Homeಮುಖಪುಟಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ "ಅಪರೇಷನ್ ಹೋಳಿ" ಮಾಡುತ್ತಿದೆ: ಕಾಂಗ್ರೆಸ್ ಆರೋಪ

ಮಧ್ಯಪ್ರದೇಶ ಸರ್ಕಾರವನ್ನು ಬಿಜೆಪಿ “ಅಪರೇಷನ್ ಹೋಳಿ” ಮಾಡುತ್ತಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು “ಆಪರೇಷನ್ ಹೋಳಿ” ಎಂದು ಕರೆದು 14 ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಅಪಹರಿಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಬೆಂಬಲದ ನಾಲ್ಕು ಶಾಸಕರಾದ ಹರ್ದೀಪ್ ಡಾಂಗ್, ರಘುರಾಜ್ ಕನ್ಸಾನಾ ಮತ್ತು ಬಿಸಾಹುಲಾಲ್ ಸಿಂಗ್ ಮತ್ತು ಸ್ವತಂತ್ರ ಸದಸ್ಯೆ ಶೇರಾ ಭೈಯಾರನ್ನು ಕರ್ನಾಟಕದ ಪಂಚತಾರಾ ಹೋಟೆಲ್ ನಲ್ಲಿಟ್ಟಿದ್ದಾರೆ ಎಂಬ ವದಂತಿಗಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ ಕಾಂಗ್ರೆಸ್ ಮುಖಂಡರು ಬಿಜೆಪಿಯು “ರಾಜ್ಯದಿಂದ ರಾಜ್ಯ”ದ ಮೇಲೆ ಆಕ್ರಮಣ ಮಾಡುತ್ತಿದೆ. ರಾಜ್ಯಸಭೆಯ ಚುನಾವಣೆಗೆ ಹತ್ತಿರವಿರುವಾಗ ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ಕೆಲವು ಶಾಸಕರು ದೆಹಲಿ ಬಳಿಯ ಗುರಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಬಗ್ಗೆ ವರದಿಗಳು ಹೊರಬಿದ್ದಿವೆ. ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 25-35 ಕೋಟಿ ರೂ. ಲಂಚ ನೀಡಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿರುವ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ಆಡಳಿತದ ಹರಿಯಾಣದ ಪೊಲೀಸರು ಹೋಟೆಲ್‌ಗೆ ಅನುಮತಿಸುತ್ತಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಬಿಎಸ್‌ಪಿ ಶಾಸಕಿ ರಮಾಬಾಯಿ ದಿಗ್ವಿಜಯ ಸಿಂಗ್ ಅವರ ಪುತ್ರ ಸೇರಿದಂತೆ ಕಾಂಗ್ರೆಸ್ ಮಂತ್ರಿಗಳ ಬೆಂಗಾವಲಿನೊಂದಿಗೆ ಐಟಿಸಿ ಗ್ರ್ಯಾಂಡ್ ಭಾರತ್‌ ಹೋಟೆಲ್‌ನಿಂದ ತನ್ನ ಬ್ಯಾಗುಗಳೊಂದಿಗೆ ಹೊರಬಂದಿದ್ದರು.

“ಕಾಂಗ್ರೆಸ್ ಸರ್ಕಾರವು 15 ವರ್ಷಗಳಿಂದ ನಡೆಯುತ್ತಿರುವ ಲ್ಯಾಂಡ್ ಮಾಫಿಯಾ, ಚಿಟ್ ಫಂಡ್ ಮಾಫಿಯಾ, ಸುಲಿಗೆ ಮಾಫಿಯಾದಂತಹ ಮಾಫಿಯಾಗಳನ್ನು ನಿಲ್ಲಿಸಿದೆ, ಅವುಗಳ ಕುರಿತು ಸಾಕ್ಷ್ಯ ಸಂಗ್ರಹಿಸಿದೆ. ಇದರಿಂದ ಜೈಲಿನ ಕಂಬಿಗಳಿಗೆ ಹೆದರಿ ಮಧ್ಯಪ್ರದೇಶದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಅಮಿತ್ ಶಾ, ಶಿವರಾಜ್ ಸಿಂಗ್‌ ಚೌಹಾಣ್‌ ಮತ್ತು ಎಂಎಲ್ ಖಟ್ಟರ್ ಅವರೇ, 12 ಶಾಸಕರನ್ನು ವಿಶೇಷ ವಿಮಾನದಲ್ಲಿ ಗುರಗಾಂವ್ ಗೆ ಕರೆದೊಯ್ದವರು ಯಾರು ಎಂದು ದಯವಿಟ್ಟು ಹೇಳುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಮಧ್ಯಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಸದಸ್ಯರಾಗಿ ದಿಗ್ವಿಜಯ್‌ ಸಿಂಗ್‌ ಮುಂದುವರೆಯಲು ಆಡುತ್ತಿರು ನಾಟಕ ಎಂದು ಕರೆದಿದ್ದಾರೆ.

ವಿಶೇಷ ವಿಮಾನದ ಮೂಲಕ ತನ್ನನ್ನು ಮತ್ತು ಇತರರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ಆರೋಪವನ್ನು ರಮಾಬಾಯಿ ನಿರಾಕರಿಸಿದ್ದಾರೆ. ಅಲ್ಲದೆ ತಾನು ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. “ರಾಜ್ಯ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಅವರು ನನ್ನನ್ನು ಮಂತ್ರಿಯನ್ನಾಗಿ ಮಾಡಲು ಬಯಸಿದರೆ ನಾನು ತಯಾರಿದ್ದೇನೆ” ಎಂದೂ ಸಹ ಅವರು ಹೇಳಿದ್ದಾರೆ.

230 ಸದಸ್ಯರ ಮದ್ಯಪ್ರದೇಶದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್, ಇಬ್ಬರು ಬಿಎಸ್ಪಿ, ಒಬ್ಬರು ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರು. ಬಿಜೆಪಿಗೆ 107 ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...