Homeಕರ್ನಾಟಕಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬಜೆಟ್ ಮಂಡನೆಯನ್ನು ದಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಮಲ-ದಳ ನಾಯಕರ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬಜೆಟ್ ಮಂಡನೆ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ ಬಜೆಟ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಜೆಟ್ ಅನ್ನು ಬಾಯ್ಕಾಟ್ ಮಾಡುವ ಮೂಲಕ ವಿರೋಧ ಪಕ್ಷಗಳ ನಾಯಕರು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು. ರಾಜ್ಯದ ಇತಿಹಾಸದಲ್ಲಿ ಯಾವುದೇ ವಿರೋಧ ಪಕ್ಷದವರು ಈ ರೀತಿ ಬಜೆಟ್ ಗೆ ಅಪಮಾನ ಮಾಡಿ ಹೋಗಿರಲಿಲ್ಲ. ಅವರು ಬಜೆಟ್ ಮಂಡನೆ ನಂತರ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದರು. ಆದರೆ ಇಂದು ಜನರ ಕಷ್ಟಕ್ಕೆ ಸ್ಪಂದಿಸುವ ಬಜೆಟ್ ಅನ್ನು ಧಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ, ಎಲ್ಲ ಕ್ಷೇತ್ರದಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರುವ ಬಜೆಟ್. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಬಗ್ಗೆ ದೊಡ್ಡ ಪ್ರಮಾಣದ ದೂರದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ನೀರಾವರಿ ಇಲಾಖೆಯಲ್ಲಿ ಹೊಸ ಚಿಂತನೆ ಹಮ್ಮಿಕೊಳ್ಳಲಾಗಿದೆ. ಕೆಆರ್ ಎಸ್ ಉದ್ಯಾನ ಅಭಿವೃದ್ಧಿ, ನವಲಿ ಸಮತೋಲಿತ ಜಲಾಶಯ ನಿರ್ಮಾಣ, ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗೆ ಮುಂದಾಗಿದ್ದೇವೆ. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡದಿದ್ದರೂ ನಾವು ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟ ತಕ್ಷಣ ಕೆಲಸ ಆರಂಭಿಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೇಕೆದಾಟು ಯೋಜನೆಗೂ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ವಿವರಿಸಿದರು.

‘ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ, ನೆಲಮಂಗಲ, ಬಿಡದಿ ಸೇರಿದಂತೆ ಐದು ಹೊಸ ಟೌನ್ ಶಿಪ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸ್ಕೈ ಡೆಕ್ ನಿರ್ಮಾಣ ಮಾಡಲು ಪ್ರಸ್ತಾವನೆ ಮಾಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆ ಸರಿ ಮಾಡಲು ಬದಲಾವಣೆ ತರುತ್ತಿದ್ದೇವೆ. ಪಹಣಿ, ಪೋಡಿ, ಖಾತೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ’ ಎಂದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ:

ಮುಖ್ಯಮಂತ್ರಿ ಸಿದ್ದರಾಮಯ್ಯನವರು 15ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ದೇಶದಲ್ಲೇ ಇದು ಮಾದರಿಯಾಗಿದೆ. ₹3.71 ಲಕ್ಷ ಕೋಟಿ ಮೊತ್ತದ ಬಜೆಟ್ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಆರ್ಥಿಕ ಶಿಸ್ತು ಪಾಲನೆಯಾಗಿದೆ:

‘ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ರಾಜ್ಯದಲ್ಲಿ ಆರ್ಥಿಕ ಶಿಸ್ತು ಪಾಲನೆ ಮಾಡಿಕೊಂಡಿದ್ದೇವೆ. ನಾವು ಯಾರ ಮೇಲೂ ಹೆಚ್ಚಿನ ತೆರಿಗೆ ಹಾಕಿಲ್ಲ. ನಮಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಕ್ರೂಢೀಕರಣ ಮಾಡಿಕೊಳ್ಳುತ್ತೇವೆ’ ಎಂದು ತಿಳಿಸಿದರು.

ನೀರಾವರಿ ಇಲಾಖೆಗೆ ಹಾಗೂ ಶಿವಕುಮಾರ್ ಅವರಿಗೆ ಅನ್ಯಾಯ ಮಾಡಲಾಗಿದೆ ಎಂಬ ಯಡಿಯೂರಪ್ಪ ಅವರ ಟೀಕೆ ಬಗ್ಗೆ ಕೇಳಿದಾಗ, ‘ಯಡಿಯೂರಪ್ಪನವರಿಂದ ನಿರೀಕ್ಷೆ ಮಾಡಲು ಸಾಧ್ಯವೇ? ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಕೆಲಸಗಳಿಗೂ ನಾವು ಅನುಮೋದನೆ ನೀಡಿದ್ದೇವೆ. ನಿಮ್ಮ ಇಲಾಖೆಗಳಿಗೆ ಅನುದಾನದಲ್ಲಿ ಅನ್ಯಾಯವಾಗಿಲ್ಲವೇ ಎಂದು ಕೇಳಿದಾಗ, ‘ನೀರಾವರಿ ಬೇರೆ, ಇತರ ಇಲಾಖೆ ಬೇರೆ ಎಂದು ನಾನು ಹೇಳುವುದಿಲ್ಲ. ನಾನು ಸಮಗ್ರ ಕರ್ನಾಟಕದವನು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕಕ್ಕೂ ಸೇರಿ ಮಾತನಾಡುತ್ತಿದ್ದೇನೆ’ ಎಂದರು.

