Homeಕರ್ನಾಟಕಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬಜೆಟ್ ಮಂಡನೆಯನ್ನು ದಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಮಲ-ದಳ ನಾಯಕರ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬಜೆಟ್ ಮಂಡನೆ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ ಬಜೆಟ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಜೆಟ್ ಅನ್ನು ಬಾಯ್ಕಾಟ್ ಮಾಡುವ ಮೂಲಕ ವಿರೋಧ ಪಕ್ಷಗಳ ನಾಯಕರು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು. ರಾಜ್ಯದ ಇತಿಹಾಸದಲ್ಲಿ ಯಾವುದೇ ವಿರೋಧ ಪಕ್ಷದವರು ಈ ರೀತಿ ಬಜೆಟ್ ಗೆ ಅಪಮಾನ ಮಾಡಿ ಹೋಗಿರಲಿಲ್ಲ. ಅವರು ಬಜೆಟ್ ಮಂಡನೆ ನಂತರ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದರು. ಆದರೆ ಇಂದು ಜನರ ಕಷ್ಟಕ್ಕೆ ಸ್ಪಂದಿಸುವ ಬಜೆಟ್ ಅನ್ನು ಧಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ, ಎಲ್ಲ ಕ್ಷೇತ್ರದಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರುವ ಬಜೆಟ್. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಬಗ್ಗೆ ದೊಡ್ಡ ಪ್ರಮಾಣದ ದೂರದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ನೀರಾವರಿ ಇಲಾಖೆಯಲ್ಲಿ ಹೊಸ ಚಿಂತನೆ ಹಮ್ಮಿಕೊಳ್ಳಲಾಗಿದೆ. ಕೆಆರ್ ಎಸ್ ಉದ್ಯಾನ ಅಭಿವೃದ್ಧಿ, ನವಲಿ ಸಮತೋಲಿತ ಜಲಾಶಯ ನಿರ್ಮಾಣ, ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗೆ ಮುಂದಾಗಿದ್ದೇವೆ. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡದಿದ್ದರೂ ನಾವು ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟ ತಕ್ಷಣ ಕೆಲಸ ಆರಂಭಿಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೇಕೆದಾಟು ಯೋಜನೆಗೂ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ವಿವರಿಸಿದರು.

‘ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ, ನೆಲಮಂಗಲ, ಬಿಡದಿ ಸೇರಿದಂತೆ ಐದು ಹೊಸ ಟೌನ್ ಶಿಪ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸ್ಕೈ ಡೆಕ್ ನಿರ್ಮಾಣ ಮಾಡಲು ಪ್ರಸ್ತಾವನೆ ಮಾಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆ ಸರಿ ಮಾಡಲು ಬದಲಾವಣೆ ತರುತ್ತಿದ್ದೇವೆ. ಪಹಣಿ, ಪೋಡಿ, ಖಾತೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ’ ಎಂದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ:

ಮುಖ್ಯಮಂತ್ರಿ ಸಿದ್ದರಾಮಯ್ಯನವರು 15ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ದೇಶದಲ್ಲೇ ಇದು ಮಾದರಿಯಾಗಿದೆ. ₹3.71 ಲಕ್ಷ ಕೋಟಿ ಮೊತ್ತದ ಬಜೆಟ್ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಆರ್ಥಿಕ ಶಿಸ್ತು ಪಾಲನೆಯಾಗಿದೆ:

‘ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ರಾಜ್ಯದಲ್ಲಿ ಆರ್ಥಿಕ ಶಿಸ್ತು ಪಾಲನೆ ಮಾಡಿಕೊಂಡಿದ್ದೇವೆ. ನಾವು ಯಾರ ಮೇಲೂ ಹೆಚ್ಚಿನ ತೆರಿಗೆ ಹಾಕಿಲ್ಲ. ನಮಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಕ್ರೂಢೀಕರಣ ಮಾಡಿಕೊಳ್ಳುತ್ತೇವೆ’ ಎಂದು ತಿಳಿಸಿದರು.

ನೀರಾವರಿ ಇಲಾಖೆಗೆ ಹಾಗೂ ಶಿವಕುಮಾರ್ ಅವರಿಗೆ ಅನ್ಯಾಯ ಮಾಡಲಾಗಿದೆ ಎಂಬ ಯಡಿಯೂರಪ್ಪ ಅವರ ಟೀಕೆ ಬಗ್ಗೆ ಕೇಳಿದಾಗ, ‘ಯಡಿಯೂರಪ್ಪನವರಿಂದ ನಿರೀಕ್ಷೆ ಮಾಡಲು ಸಾಧ್ಯವೇ? ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಕೆಲಸಗಳಿಗೂ ನಾವು ಅನುಮೋದನೆ ನೀಡಿದ್ದೇವೆ. ನಿಮ್ಮ ಇಲಾಖೆಗಳಿಗೆ ಅನುದಾನದಲ್ಲಿ ಅನ್ಯಾಯವಾಗಿಲ್ಲವೇ ಎಂದು ಕೇಳಿದಾಗ, ‘ನೀರಾವರಿ ಬೇರೆ, ಇತರ ಇಲಾಖೆ ಬೇರೆ ಎಂದು ನಾನು ಹೇಳುವುದಿಲ್ಲ. ನಾನು ಸಮಗ್ರ ಕರ್ನಾಟಕದವನು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕಕ್ಕೂ ಸೇರಿ ಮಾತನಾಡುತ್ತಿದ್ದೇನೆ’ ಎಂದರು.

