನ ಅಭಿಪ್ರಾಯಬೇಧವೂ ಕೆಲಸ ಮಾಡದಿರುವುದಿಲ್ಲ. ಆದರೆ ಅದನ್ನೇ ಭಿನ್ನಮತ ನಿಭಾಯಿಸುವ ಅಸ್ತ್ರವಾಗಿ ಬಳಸುವ ಚಾಕಚಕ್ಯತೆ ಅವರಿಗೆ ಸಿದ್ಧಿಸಿದೆ.

ಈಗಲೂ ಅದೇ ಆಗಿದೆ. ಎಚ್‌ಡಿಕೆ ಹೇಳಿದ್ದನ್ನೇ ಗೌಡರೂ ಹೇಳಿದ್ದಾರೆ. ಕಾರಣಗಳನ್ನು ಅವರ ರೀತಿಯಲ್ಲಿ ಅವರೂ, ಇವರ ರೀತಿಯಲ್ಲಿ ಇವರೂ ಹೇಳಿದ್ದಾರಷ್ಟೇ. ‘ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಬಿದ್ದಿತು ಎಂದು ನನಗೆ ಈಗ ಮನವರಿಕೆಯಾಗಿದೆ’ ಎಂದು ದೊಡ್ಡ ಗೌಡರು ಇಂದು ಹೇಳಿದ್ದಾರೆ. ಅಂದರೆ ಇಡೀ ಕಾಂಗ್ರೆಸ್ ಪಕ್ಷಕ್ಕಿಂತ ಸಿದ್ದರಾಮಯ್ಯರನ್ನು ಗುರಿ ಮಾಡುವುದು, ಬಿಜೆಪಿಯ ಜೊತೆಗೆ ಕೈ ಜೋಡಿಸುವುದು ಮತ್ತು ಆ ಮೂಲಕ ಅಹಿಂದ ವರ್ಸಸ್ ಮೇಲ್ಜಾತಿ ಧ್ರುವೀಕರಣಕ್ಕೆ ಬೇಕಾದ ಕಥನ ಸಿದ್ಧ ಮಾಡುತ್ತಾ ಹೋಗುವುದು ಇದರ ಹಿಂದಿನ ಲೆಕ್ಕಾಚಾರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಅನ್ನು ಕೈ ಹಿಡಿದಿದ್ದು ಇದೇ ಆಗಿತ್ತು. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಇದಕ್ಕೆ ಒಂದಷ್ಟು ಧಕ್ಕೆ ಬಂದಿತ್ತು. ಈಗ ಮತ್ತೆ ಧ್ರುವೀಕರಣಕ್ಕೆ ಪ್ರಯತ್ನಿಸಿ ತಮ್ಮ ನೆಲೆ ಉಳಿಸಿಕೊಳ್ಳುವ ಯತ್ನ ಮಾಡುತ್ತಿರುವುದನ್ನು ಗೌಡರು ಇಂದು ಲೆಕ್ಕಾಚಾರ ಹಾಕಿ ಆಡಿದ ಮಾತುಗಳಲ್ಲಿ ನೋಡಬಹುದು.

ಅತ್ತ ಶರದ್‌ಪವಾರ್ ಜೊತೆಗೂ ಆಪ್ತರಾಗಿರುವ ದೇವೇಗೌಡರು ಹರಿಯಾಣ ಹಾಗೂ ಮಹಾರಾಷ್ಟ್ರಗಳಲ್ಲಿ ಅತಂತ್ರ ಪರಿಸ್ಥಿತಿ ಉಂಟಾದ ನಂತರ ಬಿಜೆಪಿಯ ಜೊತೆಗೆ ಕೈ ಜೋಡಿಸಲಾರರು ಎಂಬ ಮಾತು ಜೆಡಿಎಸ್ ವಲಯಗಳಲ್ಲಿತ್ತು. ಆದರೆ ಕರ್ನಾಟಕದ ಮಟ್ಟಿಗೆ ಜೆಡಿಎಸ್ ಪರಿಸ್ಥಿತಿ ಕಷ್ಟವಿತ್ತು. ಈಗಲೇ ಚುನಾವಣೆ ನಡೆದರೆ ಬಹಳವೇ ಕಷ್ಟವಿದೆ ಎಂಬ ದೇವೇಗೌಡರ ಮಾತು ಸುಳ್ಳಲ್ಲ. ರಾಜ್ಯಗಳ ಮಟ್ಟಿಗೆ ಏನೇ ವ್ಯತ್ಯಾಸ ಉಂಟಾದರೂ, ಕೇಂದ್ರದಲ್ಲಿ ಮೋದಿ-ಶಾರನ್ನು ಅಲುಗಾಡಿಸುವ ಶಕ್ತಿ ಸದ್ಯಕ್ಕಂತೂ ಕಾಣುತ್ತಿಲ್ಲ. ಹೀಗಾಗಿ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎನ್ನುವಷ್ಟು ದೂರಾಲೋಚನೆ ಪಳಗಿದ ರಾಜಕಾರಣಿಗಳಿಗೆ ಇರುವುದಿಲ್ಲವೇ?

