Homeಕರ್ನಾಟಕಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬಜೆಟ್ ಮಂಡನೆಯನ್ನು ದಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಮಲ-ದಳ ನಾಯಕರ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬಜೆಟ್ ಮಂಡನೆ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ ಬಜೆಟ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಜೆಟ್ ಅನ್ನು ಬಾಯ್ಕಾಟ್ ಮಾಡುವ ಮೂಲಕ ವಿರೋಧ ಪಕ್ಷಗಳ ನಾಯಕರು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು. ರಾಜ್ಯದ ಇತಿಹಾಸದಲ್ಲಿ ಯಾವುದೇ ವಿರೋಧ ಪಕ್ಷದವರು ಈ ರೀತಿ ಬಜೆಟ್ ಗೆ ಅಪಮಾನ ಮಾಡಿ ಹೋಗಿರಲಿಲ್ಲ. ಅವರು ಬಜೆಟ್ ಮಂಡನೆ ನಂತರ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದರು. ಆದರೆ ಇಂದು ಜನರ ಕಷ್ಟಕ್ಕೆ ಸ್ಪಂದಿಸುವ ಬಜೆಟ್ ಅನ್ನು ಧಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ, ಎಲ್ಲ ಕ್ಷೇತ್ರದಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರುವ ಬಜೆಟ್. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಬಗ್ಗೆ ದೊಡ್ಡ ಪ್ರಮಾಣದ ದೂರದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ನೀರಾವರಿ ಇಲಾಖೆಯಲ್ಲಿ ಹೊಸ ಚಿಂತನೆ ಹಮ್ಮಿಕೊಳ್ಳಲಾಗಿದೆ. ಕೆಆರ್ ಎಸ್ ಉದ್ಯಾನ ಅಭಿವೃದ್ಧಿ, ನವಲಿ ಸಮತೋಲಿತ ಜಲಾಶಯ ನಿರ್ಮಾಣ, ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗೆ ಮುಂದಾಗಿದ್ದೇವೆ. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡದಿದ್ದರೂ ನಾವು ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟ ತಕ್ಷಣ ಕೆಲಸ ಆರಂಭಿಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೇಕೆದಾಟು ಯೋಜನೆಗೂ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ವಿವರಿಸಿದರು.

‘ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ, ನೆಲಮಂಗಲ, ಬಿಡದಿ ಸೇರಿದಂತೆ ಐದು ಹೊಸ ಟೌನ್ ಶಿಪ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸ್ಕೈ ಡೆಕ್ ನಿರ್ಮಾಣ ಮಾಡಲು ಪ್ರಸ್ತಾವನೆ ಮಾಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆ ಸರಿ ಮಾಡಲು ಬದಲಾವಣೆ ತರುತ್ತಿದ್ದೇವೆ. ಪಹಣಿ, ಪೋಡಿ, ಖಾತೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ’ ಎಂದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ:

ಮುಖ್ಯಮಂತ್ರಿ ಸಿದ್ದರಾಮಯ್ಯನವರು 15ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ದೇಶದಲ್ಲೇ ಇದು ಮಾದರಿಯಾಗಿದೆ. ₹3.71 ಲಕ್ಷ ಕೋಟಿ ಮೊತ್ತದ ಬಜೆಟ್ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಆರ್ಥಿಕ ಶಿಸ್ತು ಪಾಲನೆಯಾಗಿದೆ:

‘ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ರಾಜ್ಯದಲ್ಲಿ ಆರ್ಥಿಕ ಶಿಸ್ತು ಪಾಲನೆ ಮಾಡಿಕೊಂಡಿದ್ದೇವೆ. ನಾವು ಯಾರ ಮೇಲೂ ಹೆಚ್ಚಿನ ತೆರಿಗೆ ಹಾಕಿಲ್ಲ. ನಮಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಕ್ರೂಢೀಕರಣ ಮಾಡಿಕೊಳ್ಳುತ್ತೇವೆ’ ಎಂದು ತಿಳಿಸಿದರು.

ನೀರಾವರಿ ಇಲಾಖೆಗೆ ಹಾಗೂ ಶಿವಕುಮಾರ್ ಅವರಿಗೆ ಅನ್ಯಾಯ ಮಾಡಲಾಗಿದೆ ಎಂಬ ಯಡಿಯೂರಪ್ಪ ಅವರ ಟೀಕೆ ಬಗ್ಗೆ ಕೇಳಿದಾಗ, ‘ಯಡಿಯೂರಪ್ಪನವರಿಂದ ನಿರೀಕ್ಷೆ ಮಾಡಲು ಸಾಧ್ಯವೇ? ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಕೆಲಸಗಳಿಗೂ ನಾವು ಅನುಮೋದನೆ ನೀಡಿದ್ದೇವೆ. ನಿಮ್ಮ ಇಲಾಖೆಗಳಿಗೆ ಅನುದಾನದಲ್ಲಿ ಅನ್ಯಾಯವಾಗಿಲ್ಲವೇ ಎಂದು ಕೇಳಿದಾಗ, ‘ನೀರಾವರಿ ಬೇರೆ, ಇತರ ಇಲಾಖೆ ಬೇರೆ ಎಂದು ನಾನು ಹೇಳುವುದಿಲ್ಲ. ನಾನು ಸಮಗ್ರ ಕರ್ನಾಟಕದವನು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕಕ್ಕೂ ಸೇರಿ ಮಾತನಾಡುತ್ತಿದ್ದೇನೆ’ ಎಂದರು.