ಕಳೆದ ಬಜೆಟ್ ನಲ್ಲಿ ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ಹಣ ನಿಗದಿ ಮಾಡಲಾಗಿತ್ತು ಎಂದು ಕೇಳಿದಾಗ, ‘ಈ ಯೋಜನೆಗಳಿಗೆ ನಾವು ಹಣ ಇಟ್ಟಿರಲಿಲ್ಲ. ಅವರು ಹಣ ಘೋಷಣೆ ಮಾಡಿ ನಂತರ ಹಿಂಪಡೆದಿದ್ದರು’ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೂ ಬಜೆಟ್ ತೃಪ್ತಿಯಿದೆ:

ಬಜೆಟ್ ಅನ್ನು ಬಿಜೆಪಿ ಶಾಸಕ ಸೋಮಶೇಖರ್ ಅವರು ಸ್ವಾಗತಿಸಿರುವ ಬಗ್ಗೆ ಕೇಳಿದಾಗ, ‘ನೀವು ಕೇವಲ ಅವರನ್ನು ಮಾತ್ರ ಕೇಳಿದ್ದೀರಿ. ಬೇರೆಯವರನ್ನೂ ಕೇಳಿ ಅವರಿಗೂ ಈ ಬಜೆಟ್ ನಿಂದ ಸಂತೋಷವಾಗಿದೆ. ಆದರೆ ಅದನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರು ನಗರಕ್ಕೆ ಏನೇನು ಬೇಕು ಎಂದು ಸೋಮಶೇಖರ್ ಅವರಿಗೆ ಗೊತ್ತಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ನೀಡಬೇಕು ಎಂದು ಪತ್ರ ನೀಡಿದ್ದೇ ಅವರು. ಹೀಗಾಗಿ ಅವರು ಇದನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಶಾಸಕರು ಕೂಡ ಇನ್ನಷ್ಟು ಬೇಡಿಕೆ ನಮಗೆ ಕೊಟ್ಟಿದ್ದಾರೆ. ಪಾಲಿಕೆ ಬಜೆಟ್ ಮಂಡನೆ ವೇಳೆಯಲ್ಲಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ’ ಎಂದರು.

ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್ ನಲ್ಲಿ ಕೊಡುಗೆ ಏನು ಎಂದು ಕೇಳಿದಾಗ, ‘ಟನಲ್ ರಸ್ತೆ, ಬಿಸಿನೆಸ್ ಕಾರಿಡಾರ್, ಸ್ಯಾಟಲೈಟ್ ಟೌನ್ ಶಿಪ್, ಮೆಟ್ರೋ ಯೋಜನೆ, ಉಪನಗರ ರೈಲು, ಸ್ಕೈ ಡೆಕ್ ಯೋಜನೆಗಳನ್ನು ನೀಡಲಾಗಿದೆ. ಇದಕ್ಕಿಂತ ಇನ್ನೇನು ಬೇಕು’ ಎಂದು ಕೇಳಿದರು.

ಕುಮಾರಸ್ವಾಮಿ ಅವರು ಸದನಕ್ಕೆ ಬಂದು ಟೀಕಿಸಲಿ:

ರಸ್ತೆ ರಿಪೇರಿ ಮಾಡಲು ಹಣವಿಲ್ಲ ಟನಲ್ ರಸ್ತೆಗೆ ಹಣವಿಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ಪಾಪ ಕುಮಾರಸ್ವಾಮಿ ಅವರಿಗೆ ಅಧಿವೇಶನಕ್ಕೆ ಬರಲು ಆಗಿಲ್ಲ. ಅವರು ಬಂದು ಬಜೆಟ್ ನೋಡಿದ್ದರೆ ತಿಳಿಯುತ್ತಿತ್ತು. ಅವರು ಎಲ್ಲೋ ಕೂತು ಪಿಎಗಳು, ಮಾಧ್ಯಮಗಳು ಹೇಳಿದ್ದನ್ನು ಕೇಳಿಕೊಂಡು ಮಾತನಾಡಿದರೆ ಹೇಗೆ? ಸದನಕ್ಕೆ ಬಂದು ನಮ್ಮ ತಪ್ಪು ಏನು ಎಂದು ಚರ್ಚೆ ಮಾಡಿದ್ದರೆ ನಾವು ಯೋಚನೆ ಮಾಡಬಹುದು. ಅವರ ಮಾರ್ಗದರ್ಶನ ನಮಗೆ ಅವಶ್ಯಕತೆ ಇದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...