Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...