ಕಳೆದ ಬಜೆಟ್ ನಲ್ಲಿ ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ಹಣ ನಿಗದಿ ಮಾಡಲಾಗಿತ್ತು ಎಂದು ಕೇಳಿದಾಗ, ‘ಈ ಯೋಜನೆಗಳಿಗೆ ನಾವು ಹಣ ಇಟ್ಟಿರಲಿಲ್ಲ. ಅವರು ಹಣ ಘೋಷಣೆ ಮಾಡಿ ನಂತರ ಹಿಂಪಡೆದಿದ್ದರು’ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೂ ಬಜೆಟ್ ತೃಪ್ತಿಯಿದೆ:

ಬಜೆಟ್ ಅನ್ನು ಬಿಜೆಪಿ ಶಾಸಕ ಸೋಮಶೇಖರ್ ಅವರು ಸ್ವಾಗತಿಸಿರುವ ಬಗ್ಗೆ ಕೇಳಿದಾಗ, ‘ನೀವು ಕೇವಲ ಅವರನ್ನು ಮಾತ್ರ ಕೇಳಿದ್ದೀರಿ. ಬೇರೆಯವರನ್ನೂ ಕೇಳಿ ಅವರಿಗೂ ಈ ಬಜೆಟ್ ನಿಂದ ಸಂತೋಷವಾಗಿದೆ. ಆದರೆ ಅದನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರು ನಗರಕ್ಕೆ ಏನೇನು ಬೇಕು ಎಂದು ಸೋಮಶೇಖರ್ ಅವರಿಗೆ ಗೊತ್ತಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ನೀಡಬೇಕು ಎಂದು ಪತ್ರ ನೀಡಿದ್ದೇ ಅವರು. ಹೀಗಾಗಿ ಅವರು ಇದನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಶಾಸಕರು ಕೂಡ ಇನ್ನಷ್ಟು ಬೇಡಿಕೆ ನಮಗೆ ಕೊಟ್ಟಿದ್ದಾರೆ. ಪಾಲಿಕೆ ಬಜೆಟ್ ಮಂಡನೆ ವೇಳೆಯಲ್ಲಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ’ ಎಂದರು.

ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್ ನಲ್ಲಿ ಕೊಡುಗೆ ಏನು ಎಂದು ಕೇಳಿದಾಗ, ‘ಟನಲ್ ರಸ್ತೆ, ಬಿಸಿನೆಸ್ ಕಾರಿಡಾರ್, ಸ್ಯಾಟಲೈಟ್ ಟೌನ್ ಶಿಪ್, ಮೆಟ್ರೋ ಯೋಜನೆ, ಉಪನಗರ ರೈಲು, ಸ್ಕೈ ಡೆಕ್ ಯೋಜನೆಗಳನ್ನು ನೀಡಲಾಗಿದೆ. ಇದಕ್ಕಿಂತ ಇನ್ನೇನು ಬೇಕು’ ಎಂದು ಕೇಳಿದರು.

ಕುಮಾರಸ್ವಾಮಿ ಅವರು ಸದನಕ್ಕೆ ಬಂದು ಟೀಕಿಸಲಿ:

ರಸ್ತೆ ರಿಪೇರಿ ಮಾಡಲು ಹಣವಿಲ್ಲ ಟನಲ್ ರಸ್ತೆಗೆ ಹಣವಿಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ಪಾಪ ಕುಮಾರಸ್ವಾಮಿ ಅವರಿಗೆ ಅಧಿವೇಶನಕ್ಕೆ ಬರಲು ಆಗಿಲ್ಲ. ಅವರು ಬಂದು ಬಜೆಟ್ ನೋಡಿದ್ದರೆ ತಿಳಿಯುತ್ತಿತ್ತು. ಅವರು ಎಲ್ಲೋ ಕೂತು ಪಿಎಗಳು, ಮಾಧ್ಯಮಗಳು ಹೇಳಿದ್ದನ್ನು ಕೇಳಿಕೊಂಡು ಮಾತನಾಡಿದರೆ ಹೇಗೆ? ಸದನಕ್ಕೆ ಬಂದು ನಮ್ಮ ತಪ್ಪು ಏನು ಎಂದು ಚರ್ಚೆ ಮಾಡಿದ್ದರೆ ನಾವು ಯೋಚನೆ ಮಾಡಬಹುದು. ಅವರ ಮಾರ್ಗದರ್ಶನ ನಮಗೆ ಅವಶ್ಯಕತೆ ಇದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...