Homeಕರ್ನಾಟಕಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.

“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದರು.

“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.

“ಮೂಡಾ ಹಗರಣ ವಿಚಾರವಾಗಿ ಕಾನೂನು ವಿದ್ಯಾರ್ಥಿಯಾದ ಹಾಗೂ 40 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುವೆ” ಎಂದರು.

“ನನ್ನ ಮೇಲೆ ಆರೋಪ ಕೇಳಿ ಬಂದಿದ್ದರು ಕೂಡ ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್‌ನವರು ಮೂಡಾ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಬಿಜೆಪಿ-ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಡುವೆ ಎಂದು ಮೂಡಾ ಪ್ರಕರಣದ ದಾಖಲೆಗಳನ್ನು ಸಿಎಂ ಬಹಿರಂಗ ಪಡಿಸಿದರು.

“ಆಗ ಮೂಡಾದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ” ಪ್ರಶ್ನಿಸಿದರು.

“ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದರು.

“ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ-ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....