ಹೀಗಾಗಿ ಈ ಸಾರಿ ಗೌಡರು ಯಾವ ಹಿಂಜರಿಕೆಯನ್ನೂ ತೋರಿಲ್ಲ. ಹಿಂದಿನ ಸಾರಿ ಜೆಡಿಎಸ್ ಬಿಜೆಪಿ ಮೈತ್ರಿಯಾದಾಗಲಾದರೂ ‘ಕೋಮುವಾದ, ಜಾತ್ಯಾತೀತತೆ’ ಇತ್ಯಾದಿ ಮಾತುಗಳು ಅವರ ಬಾಯಿಂದ ಬಂದಿದ್ದವು. ಆದರೆ ಈ ಸಾರಿ ಕೇವಲ ಸಿದ್ದರಾಮಯ್ಯರಿಗೆ ವಿರೋಧ ಮಾತ್ರವಲ್ಲದೇ ಯಡಿಯೂರಪ್ಪನವರ ಸರ್ಕಾರಕ್ಕೆ ಅಭಯವನ್ನೂ ನೀಡುವ ಸ್ಪಷ್ಟತೆಯನ್ನೂ ಅವರು ನೀಡಿಬಿಟ್ಟಿದ್ದಾರೆ. ಅದರ ಜೊತೆ ಜೊತೆಗೇ ಮುಂದಿನ ಯೋಜನೆಯನ್ನೂ ಪ್ರಕಟಿಸಿದ್ದಾರೆ. ಅದು – ಪಕ್ಷವನ್ನು ಕಟ್ಟುವುದು. ಸೈದ್ಧಾಂತಿಕ ಅವಕಾಶವಾದಿತನದ ಬಗ್ಗೆ ಏನೇ ಟೀಕೆ ಇದ್ದರೂ ಮೆಚ್ಚಿಕೊಳ್ಳಬೇಕಾದ್ದು ಗೌಡರ ಈ ಗುಣವನ್ನು.

ಏನು ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪನವರ ಸರ್ಕಾರವು ಪೂರ್ಣಾವಧಿ ಬಾಳಲಾರದು ಎಂಬುದು ಖಚಿತ. ಹಾಗಾಗಿ ಒಂದಷ್ಟು ಕಾಲ ಸರ್ಕಾರವನ್ನು ಉಳಿಸಿ, ಅಷ್ಟು ಅವಧಿಯನ್ನು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಂಡರೆ ಒಳ್ಳೆಯದು ಎಂಬ ಮುಂದಾಲೋಚನೆ ಅವರದ್ದು. ಹೇಗೂ ಮುಂದೆಯೂ ಎರಡರಲ್ಲೊಂದು ಪಕ್ಷಕ್ಕೆ ತಮ್ಮ ಜೊತೆಗೆ ಮೈತ್ರಿ ಮಾಡಿಕೊಳ್ಳಲೇಬೇಕಾದಷ್ಟು ಅನಿವಾರ್ಯತೆಯಿರುವ ಅತಂತ್ರತೆ ಉಂಟಾಗುವಷ್ಟು ಪಕ್ಷ ಬೆಳೆಸುವುದಷ್ಟೇ ಸಾಧ್ಯ. ಆ ಮಧ್ಯೆ ಮಾಡಬೇಕಿರುವುದು ಸಿದ್ದರಾಮಯ್ಯರನ್ನು ಹಣಿಯುವುದಷ್ಟೇ.

ಬಹುಶಃ ಸಿದ್ದರಾಮಯ್ಯನವರ ಬೆಳವಣಿಗೆ ಇರುವುದೂ ಯಡಿಯೂರಪ್ಪ, ದೇವೇಗೌಡ ರಾಜಕಾರಣವನ್ನು ವಿರೋಧಿಸುವುದರಲ್ಲೇ ಇರಬಹುದು. ಹಾಗಾಗಿ ಕರ್ನಾಟಕದ ರಾಜಕಾರಣವು ಮತ್ತೆ 2018ರ ಹೊತ್ತಿಗೇ ಬಂದು ನಿಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...