Homeಕರ್ನಾಟಕಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

- Advertisement -
- Advertisement -

| ನೀಲಗಾರ |

ಕಳೆದ ವಾರ ‘ಆಗಿಯೇಬಿಟ್ಟಿತಾ ಜೆಡಿಎಸ್-ಬಿಜೆಪಿ ಮೈತ್ರಿ?’ ಎಂಬ ವರದಿ ನಮ್ಮಲ್ಲಿ ಪ್ರಕಟವಾಗಿತ್ತು. ಮೇಲ್ನೋಟಕ್ಕೆ ಕುಮಾರಸ್ವಾಮಿಯವರ ಸಿದ್ಧಾಂತಹೀನ ದುಡುಕಿನ ಹೇಳಿಕೆಯಂತೆ ಕಂಡಿದ್ದ ಬೆಂಬಲದ ಹೇಳಿಕೆಯ ಹಿಂದೆ ಸ್ಪಷ್ಟ ಲೆಕ್ಕಾಚಾರವಿತ್ತು. ಸಿದ್ಧಾಂತಕ್ಕೂ ಅವರಿಗೂ ಸಂಬಂಧ ಹೇಗೂ ಇರಲಿಲ್ಲ. ಆದರೆ ಜೆಡಿಎಸ್‌ನ ಅಸ್ತಿತ್ವವೇ ಅಲುಗಾಡುತ್ತಿದೆ ಎಂಬುದನ್ನು ವಿವರಿಸುವ ನಾಲ್ಕು ಅಂಶಗಳನ್ನು ಆ ವರದಿಯಲ್ಲಿ ಬರೆಯಲಾಗಿತ್ತು.

ಇದೀಗ ದೇವೇಗೌಡರು ಒಂದು ಹೆಜ್ಜೆ ಮುಂದೆ ಹೋಗಿ, ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಅಭಯವನ್ನು ನೀಡಿದ್ದಾರೆ. ಬಹಳ ನಾಜೂಕಿನಿಂದ ಅದಕ್ಕೆ ಬೇಕಾದ ಸಮರ್ಥನೆಯನ್ನೂ ಕೊಡುವ ಪ್ರಯತ್ನ ಮಾಡಿದ್ದಾರೆ. ‘ಸಿದ್ದರಾಮಯ್ಯ ಅಹಿಂದ ನಾಯಕ. ನಾನು ಯಾವ ಹಿಂದ ನಾಯಕನೋ ಗೊತ್ತಿಲ್ಲ. ಅವರು ಬೇಕಾದರೆ ಇನ್ನೊಂದು ಚುನಾವಣೆ ಬರಲಿ ಎಂತಲೂ ಹೇಳಬಹುದು. ನಾನು ಅಷ್ಟು ಶಕ್ತನಲ್ಲ. ಹಾಗಾಗಿ ಚುನಾವಣೆ ಬರುವುದು ಬೇಡ’ ಎಂದಿದ್ದಾರೆ. ದೇವೇಗೌಡರು ಖುದ್ದಾಗಿ ಫೋನ್ ಮಾಡಿ ಯಡಿಯೂರಪ್ಪನವರ ಹತ್ತಿರ ಮಾತಾಡಿದ್ದಾರೆ ಎಂತಲೂ ಹೇಳಲಾಗುತ್ತಿದೆ.

ಕಳೆದ ವಾರವೇ ಹೇಳಿದ್ದಂತೆ ಹಲವು ಶಾಸಕರು ಬಿಜೆಪಿಯ ಕಡೆಗೆ ಒಲವು ತೋರಿಸಿರುವುದು ಸ್ಪಷ್ಟವಿತ್ತು ಮತ್ತು ಬಿಜೆಪಿಯು ಘಾತುಕತನದಿಂದ ಇನ್ನಷ್ಟು ಜನರನ್ನು ಸೆಳೆದುಕೊಳ್ಳುವುದೂ ಕಷ್ಟವಿರಲಿಲ್ಲ. ಈ ವಾರದ ಬೆಳವಣಿಗೆ ಎಂದರೆ ಜೆಡಿಎಸ್‌ನ ವಿಧಾನಪರಿಷತ್ತಿನ ಸದಸ್ಯರು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವರು ಸಭೆಯೊಂದನ್ನು ನಡೆಸಿದರು ಮತ್ತು ರೆಸಾರ್ಟ್ವೊಂದಕ್ಕೆ ಜೊತೆಗೂಡಿ ಹೋಗುವ ಕುರಿತೂ ಚರ್ಚಿಸಿದರು. ಶಾಸಕರ ಅಸಮಾಧಾನ ತಣಿಸಲು ದೇವೇಗೌಡರು ಸಭೆ ಕರೆದರೆ, ಕುಮಾರಸ್ವಾಮಿ ಲಂಡನ್ ವಿಮಾನ ಹತ್ತಿದ್ದರು. ಇಂತಹ ಹಲವು ಸಂದರ್ಭಗಳಲ್ಲಿ ತಂದೆ, ಮಗ ಏನೋ ಭಿನ್ನ ನಿಲುವು ತಳೆದಂತೆ ಮಾಡುವುದು, ಸಭೆಯಲ್ಲಿ ತನ್ನ ಅಸಹಾಯಕತೆಯನ್ನು ತಂದೆ ಮಗನ ಮೇಲೆ ಅಥವಾ ಮಗ ತಂದೆಯ ಮೇಲೆ ಹಾಕುವುದು ಇವೆಲ್ಲವೂ ಸಂದಿಗ್ಧವನ್ನು ಮ್ಯಾನೇಜ್ ಮಾಡುವ ಗೌಡರ ಕುಟುಂಬದ ವಿಧಾನಗಳಲ್ಲಿ ಒಂದು. ಆದರೆ, ಅಂತಿಮವಾಗಿ ಇಬ್ಬರೂ ಒಂದೇ ನಿಲುವಿಗೆ ಬಂದಿರುತ್ತಾರೆ. ಇದರಲ್ಲಿ ನಿಜಕ್ಕೂ ದೊಡ್ಡಗೌಡರು ಮತ್ತು ಎಚ್‌ಡಿಕೆ ನಡುವಿನ ಅಭಿಪ್ರಾಯಬೇಧವೂ ಕೆಲಸ ಮಾಡದಿರುವುದಿಲ್ಲ. ಆದರೆ ಅದನ್ನೇ ಭಿನ್ನಮತ ನಿಭಾಯಿಸುವ ಅಸ್ತ್ರವಾಗಿ ಬಳಸುವ ಚಾಕಚಕ್ಯತೆ ಅವರಿಗೆ ಸಿದ್ಧಿಸಿದೆ.

