Homeಕರ್ನಾಟಕಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.

“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದರು.

“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.

“ಮೂಡಾ ಹಗರಣ ವಿಚಾರವಾಗಿ ಕಾನೂನು ವಿದ್ಯಾರ್ಥಿಯಾದ ಹಾಗೂ 40 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುವೆ” ಎಂದರು.

“ನನ್ನ ಮೇಲೆ ಆರೋಪ ಕೇಳಿ ಬಂದಿದ್ದರು ಕೂಡ ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್‌ನವರು ಮೂಡಾ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಬಿಜೆಪಿ-ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಡುವೆ ಎಂದು ಮೂಡಾ ಪ್ರಕರಣದ ದಾಖಲೆಗಳನ್ನು ಸಿಎಂ ಬಹಿರಂಗ ಪಡಿಸಿದರು.

“ಆಗ ಮೂಡಾದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ” ಪ್ರಶ್ನಿಸಿದರು.

“ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದರು.

“ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ-ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...