Homeಕರ್ನಾಟಕಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.

“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದರು.

“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.

“ಮೂಡಾ ಹಗರಣ ವಿಚಾರವಾಗಿ ಕಾನೂನು ವಿದ್ಯಾರ್ಥಿಯಾದ ಹಾಗೂ 40 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುವೆ” ಎಂದರು.

“ನನ್ನ ಮೇಲೆ ಆರೋಪ ಕೇಳಿ ಬಂದಿದ್ದರು ಕೂಡ ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್‌ನವರು ಮೂಡಾ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಬಿಜೆಪಿ-ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಡುವೆ ಎಂದು ಮೂಡಾ ಪ್ರಕರಣದ ದಾಖಲೆಗಳನ್ನು ಸಿಎಂ ಬಹಿರಂಗ ಪಡಿಸಿದರು.

“ಆಗ ಮೂಡಾದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ” ಪ್ರಶ್ನಿಸಿದರು.

“ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದರು.

“ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ-ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...