ಈಗಲೂ ಅದೇ ಆಗಿದೆ. ಎಚ್‌ಡಿಕೆ ಹೇಳಿದ್ದನ್ನೇ ಗೌಡರೂ ಹೇಳಿದ್ದಾರೆ. ಕಾರಣಗಳನ್ನು ಅವರ ರೀತಿಯಲ್ಲಿ ಅವರೂ, ಇವರ ರೀತಿಯಲ್ಲಿ ಇವರೂ ಹೇಳಿದ್ದಾರಷ್ಟೇ. ‘ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಬಿದ್ದಿತು ಎಂದು ನನಗೆ ಈಗ ಮನವರಿಕೆಯಾಗಿದೆ’ ಎಂದು ದೊಡ್ಡ ಗೌಡರು ಇಂದು ಹೇಳಿದ್ದಾರೆ. ಅಂದರೆ ಇಡೀ ಕಾಂಗ್ರೆಸ್ ಪಕ್ಷಕ್ಕಿಂತ ಸಿದ್ದರಾಮಯ್ಯರನ್ನು ಗುರಿ ಮಾಡುವುದು, ಬಿಜೆಪಿಯ ಜೊತೆಗೆ ಕೈ ಜೋಡಿಸುವುದು ಮತ್ತು ಆ ಮೂಲಕ ಅಹಿಂದ ವರ್ಸಸ್ ಮೇಲ್ಜಾತಿ ಧ್ರುವೀಕರಣಕ್ಕೆ ಬೇಕಾದ ಕಥನ ಸಿದ್ಧ ಮಾಡುತ್ತಾ ಹೋಗುವುದು ಇದರ ಹಿಂದಿನ ಲೆಕ್ಕಾಚಾರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಅನ್ನು ಕೈ ಹಿಡಿದಿದ್ದು ಇದೇ ಆಗಿತ್ತು. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಇದಕ್ಕೆ ಒಂದಷ್ಟು ಧಕ್ಕೆ ಬಂದಿತ್ತು. ಈಗ ಮತ್ತೆ ಧ್ರುವೀಕರಣಕ್ಕೆ ಪ್ರಯತ್ನಿಸಿ ತಮ್ಮ ನೆಲೆ ಉಳಿಸಿಕೊಳ್ಳುವ ಯತ್ನ ಮಾಡುತ್ತಿರುವುದನ್ನು ಗೌಡರು ಇಂದು ಲೆಕ್ಕಾಚಾರ ಹಾಕಿ ಆಡಿದ ಮಾತುಗಳಲ್ಲಿ ನೋಡಬಹುದು.