ಕಳೆದ ಬಜೆಟ್ ನಲ್ಲಿ ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ಹಣ ನಿಗದಿ ಮಾಡಲಾಗಿತ್ತು ಎಂದು ಕೇಳಿದಾಗ, ‘ಈ ಯೋಜನೆಗಳಿಗೆ ನಾವು ಹಣ ಇಟ್ಟಿರಲಿಲ್ಲ. ಅವರು ಹಣ ಘೋಷಣೆ ಮಾಡಿ ನಂತರ ಹಿಂಪಡೆದಿದ್ದರು’ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೂ ಬಜೆಟ್ ತೃಪ್ತಿಯಿದೆ:

ಬಜೆಟ್ ಅನ್ನು ಬಿಜೆಪಿ ಶಾಸಕ ಸೋಮಶೇಖರ್ ಅವರು ಸ್ವಾಗತಿಸಿರುವ ಬಗ್ಗೆ ಕೇಳಿದಾಗ, ‘ನೀವು ಕೇವಲ ಅವರನ್ನು ಮಾತ್ರ ಕೇಳಿದ್ದೀರಿ. ಬೇರೆಯವರನ್ನೂ ಕೇಳಿ ಅವರಿಗೂ ಈ ಬಜೆಟ್ ನಿಂದ ಸಂತೋಷವಾಗಿದೆ. ಆದರೆ ಅದನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರು ನಗರಕ್ಕೆ ಏನೇನು ಬೇಕು ಎಂದು ಸೋಮಶೇಖರ್ ಅವರಿಗೆ ಗೊತ್ತಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ನೀಡಬೇಕು ಎಂದು ಪತ್ರ ನೀಡಿದ್ದೇ ಅವರು. ಹೀಗಾಗಿ ಅವರು ಇದನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಶಾಸಕರು ಕೂಡ ಇನ್ನಷ್ಟು ಬೇಡಿಕೆ ನಮಗೆ ಕೊಟ್ಟಿದ್ದಾರೆ. ಪಾಲಿಕೆ ಬಜೆಟ್ ಮಂಡನೆ ವೇಳೆಯಲ್ಲಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ’ ಎಂದರು.

ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್ ನಲ್ಲಿ ಕೊಡುಗೆ ಏನು ಎಂದು ಕೇಳಿದಾಗ, ‘ಟನಲ್ ರಸ್ತೆ, ಬಿಸಿನೆಸ್ ಕಾರಿಡಾರ್, ಸ್ಯಾಟಲೈಟ್ ಟೌನ್ ಶಿಪ್, ಮೆಟ್ರೋ ಯೋಜನೆ, ಉಪನಗರ ರೈಲು, ಸ್ಕೈ ಡೆಕ್ ಯೋಜನೆಗಳನ್ನು ನೀಡಲಾಗಿದೆ. ಇದಕ್ಕಿಂತ ಇನ್ನೇನು ಬೇಕು’ ಎಂದು ಕೇಳಿದರು.

ಕುಮಾರಸ್ವಾಮಿ ಅವರು ಸದನಕ್ಕೆ ಬಂದು ಟೀಕಿಸಲಿ:

ರಸ್ತೆ ರಿಪೇರಿ ಮಾಡಲು ಹಣವಿಲ್ಲ ಟನಲ್ ರಸ್ತೆಗೆ ಹಣವಿಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ಪಾಪ ಕುಮಾರಸ್ವಾಮಿ ಅವರಿಗೆ ಅಧಿವೇಶನಕ್ಕೆ ಬರಲು ಆಗಿಲ್ಲ. ಅವರು ಬಂದು ಬಜೆಟ್ ನೋಡಿದ್ದರೆ ತಿಳಿಯುತ್ತಿತ್ತು. ಅವರು ಎಲ್ಲೋ ಕೂತು ಪಿಎಗಳು, ಮಾಧ್ಯಮಗಳು ಹೇಳಿದ್ದನ್ನು ಕೇಳಿಕೊಂಡು ಮಾತನಾಡಿದರೆ ಹೇಗೆ? ಸದನಕ್ಕೆ ಬಂದು ನಮ್ಮ ತಪ್ಪು ಏನು ಎಂದು ಚರ್ಚೆ ಮಾಡಿದ್ದರೆ ನಾವು ಯೋಚನೆ ಮಾಡಬಹುದು. ಅವರ ಮಾರ್ಗದರ್ಶನ ನಮಗೆ ಅವಶ್ಯಕತೆ ಇದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...