ಅತ್ತ ಶರದ್‌ಪವಾರ್ ಜೊತೆಗೂ ಆಪ್ತರಾಗಿರುವ ದೇವೇಗೌಡರು ಹರಿಯಾಣ ಹಾಗೂ ಮಹಾರಾಷ್ಟ್ರಗಳಲ್ಲಿ ಅತಂತ್ರ ಪರಿಸ್ಥಿತಿ ಉಂಟಾದ ನಂತರ ಬಿಜೆಪಿಯ ಜೊತೆಗೆ ಕೈ ಜೋಡಿಸಲಾರರು ಎಂಬ ಮಾತು ಜೆಡಿಎಸ್ ವಲಯಗಳಲ್ಲಿತ್ತು. ಆದರೆ ಕರ್ನಾಟಕದ ಮಟ್ಟಿಗೆ ಜೆಡಿಎಸ್ ಪರಿಸ್ಥಿತಿ ಕಷ್ಟವಿತ್ತು. ಈಗಲೇ ಚುನಾವಣೆ ನಡೆದರೆ ಬಹಳವೇ ಕಷ್ಟವಿದೆ ಎಂಬ ದೇವೇಗೌಡರ ಮಾತು ಸುಳ್ಳಲ್ಲ. ರಾಜ್ಯಗಳ ಮಟ್ಟಿಗೆ ಏನೇ ವ್ಯತ್ಯಾಸ ಉಂಟಾದರೂ, ಕೇಂದ್ರದಲ್ಲಿ ಮೋದಿ-ಶಾರನ್ನು ಅಲುಗಾಡಿಸುವ ಶಕ್ತಿ ಸದ್ಯಕ್ಕಂತೂ ಕಾಣುತ್ತಿಲ್ಲ. ಹೀಗಾಗಿ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎನ್ನುವಷ್ಟು ದೂರಾಲೋಚನೆ ಪಳಗಿದ ರಾಜಕಾರಣಿಗಳಿಗೆ ಇರುವುದಿಲ್ಲವೇ?

ಹೀಗಾಗಿ ಈ ಸಾರಿ ಗೌಡರು ಯಾವ ಹಿಂಜರಿಕೆಯನ್ನೂ ತೋರಿಲ್ಲ. ಹಿಂದಿನ ಸಾರಿ ಜೆಡಿಎಸ್ ಬಿಜೆಪಿ ಮೈತ್ರಿಯಾದಾಗಲಾದರೂ ‘ಕೋಮುವಾದ, ಜಾತ್ಯಾತೀತತೆ’ ಇತ್ಯಾದಿ ಮಾತುಗಳು ಅವರ ಬಾಯಿಂದ ಬಂದಿದ್ದವು. ಆದರೆ ಈ ಸಾರಿ ಕೇವಲ ಸಿದ್ದರಾಮಯ್ಯರಿಗೆ ವಿರೋಧ ಮಾತ್ರವಲ್ಲದೇ ಯಡಿಯೂರಪ್ಪನವರ ಸರ್ಕಾರಕ್ಕೆ ಅಭಯವನ್ನೂ ನೀಡುವ ಸ್ಪಷ್ಟತೆಯನ್ನೂ ಅವರು ನೀಡಿಬಿಟ್ಟಿದ್ದಾರೆ. ಅದರ ಜೊತೆ ಜೊತೆಗೇ ಮುಂದಿನ ಯೋಜನೆಯನ್ನೂ ಪ್ರಕಟಿಸಿದ್ದಾರೆ. ಅದು – ಪಕ್ಷವನ್ನು ಕಟ್ಟುವುದು. ಸೈದ್ಧಾಂತಿಕ ಅವಕಾಶವಾದಿತನದ ಬಗ್ಗೆ ಏನೇ ಟೀಕೆ ಇದ್ದರೂ ಮೆಚ್ಚಿಕೊಳ್ಳಬೇಕಾದ್ದು ಗೌಡರ ಈ ಗುಣವನ್ನು.

ಏನು ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪನವರ ಸರ್ಕಾರವು ಪೂರ್ಣಾವಧಿ ಬಾಳಲಾರದು ಎಂಬುದು ಖಚಿತ. ಹಾಗಾಗಿ ಒಂದಷ್ಟು ಕಾಲ ಸರ್ಕಾರವನ್ನು ಉಳಿಸಿ, ಅಷ್ಟು ಅವಧಿಯನ್ನು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಂಡರೆ ಒಳ್ಳೆಯದು ಎಂಬ ಮುಂದಾಲೋಚನೆ ಅವರದ್ದು. ಹೇಗೂ ಮುಂದೆಯೂ ಎರಡರಲ್ಲೊಂದು ಪಕ್ಷಕ್ಕೆ ತಮ್ಮ ಜೊತೆಗೆ ಮೈತ್ರಿ ಮಾಡಿಕೊಳ್ಳಲೇಬೇಕಾದಷ್ಟು ಅನಿವಾರ್ಯತೆಯಿರುವ ಅತಂತ್ರತೆ ಉಂಟಾಗುವಷ್ಟು ಪಕ್ಷ ಬೆಳೆಸುವುದಷ್ಟೇ ಸಾಧ್ಯ. ಆ ಮಧ್ಯೆ ಮಾಡಬೇಕಿರುವುದು ಸಿದ್ದರಾಮಯ್ಯರನ್ನು ಹಣಿಯುವುದಷ್ಟೇ.

ಬಹುಶಃ ಸಿದ್ದರಾಮಯ್ಯನವರ ಬೆಳವಣಿಗೆ ಇರುವುದೂ ಯಡಿಯೂರಪ್ಪ, ದೇವೇಗೌಡ ರಾಜಕಾರಣವನ್ನು ವಿರೋಧಿಸುವುದರಲ್ಲೇ ಇರಬಹುದು. ಹಾಗಾಗಿ ಕರ್ನಾಟಕದ ರಾಜಕಾರಣವು ಮತ್ತೆ 2018ರ ಹೊತ್ತಿಗೇ ಬಂದು ನಿಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...